Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರು, ಜನತೆಗೆ ಗುಡ್ ನ್ಯೂಸ್ : ಕೃಷಿಗೆ 7 ತಾಸು, ಗೃಹ, ಕೈಗಾರಿಕೆಗಳಿಗೆ ನಿರಂತರ `ವಿದ್ಯುತ್ ಪೂರೈಕೆ.!
KARNATAKA

ರಾಜ್ಯದ ರೈತರು, ಜನತೆಗೆ ಗುಡ್ ನ್ಯೂಸ್ : ಕೃಷಿಗೆ 7 ತಾಸು, ಗೃಹ, ಕೈಗಾರಿಕೆಗಳಿಗೆ ನಿರಂತರ `ವಿದ್ಯುತ್ ಪೂರೈಕೆ.!

By kannadanewsnow5719/02/2025 5:36 AM

ದಾವಣಗೆರೆ: : ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ; ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದÀ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

3000 ಪವರ್ ಮ್ಯಾನ್ ನೇಮಕ

ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಎಸ್ಕಾಂಗಳು ನಷ್ಟದಲ್ಲಿಲ್ಲ

ಇಂಧನ ಇಲಾಖೆಯಲ್ಲಿನ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ, ಆದರೆ ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕಂಪನಿಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದರು.

ವಿದ್ಯುತ್ ದರ ಪರಿಷ್ಕರಣೆ ಕೆಇಆರ್‍ಸಿಗೆ;

ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಕೆಇಆರ್‍ಸಿ ಮಾಡಲಿದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆಯುವ ಮೂಲಕ ದರ ಏರಿಕೆ ನಿರ್ಣಯಗಳನ್ನು ಕೆಇಆರ್‍ಸಿ ನಿರ್ಧರಿಸಲಿದೆ. ಯಾರದೂ ಕೂಡ ಹಸ್ತಕ್ಷೇಪ ಇರುವುದಿಲ್ಲ, ಕಳೆದ ವರ್ಷ ಯಾವುದೇ ವಿದ್ಯುತ್ ದರ ಏರಿಕೆ ಮಾಡಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಜ್ಯೋತಿ
ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ನೊಂದಣಿಯಾದ 433897 ಆರ್.ಆರ್.ಸಂಖ್ಯೆಗಳಿದ್ದು ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಗೃಹಜ್ಯೋತಿಯಲ್ಲಿವೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿಯಷ್ಟು ಹಣವನ್ನು ಗ್ರಾಹಕರಿಗೆ ಸಬ್ಸಿಡಿ ನೀಡಿದ್ದು ಸರ್ಕಾರ ಇದನ್ನು ಭರಿಸಿದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್
ರೈತರ ಕೃಷಿ ಪಂಪ್ ಸೆಟ್‍ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್‍ಸೆಟ್‍ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ

ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕುಸುಮ್ ಬಿ ಯೋಜನೆ

 ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್‍ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್‍ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Good news for farmers and people of the state: 7 hours for agriculture industries. uninterrupted power supply to homes
Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.