Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM

ನೀವು ಯಾವ ಬ್ಯಾಂಕಿನಿಂದ ಎಷ್ಟು ಬಾರಿ ‘ಹಣ’ ವಿತ್ ಡ್ರಾ ಮಾಡ್ಬೋದು.? ಇಲ್ಲಿದೆ ಮಾಹಿತಿ.!

08/11/2025 10:12 PM

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಅರಣ್ಯ ಭೂಮಿ ಒತ್ತುವರಿದಾರರಿಗೆ, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್
KARNATAKA

GOOD NEWS: ರಾಜ್ಯದ ಅರಣ್ಯ ಭೂಮಿ ಒತ್ತುವರಿದಾರರಿಗೆ, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್

By kannadanewsnow0909/10/2024 2:26 PM

ದಾಂಡೇಲಿ : ಭೂಮಿಗೆ ಕಾಡು ಭೂಷಣ, ಕಾಡಿಗೆ ವನ್ಯ ಜೀವಿ, ಸಸ್ಯ ಸಂಕುಲವೇ ಭೂಷಣ. ಇಂತಹ ವನ, ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ದಾಂಡೇಲಿಯಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಮಾನವನ ಬದುಕಿಗೆ ಆಧಾರವಾಗಿರುವ ಅರಣ್ಯ ನಾಶ, ಒತ್ತುವರಿ ಮಾಡಬಾರದು ಎಂದರು.

ಇಡೀ ದೇಶದ ಹವಾಮಾನದ ಮೇಲೆ ಪರಿಣಾಮಬೀರಿ, ಮಳೆ ಉತ್ತಮವಾಗಿ ಬೀಳಲು ಪಶ್ಚಿಮಘಟ್ಟಗಳನ್ನು ಎಲ್ಲರೂ ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ನೀಡಬೇಕು ಎಂದರು.

ಇಂದು ಬೆಳಗ್ಗೆ ತಾವು ದಾಂಡೇಲಿ ಸಮೀಪದ ಕೇಳಪಾನಿಗೆ ಭೇಟಿ ನೀಡಿದಾಗ ಆದ ಆನಂದ ಅಪರಿಮಿತ, ಇದು ಅತ್ಯಂತ ರಮಣೀಯ ತಾಣ, ಅತ್ಯದ್ಭುತ ತಾಣ. ಇದು ಪ್ರವಾಸಿಗರ ಸ್ವರ್ಗ ಎಂದು ಬಣ್ಣಿಸಿದರು.

7-8 ದಶಕಗಳ ಹಿಂದೆ ಕೆಲವರು ವನ್ಯ ಜೀವಿಗಳನ್ನು ಕೊಂದು, ಸತ್ತ ಪ್ರಾಣಿಯ ಜೊತೆ ಫೋಟೋ ತೆಗೆಸಿಕೊಂಡು ಮನೆಯಲ್ಲಿ ತೂಗುಹಾಕುತ್ತಿದ್ದರು. ಮೋಜಿಗಾಗಿ ಬೇಟೆ ಆಡುತ್ತಿದ್ದರು. ಆದರೆ 1972ರಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಬಳಿಕ ಇಂತಹ ಬೇಟೆ, ಕಳ್ಳಬೇಟೆ ನಿಗ್ರಹವಾಗಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.80ರಷ್ಟು ಅರಣ್ಯವಿದೆ. ವನ, ವನ್ಯಜೀವಿಗಳ ಜೊತೆ ಸಹಬಾಳ್ವೆ ನಡೆಸುವುದರಲ್ಲಿ ಈ ಜಿಲ್ಲೆಯ ಜನರ ಪಾತ್ರ ಮಹತ್ವದ್ದಾಗಿದ್ದು, ಇಷ್ಟು ಬೃಹತ್ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಿರುವ ಎಲ್ಲರೂ ಅಭಿನಂದನಾರ್ಹರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಹಸಿರೇ ಕಾಣುತ್ತದೆ. ಪಶ್ಚಿಮಘಟ್ಟದ ಸುಂದರ ತಾಣದಲ್ಲಿರುವ ಜಿಲ್ಲೆಯ ಜನರು ಪುಣ್ಯವಂತರು ಎಂದು ಈಶ್ವರ ಖಂಡ್ರೆ ಹೇಳಿದರು.

ನಮ್ಮ ಭೂಗ್ರಹಕ್ಕೆ ವಸುಂಧರೆ ಎನ್ನುವ ಹೆಸರಿದೆ. ಅಂದರೆ ಚಿನ್ನ, ರತ್ನ, ವಜ್ರ, ವೈಢೂರ್ಯಗಳನ್ನು ಹೊಂದಿರುವವಳು ಎಂದರ್ಥ. ಈ ಭೂಮಿ ರತ್ನಗರ್ಭವಷ್ಟೇ ಅಲ್ಲ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಮಾನವ ಸಂಕುಲಕ್ಕೂ ಆಶ್ರಯಧಾತೆ ಎಂದರು.

3 ಎಕರೆಗಿಂತ ಕಡಿಮೆ ಒತ್ತುವರಿ ಒಕ್ಕಲೆಬ್ಬಿಸುವುದಿಲ್ಲ

2015ಕ್ಕೆ ಮೊದಲು ತಮ್ಮ ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ಬಡ ಜನರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಸದಾಗಿ ಒತ್ತುವರಿ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ದೊಡ್ಡ ಒತ್ತುವರಿ ತೆರವು ಮಾಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಹಾಕಿರುವವರ ಯಾವುದೇ ಅರ್ಜಿ ಪುನರ್ ಪರಿಶೀಲನೆಯಲ್ಲಿದ್ದರೆ ಅಂತಹವರ ಒತ್ತುವರಿ ತೆರವು ಮಾಡಿಸದಂತೆ ಸೂಚಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ಕಳೆದ ವಿಧಾನಮಂಡಳದ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯಿದೆ ಜಾರಿಗೆ 25 ವರ್ಷಕ್ಕಿಂತ ಹಿಂದೆ ಅರಣ್ಯದಲ್ಲಿದ್ದವರಿಗೆ ಹಕ್ಕು ನೀಡಬೇಕು ಎಂದು ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದರು.

ವನ್ಯಜೀವಿಗಳ ಮಹತ್ವ ತಿಳಿಸಲು ಪ್ರತಿ ವರ್ಷ ಅ.2ರಿಂದ ಅ.8ರವರೆಗೆ ವನ್ಯ ಜೀವಿ ಸಪ್ತಾಹ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್ ನಿಂದ ಲಾಲ್ ಬಾಗ್ ವರೆಗೆ ಜಾಗೃತಿ ನಡಿಗೆಯನ್ನು ಗಾಂಧೀ ಜಯಂತಿ ದಿನ ನಡೆಸುವುದರೊಂದಿಗೆ ಈ ಕಾರ್ಯಕ್ರಮ ಉದ್ಘಾಟನೆಯಾಗಿತ್ತು. ಇಂದು ಇಲ್ಲಿ ಸಮಾರೋಪಗೊಳ್ಳುತ್ತಿದೆ ಎಂದರು.

ಹಾವು ಕಚ್ಚಿ ಸಾವನ್ನಪ್ಪುವವರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಂತೆ ಸಾರ್ವಜನಿಕರಿಂದ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಬೇಡಿಕೆ ಇದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಕಾಡು ಹಂದಿ, ನವಿಲುಗಳಿಂದ ಆಗುತ್ತಿರುವ ಬೆಳೆ ಹಾನಿಯ ಪರಿಹಾರ ಹೆಚ್ಚಳ ಮಾಡಬೇಕು, ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂಬ ಬೇಡಿಕೆ ರೈತರಿಂದ ಬಂದಿದೆ. ಈ ಕುರಿತಂತೆ ಒಂದು ಸಮಿತಿ ಮಾಡಿ ವರದಿ ಬಂದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಹತ್ತಾರು ಎಕರೆ ಒತ್ತುವರಿ ಮಾಡಿದವರು ಯಾರೂ ಇಲ್ಲ. ಜೀವಿನೋಪಾಯಕ್ಕೆ 1 ಎಕರೆ ಅರಣ್ಯ ಜಮೀನು ಒತ್ತುವರಿ ಮಾಡಿದ ಬಡವರಿದ್ದಾರೆ. ಅವರ ಜೀವನೋಪಾಯಕ್ಕೆ ತೊಂದರೆ ನೀಡದಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ ಸರ್ಕಾರಕ್ಕೆ ಮತ್ತು ಅರಣ್ಯ ಸಚಿವರಿಗೆ ಧನ್ಯವಾದ ಅರ್ಪಿಸಿದ ಅವರು, ನಮ್ಮ ಭಾಗದಲ್ಲಿ ಶೇ.80ರಷ್ಟು ಅರಣ್ಯಪ್ರದೇಶವಿದ್ದು, ನಮ್ಮ ಜನರೇ ಇದನ್ನು ಸಂರಕ್ಷಿಸಿದ್ದಾರೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಿದ್ಯಾವಂತರಾದ 75 ಸಾವಿರಕ್ಕೂ ಹೆಚ್ಚು ಜನರು ಅರಣ್ಯದಲ್ಲೇ ವಾಸಿಸುತ್ತಿದ್ದಾರೆ. ಅವರು ಹಲವು ದಶಕಗಳಿಂದ ಅರಣ್ಯದಲ್ಲೇ ಬದುಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯನ್ನು ಇತರ ಜಿಲ್ಲೆಯಂತೆ ನೋಡಬಾರದು. ನಮ್ಮ ಬಡ ಜನರಿಗೆ ನ್ಯಾಯ ದೊರಕಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ-ಕಾಲೇಜು ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇದಕ್ಕೂ ಮುನ್ನ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಅನುಮೋದಿತ ಕಾರ್ಯಯೋಜನೆಯ ಪ್ರಕಾರ ಅರಣ್ಯ ಪ್ರದೇಶಗಳ ಸತ್ತ ಮತ್ತು ಬಿದ್ದ ಮರವನ್ನು ಹೊರತೆಗೆಯುವ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಬಳಿಕ ದಾಂಡೇಲಿಯ ಸರ್ಕಾರಿ ಟಿಂಬರ್ ಡಿಪೋದಲ್ಲಿ ನಾಟಾ ಸಂಗ್ರಹ ಮತ್ತು ಇ-ಹರಾಜು ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಶಾಲಾ ಶಿಕ್ಷಣದಲ್ಲಿ ನೀತಿ ನಾವೀನ್ಯತೆ ವೇಗಗೊಳಿಸಲು ಮಹತ್ವದ ಕ್ರಮ: ‘J-PAL South Asia’ದೊಂದಿಗೆ ಒಡಂಬಡಿಕೆ

ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM2 Mins Read

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM2 Mins Read

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

08/11/2025 8:33 PM3 Mins Read
Recent News

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM

ನೀವು ಯಾವ ಬ್ಯಾಂಕಿನಿಂದ ಎಷ್ಟು ಬಾರಿ ‘ಹಣ’ ವಿತ್ ಡ್ರಾ ಮಾಡ್ಬೋದು.? ಇಲ್ಲಿದೆ ಮಾಹಿತಿ.!

08/11/2025 10:12 PM

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM

“ಭಾರತ ವಿಶ್ವ ನಾಯಕನಾಗಲಿದೆ, ಸಮಾಜವನ್ನ ಕಾನೂನಿನಿಂದಲ್ಲ, ಕರುಣೆಯಿಂದ ನಡೆಸಲಾಗ್ತಿದೆ” ; ಮೋಹನ್ ಭಾಗವತ್

08/11/2025 9:45 PM
State News
KARNATAKA

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

By kannadanewsnow0908/11/2025 10:18 PM KARNATAKA 2 Mins Read

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಬೇಧ ಭಾವ ಮಾಡದೇ, ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣಬೇಕು. ಅದೇ ಕಾರಣಕ್ಕೆ ಬಡವ-ಬಲ್ಲಿದ, ಮೇಲು-ಕೀಳು…

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

08/11/2025 8:33 PM

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

08/11/2025 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.