Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ | Kiara Advani-Sidharth Malhotra

15/07/2025 11:20 PM

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

15/07/2025 10:05 PM

Vitamin B12 : ವಿಟಮಿನ್ ಬಿ12 ಕೊರತೆ ಸಾವಿಗೆ ಕಾರಣವಾಗ್ಬೋದೇ.? ದೇಹಕ್ಕೆ ಎಷ್ಟು ಹಾನಿಕಾರಕ ಎಂದು ನಿಮ್ಗೆ ತಿಳಿದಿದ್ಯಾ.?

15/07/2025 10:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರ ಮಕ್ಕಳಿಗೆ ಗುಡ್ ನ್ಯೂಸ್ : `ವಿದ್ಯಾ ಸಹಕಾರ’ ಯೋಜನೆಯಡಿ 60 ಲಕ್ಷ ರೂ.ವರೆಗೆ ಶೈಕ್ಷಣಿಕ ಸಾಲ!
KARNATAKA

ರೈತರ ಮಕ್ಕಳಿಗೆ ಗುಡ್ ನ್ಯೂಸ್ : `ವಿದ್ಯಾ ಸಹಕಾರ’ ಯೋಜನೆಯಡಿ 60 ಲಕ್ಷ ರೂ.ವರೆಗೆ ಶೈಕ್ಷಣಿಕ ಸಾಲ!

By kannadanewsnow5728/09/2024 5:28 AM

ಕೊಡಗು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಸಾಲ ಸಾಮಾನ್ಯವಾಗಿ ವಾಣಿಜ್ಯ ಬ್ಯಾಂಕುಗಳಲ್ಲಿ ಮಾತ್ರ ಪಡೆಯಲು ಅವಕಾಶವಿದೆ. ಆದರೆ ಜಿಲ್ಲೆಯ ರೈತರು ಮತ್ತು ಬ್ಯಾಂಕಿನ ಹಾಲಿ ಗ್ರಾಹಕರ ಮಕ್ಕಳು ದೇಶ ಮತ್ತು ವಿದೇಶದಲ್ಲಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದ್ಯಾಭ್ಯಾಸ ಸಾಲ ಪಡೆಯಲು ವಂಚಿತರಾಗಿರುವುದನ್ನು ಪರಿಗಣಿಸಿ ರೈತರ ಮಕ್ಕಳಿಗೆ  ಅನುಕೂಲವಾಗುವಂತೆ ಅವಶ್ಯವಿರುವ “ವಿದ್ಯಾ ಸಹಕಾರ” ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರೂ.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ.   

2023-24 ನೇ ಸಾಲಿನಲ್ಲಿ ಒಟ್ಟು ವ್ಯವಹಾರ ರೂ.2926.07 ಕೋಟಿ ದಾಖಲಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ರೂ 524.97 ಏರಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ.

ರೈತ ಸದಸ್ಯರ ಬೆಳೆ ಸಾಲದ ಬೇಡಿಕೆಯನ್ನು ಪೂರೈಸಲು ಅನುಕೂಲವಾಗುವಂತೆ ಬ್ಯಾಂಕು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಹಲ್‍ವರೆಗೆ ರೂ.1006.94 ಕೋಟಿ ಮೊತ್ತದ ಎನ್.ಸಿ.ಎಲ್. ಮಂಜೂರಾತಿ ಮಾಡಿ ಈಗಾಗಲೇ ರೂ 730.36 ಕೋಟಿ ಅರ್ಹ ರೈತ ಸದಸ್ಯರಿಗೆ ಸಾಲ ವಿತರಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಯಂತೆ ರೂ 3 ಲಕ್ಷ ಮೇಲ್ಪಟ್ಟು ರೂ 5 ಲಕ್ಷ ದವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೆಸಿಸಿ ಸಾಲವನ್ನು ರಾಜ್ಯದ ಇತರ ಜಿಲ್ಲಾ ಡಿಸಿಸಿ ಬ್ಯಾಂಕುಗಳು ಸ್ವಂತ ಬಂಡವಾಳದಿಂದ ಸಾಲ ನೀಡಲು ಮುಂದೆ ಬಾರದಿದ್ದರು ಕೊಡಗು ಜಿಲ್ಲಾ ಬ್ಯಾಂಕು ಸ್ವಂತ ಬಂಡವಾಳದಿಂದ ಕೆಸಿಸಿ ಸಾಲ ರೂ.318 ಕೋಟಿ ವಿತರಣೆ ಮಾಡಿ ರಾಜ್ಯಕ್ಕೆ ಮಾದರಿಯಾಗಿರುತ್ತದೆಂದು ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ವಿವರಿಸಿದರು.

ಜಿಲ್ಲೆಯ ಸದಸ್ಯ ಸಹಕಾರ ಸಂಘಗಳಿಗೆ ಹಾಗೂ ಇತರ ಖಾಸಗಿ ಸಂಘ/ ಸಂಸ್ಥೆಗಳಿಗೆ ಅನುಕೂಲವಾಗುವಂತೆ ನಿವೇಶನ/ ಕಟ್ಟಡ ಖರೀದಿಗಾಗಿ 2024-25 ನೇ ಸಾಲಿನಿಂದ ಹೊಸ ಸಾಲ ಯೋಜನೆ ರೂಪಿಸಲಾಗಿದೆ. ಹಾಲಿ ನೀಡುತ್ತಿರುವ ಸೋಲರ್ ಅಳವಡಿಕೆಗೆ ಇರುವ ಸಾಲದ ಮಿತಿಯನ್ನು ರೂ 60 ಲಕ್ಷ ಗಳಿಗೆ ಹೆಚ್ಚಿಸಲಾಗಿದೆ.

ಹಾಗೂ ಸಿಸಿಟಿವಿ ಮತ್ತು ಇನ್ವರ್ಟರ್ ಅಳವಡಿಕೆಗಾಗಿ ರೂ 60 ಲಕ್ಷಗಳವರೆಗೆ ಸಾಲ ನೀಡಿಕೆಗೆ ಹೊಸ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳಿಗೆ ನಬಾರ್ಡ್ ವತಿಯಿಂದ ಎಂಎಸ್‍ಸಿ ಸಾಲವನ್ನು ನೀಡುತ್ತಿದ್ದು, ಇತರೆ ಸಂಘಗಳು ಈ ಯೋಜನೆಯಿಂದ ವಂಚಿತರಾಗಿರುವುದರಿಂದ  ಸದಸ್ಯ ಸಹಕಾರ ಸಂಘಗಳು ಕೈಗೊಳ್ಳಲು ಉದ್ದೇಶಿಸಿರುವ ವಿವಿದ್ದೋದ್ದೇಶಿತ ಯೋಜನೆಗಳಿಗೆ (ಎಂಎಸ್‍ಸಿ) ಬ್ಯಾಂಕಿನಿಂದ ಯೋಜನಾ ವೆಚ್ಚದ ಶೇ.90 ರಷ್ಟು ಸಾಲವನ್ನು ಶೇ.4 ರಷ್ಟು ಬಡ್ಡಿ ಪ್ರೋತ್ಸಾಹಧನ ಹಾಗೂ ಗರಿಷ್ಠ ರೂ.2.50 ಲಕ್ಷಗಳಷ್ಟು ಅನುದಾನ ಸಹಿತ ಯೋಜನೆಯು ಕಾರ್ಯಗತದಲ್ಲಿದ್ದು, ಬ್ಯಾಂಕು ನಬಾರ್ಡ್ ಮತ್ತು ಎನ್‍ಸಿಡಿಸಿ ಯೋಜನೆಗಳಿಗೆ ಸರಿಸಮವಾಗಿ ಸದಸ್ಯ ಸಹಕಾರ ಸಂಘಗಳ ಯೋಜಿತ ಉದ್ದೇಶಗಳಿಗೆ ಒದಗಿಸಿಕೊಡುವ ಸಾಲ ಸೌಲಭ್ಯದ ಅನುಷ್ಠಾನಕ್ಕಾಗಿ ಬ್ಯಾಂಕು ರೂ.50 ಲಕ್ಷ ಮೊತ್ತವನ್ನು ಈಗಾಗಲೇ ಕಾಯ್ದಿರಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯ ಸಹಕಾರ ಸಂಘಗಳು ಬ್ಯಾಂಕು ರೂಪಿಸಿರುವ ಈ ವಿಶೇಷ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಬಾಂಡ್ ಗಣಪತಿ ಅವರು ಕೋರಿದ್ದಾರೆ.

2024ರ ಮಾರ್ಚ್ ಅಂತ್ಯಕ್ಕೆ ಬ್ಯಾಂಕಿನ ಅನುತ್ಪಾದಕ ಆಸ್ತಿಗಳು(ಎನ್‍ಪಿಎ) ಪ್ರಮಾಣವು  ಹೊರಬಾಕಿ ನಿಂತ ಸಾಲಕ್ಕೆ ಅನುತ್ಪಾದಕ ಆಸ್ತಿಯ ಪ್ರಮಾಣವು ಶೇ.1.88 ರಷ್ಟಿದ್ದು, ರಾಜ್ಯದ ಇತರ ಡಿಸಿಸಿ ಬ್ಯಾಂಕಿಗೆ ಹೋಲಿಸಿದಲ್ಲಿ ಅತೀ ಕಡಿಮೆ ಎನ್‍ಪಿಎ ಪ್ರಮಾಣ ಇರುವ ಬ್ಯಾಂಕು ಕೊಡಗು ಜಿಲ್ಲಾ ಸಹಕಾರ ಬ್ಯಾಂಕು ಎಂದು ಹೇಳಲು ಹೆಮ್ಮೆ ಪಡುತೇನೆಂದು ಎಂದು ಅಧ್ಯಕ್ಷರು ವಿವರಿಸಿದ್ದಾರೆ.

Good news for farmers' children: Educational loans up to 60 lakh rupees under ``Vidya Sahakar'' scheme! ರೈತರ ಮಕ್ಕಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ರೈತ ವಿದ್ಯಾನಿಧಿ’ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

15/07/2025 10:05 PM1 Min Read

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಭೆಯ ಪ್ರಮುಖ ಹೈಲೈಟ್ಸ್

15/07/2025 9:44 PM2 Mins Read

BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

15/07/2025 9:39 PM1 Min Read
Recent News

BREAKING: ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ | Kiara Advani-Sidharth Malhotra

15/07/2025 11:20 PM

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

15/07/2025 10:05 PM

Vitamin B12 : ವಿಟಮಿನ್ ಬಿ12 ಕೊರತೆ ಸಾವಿಗೆ ಕಾರಣವಾಗ್ಬೋದೇ.? ದೇಹಕ್ಕೆ ಎಷ್ಟು ಹಾನಿಕಾರಕ ಎಂದು ನಿಮ್ಗೆ ತಿಳಿದಿದ್ಯಾ.?

15/07/2025 10:04 PM

ನಾಳೆ ಮಧ್ಯಾಹ್ನ 2 ಗಂಟೆಗೆ ICSI CSEET-2025ರ ಫಲಿತಾಂಶ ಪ್ರಕಟ | ICSI CSEET Result

15/07/2025 9:56 PM
State News
KARNATAKA

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

By kannadanewsnow0915/07/2025 10:05 PM KARNATAKA 1 Min Read

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ವರ್ಗಾಯಿಸುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ…

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಭೆಯ ಪ್ರಮುಖ ಹೈಲೈಟ್ಸ್

15/07/2025 9:44 PM

BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

15/07/2025 9:39 PM

GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ

15/07/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.