Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ
KARNATAKA

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಜಾಗತಿಕ ಮಟ್ಟದ ಪ್ರಸಿದ್ಧ ಔಷಧ ತಯಾರಿಕಾ ಕಂಪನಿ ‘ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ʼ ಭಾರತದಲ್ಲಿ ಟೈಪ್ 2 ಮಧುಮೇಹ ಹೊಂದಿರುವ ರೋಗಿಗಳ ಚಿಕಿತ್ಸೆಗಾಗಿ ‘ಓಬೆಡಾ’ ಎಂಬ ಹೊಸ ಮಾತ್ರೆಯನ್ನು ಬಿಡುಗಡೆ ಮಾಡಿದೆ. ಇದು ‘ಓರಲ್ ಸೆಮಾಗ್ಲುಟೈಡ್ ಬಯೋಸಿಮಿಲರ್’ ಔಷಧವಾಗಿದ್ದು, ಬಾಯಿಯ ಮೂಲಕ ಸೇವಿಸುವ ಮಾತ್ರೆಯಾಗಿದೆ.

ಇತ್ತೀಚೆಗಷ್ಟೇ ಡಾ. ರೆಡ್ಡೀಸ್ ಕಂಪನಿಯು ಭಾರತ ಮತ್ತು ಕೆನಡಾದಲ್ಲಿ ಮಧುಮೇಹಕ್ಕಾಗಿ ‘ಸೆಮಾಗ್ಲುಟೈಡ್ ಇಂಜೆಕ್ಷನ್’ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಅದೇ ಔಷಧಿಯನ್ನು ಮಾತ್ರೆಯ ರೂಪದಲ್ಲಿ ಪರಿಚಯಿಸುವ ಮೂಲಕ ರೋಗಿಗಳಿಗೆ ಚಿಕಿತ್ಸೆಯನ್ನು ಇನ್ನಷ್ಟು ಸುಲಭಗೊಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ನಡೆಸಿದ ‘ಇಂಡಿಯಾಬ್’ ಅಧ್ಯಯನದ ಪ್ರಕಾರ, ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಒಂದು. ಭಾರತದಲ್ಲಿ ಪ್ರಸ್ತುತ 10.1 ಕೋಟಿಗೂ ಹೆಚ್ಚು ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದಾರೆ. ಇದಕ್ಕಿಂತ ಆತಂಕಕಾರಿ ವಿಚಾರವೆಂದರೆ, ಸುಮಾರು 13.6 ಕೋಟಿ ಜನರು ಮಧುಮೇಹದ ಅಂಚಿನಲ್ಲಿದ್ದಾರೆ ಅಂದರೆ ಪ್ರೀ-ಡಯಾಬಿಟಿಕ್ ಆಗಿದ್ದಾರೆ. ಜೊತೆಗೆ, ಶೇ. 40ರಷ್ಟು ವಯಸ್ಕರು ಹೊಟ್ಟೆಯ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದು, ಇವರಿಗೂ ಮಧುಮೇಹ ಬರುವ ಅಪಾಯ ಹೆಚ್ಚಿದೆ. ಇಂತಹ ಪರಿಸ್ಥಿತಿಯಲ್ಲಿ ಮಧುಮೇಹವನ್ನು ನಿಯಂತ್ರಿಸುವುದು ವೈದ್ಯಕೀಯ ಲೋಕಕ್ಕೆ ದೊಡ್ಡ ಸವಾಲಾಗಿದೆ.

ಓಬೆಡಾ ಮಾತ್ರೆಯ ಉಪಯೋಗವೇನು?

ಓರಲ್ ಸೆಮಾಗ್ಲುಟೈಡ್ ಔಷಧಿಯು ಜಿಎಲ್‌ಪಿ-1 ಆರ್‌ಎ (ಗ್ಲುಕಗನ್-ಲೈಕ್ ಪೆಪ್ಟೈಡ್-1 ರಿಸೆಪ್ಟರ್ ಅಗೊನಿಸ್ಟ್) ವರ್ಗಕ್ಕೆ ಸೇರಿದೆ. ಟೈಪ್ 2 ಮಧುಮೇಹ ಹೊಂದಿರುವ ವಯಸ್ಕರು ಸರಿಯಾದ ಆಹಾರ ಮತ್ತು ವ್ಯಾಯಾಮದ ಜೊತೆಗೆ ಈ ಮಾತ್ರೆಯನ್ನು ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವು ಅತ್ಯುತ್ತಮವಾಗಿ ನಿಯಂತ್ರಣಕ್ಕೆ ಬರುತ್ತದೆ. ಇದು ಭವಿಷ್ಯದಲ್ಲಿ ಬರಬಹುದಾದ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ಕ್ಲಿನಿಕಲ್ ಪ್ರಯೋಗಗಳಲ್ಲಿ ಯಶಸ್ವಿ

ಭಾರತದ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಅನುಮತಿಯೊಂದಿಗೆ ಡಾ. ರೆಡ್ಡೀಸ್ ಕಂಪನಿಯು 288 ಮಧುಮೇಹ ರೋಗಿಗಳ ಮೇಲೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿತ್ತು. ಈ ಪ್ರಯೋಗಗಳಲ್ಲಿ ‘ಓಬೆಡಾ’ ಮಾತ್ರೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುವಲ್ಲಿ, ತೂಕ ಇಳಿಸುವಲ್ಲಿ ಮತ್ತು ಒಟ್ಟಾರೆ ಮಧುಮೇಹ ನಿಯಂತ್ರಣದಲ್ಲಿ (ಎಚ್‌ಬಿಎ1ಸಿ ಮಟ್ಟವನ್ನು ಶೇ. 7ಕ್ಕಿಂತ ಕಡಿಮೆ ಮಾಡುವಲ್ಲಿ) ಅತ್ಯುತ್ತಮವಾಗಿ ಕೆಲಸ ಮಾಡಿದೆ. ಅಲ್ಲದೆ, ಇದು ಸೇವಿಸಲು ಸಂಪೂರ್ಣ ಸುರಕ್ಷಿತವಾಗಿದೆ ಎಂಬುದು ದೃಢಪಟ್ಟಿದೆ.

ಮಾತ್ರೆಯ ದರ ಎಷ್ಟು?

ಈ ‘ಓಬೆಡಾ’ ಮಾತ್ರೆಗಳನ್ನು ದಿನಕ್ಕೊಮ್ಮೆ ತೆಗೆದುಕೊಳ್ಳುವಂತೆ ವೈದ್ಯರು ಶಿಫಾರಸು ಮಾಡುತ್ತಾರೆ. ಇದು 3 mg, 7 mg ಮತ್ತು 14 mg ಸಾಮರ್ಥ್ಯಗಳಲ್ಲಿ ಲಭ್ಯವಿದೆ. 3 mg ಮಾತ್ರೆಯ ಬೆಲೆ 99 ರೂ. ಆಗಿದ್ದು, 7 mgಗೆ 135 ರೂ. ಹಾಗೂ 14 mgಗೆ 225 ರೂ. ದರವಿದೆ.

ಈ ಔಷಧದ ಬಗ್ಗೆ ವಿವರ ನೀಡಿರುವ ಡಾ. ರೆಡ್ಡೀಸ್‌ನ ಗ್ಲೋಬಲ್ ಜೆನೆರಿಕ್ಸ್ ವಿಭಾಗದ ಸಿಇಒ ಎಂ.ವಿ. ರಮಣ ಅವರು, “ಮಧುಮೇಹ ರೋಗಿಗಳಿಗೆ ಸುಧಾರಿತ ಚಿಕಿತ್ಸೆ ಒದಗಿಸುವ ನಮ್ಮ ಪ್ರಯತ್ನದಲ್ಲಿ ಈ ‘ಓಬೆಡಾ’ ಮಾತ್ರೆಯ ಬಿಡುಗಡೆಯು ಒಂದು ಪ್ರಮುಖ ಹೆಜ್ಜೆಯಾಗಿದೆ. ಪ್ರತಿಯೊಬ್ಬ ರೋಗಿಯ ಆರೋಗ್ಯ ಸ್ಥಿತಿ ಭಿನ್ನವಾಗಿರುತ್ತದೆ. ಹೀಗಾಗಿ ಅವರಿಗೆ ಸೂಕ್ತವಾದ ಚಿಕಿತ್ಸಾ ಆಯ್ಕೆಗಳನ್ನು ನೀಡುವುದು ನಮ್ಮ ಉದ್ದೇಶ. ಈ ಔಷಧವನ್ನು ನಮ್ಮದೇ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಭಾರತದ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧ ಒದಗಿಸಲು ನಾವು ಬದ್ಧರಾಗಿದ್ದೇವೆ,” ಎಂದು ತಿಳಿಸಿದರು.

ಡಾ. ರೆಡ್ಡೀಸ್‌ನ ‘ಓಬೆಡಾ’ (ಸೆಮಾಗ್ಲುಟೈಡ್ ಮಾತ್ರೆ) ಕೇವಲ ವೈದ್ಯರ ಶಿಫಾರಸಿನ ಮೇರೆಗೆ ಮಾತ್ರ ಲಭ್ಯವಿರುವ ಔಷಧವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರೋಗಿಗಳು ತಮ್ಮ ವೈದ್ಯರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

1984ರಲ್ಲಿ ಸ್ಥಾಪನೆಯಾದ ಡಾ. ರೆಡ್ಡೀಸ್, ಭಾರತದ ಹೈದರಾಬಾದ್ ಮೂಲದ ಜಾಗತಿಕ ಫಾರ್ಮಾ ಕಂಪನಿಯಾಗಿದ್ದು, ಕೈಗೆಟುಕುವ ದರದಲ್ಲಿ ನವೀನ ಔಷಧಿಗಳನ್ನು ಇದು ಒದಗಿಸುತ್ತಿದೆ. ಜಠರ, ಹೃದಯ, ಮಧುಮೇಹ, ಕ್ಯಾನ್ಸರ್ (ಆಂಕೊಲಾಜಿ) ಮತ್ತು ಚರ್ಮರೋಗಗಳಿಗೆ ಸಂಬಂಧಿಸಿದ ಔಷಧಿಗಳ ತಯಾರಿಕೆಯಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ. ಭಾರತದ ಜೊತೆಗೆ ಅಮೆರಿಕಾ, ಯುರೋಪ್, ಚೀನಾ, ಬ್ರೆಜಿಲ್ ಮತ್ತು ರಷ್ಯಾ ದೇಶಗಳಲ್ಲೂ ಕಂಪನಿ ತನ್ನ ಮಾರುಕಟ್ಟೆ ವಿಸ್ತರಿಸಿದೆ.

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

ಬೆಳಗಾವಿಯ ಮನೆಯಲ್ಲಿ ಗುಂಡು ಹಾರಿಸಿಕೊಂಡು KLE ಆಸ್ಪತ್ರೆ ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

2 Mins Read

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

2 Mins Read

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

1 Min Read
Recent News

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

State News
KARNATAKA

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ (Dubare Elephant Camp) ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ…

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.