ಬೆಂಗಳೂರು: ರೈತರಿಗೆ ( Farmer ) ಆರೋಗ್ಯ ಸೌಲಭ್ಯ ನೀಡುವ ‘ಯಶಸ್ವಿನಿ’ ಯೋಜನೆಯನ್ನು ( yashaswini scheme ) ನವೆಂಬರ್ 1 ರಂದು ಚಾಲನೆಗೊಳಿಸಲಾಗುವುದು. ಹೀಗೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಸುವ ಜೊತೆಗೆ 4000 ಅಂಗನವಾಡಿಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಣೆ ಮಾಡಿದ್ದಾರೆ.
ಅವರು ಇಂದು ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಆಯೋಜಿಸಿರುವ “ 50 ಹಾಸಿಗೆ ಸಾಮಥ್ರ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪಕೇಂದ್ರ”ದ ಹಾಗೂ “ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾ ಘಟಕದ ಉಪಕೇಂದ್ರ”ದ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು ತಲಾ 7-8 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳನ್ನು, ಬೆಡ್ ಗಳನ್ನು ಹೆಚ್ಚಿಸಲಾಗುವುದು. ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಮೊದಲೇ ಇದ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಟೆಲಿಮೆಡಿಸಿನ್ ಗೆ ಜೋಡಣೆ ಮಾಡುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.
ಆಯುಷ್ಮಾನ್ ಕಾರ್ಡ್ ಬಳಸಲು ಸರಳೀಕೃತ ನಿಯಮಗಳಿಗೆ ಶೀಘ್ರದಲ್ಲಿ ಆದೇಶ
ಇದಲ್ಲದೇ ಸುಮಾರು 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಾಗೂ ಬೆಂಗಳೂರಿನಲ್ಲಿ ವಲಯಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಬಡವರಿಗೆ ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದೆ. ಡಯಾಲಿಸಿಸ್ ಸೈಕಲ್ ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು.