Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
dk-shivakumar-karnataka-cm-panchamukhi-anjaneya-temple

ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಹಾಗೇ ಬದಲಾಯ್ತು ಡಿ ಕೆ ಶಿವಕುಮಾರ್ ಲಕ್‌

Sumalatha Ambareesh : ರಾಜ್ಯಸಭೆ ಚುನಾವಣಾ ಕಣಕ್ಕೆ ಸುಮಲತಾ ಅಂಬರೀಷ್ ಪ್ರವೇಶ

BREAKING : ನಾಳೆ ಕರ್ನಾಟಕದ ನೂತನ `CM’ ಆಗಿ ಡಿಕೆಶಿ ಪದಗ್ರಹಣ : ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್
KARNATAKA

‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟ‌ರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದರು. ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ.

ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಾಲೈದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ದೇವಸ್ಥಾನವು ಪ್ರತಿವರ್ಷ ಅಂದಾಜು ರೂ. 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟ‌ರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಇದಲ್ಲದೇ ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಪ್ರತ್ಯೇಕ ಯೋಜನೆಯನ್ನು ಕೂಡ ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಜರಾಯಿ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಅಭಿವೃದ್ಧಿ ಕಾಮಗಾರಿಗಳಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಲಭ್ಯವಿರುವ 87 ಎಕರೆ ಪ್ರದೇಶದಲ್ಲಿ ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸಬಹುದಾದ ಸಮಗ್ರ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಸವದತ್ತಿ ಶಾಸಕರಾದ ಶ್ರೀ ವಿಶ್ವಾಸ್ ವೈದ್ಯ, ಮಾಜಿ ಶಾಸಕರಾದ ಶ್ರೀ ಆರ್ ವಿ ಪಾಟೀಲ್, ಧಾರ್ಮಿಕ ದತ್ತಿ ಆಯುಕ್ತರಾದ ಶ್ರೀ ಬಸವರಾಜೇಂದ್ರ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲು ಜಕಾತಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’

BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

dk-shivakumar-karnataka-cm-panchamukhi-anjaneya-temple

ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಹಾಗೇ ಬದಲಾಯ್ತು ಡಿ ಕೆ ಶಿವಕುಮಾರ್ ಲಕ್‌

3 Mins Read

Sumalatha Ambareesh : ರಾಜ್ಯಸಭೆ ಚುನಾವಣಾ ಕಣಕ್ಕೆ ಸುಮಲತಾ ಅಂಬರೀಷ್ ಪ್ರವೇಶ

3 Mins Read

BREAKING : ನಾಳೆ ಕರ್ನಾಟಕದ ನೂತನ `CM’ ಆಗಿ ಡಿಕೆಶಿ ಪದಗ್ರಹಣ : ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ.!

1 Min Read
Recent News
dk-shivakumar-karnataka-cm-panchamukhi-anjaneya-temple

ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಹಾಗೇ ಬದಲಾಯ್ತು ಡಿ ಕೆ ಶಿವಕುಮಾರ್ ಲಕ್‌

Sumalatha Ambareesh : ರಾಜ್ಯಸಭೆ ಚುನಾವಣಾ ಕಣಕ್ಕೆ ಸುಮಲತಾ ಅಂಬರೀಷ್ ಪ್ರವೇಶ

BREAKING : ನಾಳೆ ಕರ್ನಾಟಕದ ನೂತನ `CM’ ಆಗಿ ಡಿಕೆಶಿ ಪದಗ್ರಹಣ : ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ.!

SHOCKING : ಮೊಬೈಲ್‌ ನಲ್ಲಿ `IPL’ ಲೈವ್ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ ಥಾರ್ ಕಾರು : ಯುವಕ ಸ್ಥಳದಲ್ಲೇ ಸಾವು.!

State News
dk-shivakumar-karnataka-cm-panchamukhi-anjaneya-temple KARNATAKA

ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಹಾಗೇ ಬದಲಾಯ್ತು ಡಿ ಕೆ ಶಿವಕುಮಾರ್ ಲಕ್‌

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಪ್ರಕ್ರಿಯೆಯು ಮಹತ್ವದ…

Sumalatha Ambareesh : ರಾಜ್ಯಸಭೆ ಚುನಾವಣಾ ಕಣಕ್ಕೆ ಸುಮಲತಾ ಅಂಬರೀಷ್ ಪ್ರವೇಶ

BREAKING : ನಾಳೆ ಕರ್ನಾಟಕದ ನೂತನ `CM’ ಆಗಿ ಡಿಕೆಶಿ ಪದಗ್ರಹಣ : ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ.!

DK Shivakumar : ಸಾಮಾನ್ಯ ಕೃಷಿ ಹಿನ್ನೆಲೆಯಿಂದ ಮುಖ್ಯಮಂತ್ರಿ ಗದ್ದುಗೆಯವರೆಗೆ ಡಿ ಕೆ ಶಿವಕುಮಾರ್ ನಡೆದು ಬಂದ ಹಾದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.