Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ‘ಟಿಕೆಟ್ ದರ’ ಏರಿಕೆ, ಜುಲೈ 1ರಿಂದ್ಲೇ ಹೊಸ ದರ ಜಾರಿ!

24/06/2025 4:42 PM

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ

By kannadanewsnow5714/08/2024 11:45 AM

ಬೆಂಗಳೂರು: ಸೆಪ್ಟೆಂಬರ್‌ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಕಾಸಸೌಧದ ನಾಲ್ಕನೇ ಮಹಡಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ಥಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ, ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ” ಎಂದು ಭರವಸೆ ನೀಡಿದರು.

ಮುಂದುವರೆದು, “ರೈತರಿಗೆ ಜಮೀನು ಮಂಜೂರಾಗಿದ್ರೂ ಪೋಡಿ ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.

ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ರೂ ದುರಸ್ಥಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವ ಒತ್ತಡ ಇದೆ. ಅಲ್ಲದೆ, ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದ್ದು, ಇದಕ್ಕೆಂದು ಪ್ರಾಯೋಗಿಕ ಆ್ಯಪ್ ಸಿದ್ಧಪಡಿಸಲಾಗಿದೆ” ಎಂದರು

ದುರಸ್ಥಿ ಕೆಲಸವನ್ನು ಕಾಗದದಲ್ಲಿ ಕಾರ್ಯಗತಗೊಳಿಸಿದರೆ ನಮಗೂ ಯಾವುದೇ ಲೆಕ್ಕ ಸಿಗುವುದಿಲ್ಲ. ತಳಮಟ್ಟದ ಅಧಿಕಾರಿಗಳ ಇಚ್ಚೆಯಂತೆಯೇ ಕೆಲಸ ನಡೆಯುತ್ತೇ ವಿನಃ ಜನರಿಗೆ ನ್ಯಾಯ ಸಿಗಲ್ಲ. ಇದೇ ಕಾರಣಕ್ಕೆ ಡಿಜಿಟಲ್‌ ಆ್ಯಪ್ ಮೂಲಕ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. 1 to 5 ಹಾಗೂ 6 to 10 ಪೋಡಿ ದುರಸ್ಥಿ ಪ್ರಕರಣ ಬಾಕಿ ಇರುವ ಎಲ್ಲಾ ತಾಲೂಕುಗಲ್ಲೂ ನಾವೇ ಹುಡುಕಿ ದಾಖಲೆ ಕಡತ ಸಿದ್ದಪಡಿಸಬೇಕು ಎಂದು ತೀರ್ಮಾನಿಸಿದ್ದೇವೆ. ಹಾಸನದಲ್ಲಿ ಈಗಾಗಲೇ ಪ್ರಾಯೋಗಿಕ ಯೋಜನೆ ನಡೆಯುತ್ತಿದೆ. ಇದರ ಆಧಾರದ ಮೇಲೆ ಸೆಪ್ಟೆಂಬರ್‌ ತಿಂಗಳಿನಿಂದ ಜನರ ಅರ್ಜಿಗೆ ಕಾಯದೆ ನಾವೇ ಸ್ವಯಂ ಪ್ರೇರಣೆಯಿಂದ ಅಭಿಯಾನದ ಮಾದರಿಯಲ್ಲಿ 1 to 5 ಹಾಗೂ 6 to 10 ಪೋಡಿ ದುರಸ್ಥಿ ಮಾಡಲಿದ್ದೇವೆ ಎಲ್ಲಾ ಮಂಜೂರಿದಾರರ ಪರವಾಗಿ ನಾವೇ ಪ್ರಕ್ರಿಯೆ ಆರಂಭಿಸಲಿದ್ದು, ಇದರಿಂದ ಲಕ್ಷಾಂತರ ಜನರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡದಂತಾಗುತ್ತದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ:

ಪ್ರಕರಣಗಳ ಇತ್ಯರ್ಥಪಡಿಸಲು ಎಷ್ಟೇ ಕಾನೂನುಗಳನ್ನು ಅಳವಡಿಸಿದರೂ ಅವುಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರಿಗಳು ಬಳಸಿಕೊಂಡು ಜನಸಾಮಾನ್ಯರಿಗೆ ಕಿರಿಕಿರಿ ಮಾಡುತ್ತಿದ್ದಾರೆ.

ಕೆಲವೆಡೆ 50 ಎಕರೆ ಪೋಡಿ ಮಾಡಿಕೊಡಿ ಎಂದರೆ 100 ಎಕರೆ ಮಾಡಿಕೊಟ್ಟಿದ್ದಾರೆ, ಬಡ ರೈತನೊಬ್ಬ ತಾನು ಮಾಡುತ್ತಿರುವ ಸಾಗುವಳಿ ಭೂಮಿಗೆ ದಾಖಲೆಗಳನ್ನು ಮಾಡಿಕೊಳ್ಳಲು ಹೊರಟರೆ ಆತನನ್ನು ಅಲೆದಾಡಿಸುತ್ತಿದ್ದಾರೆ.

ಇದಕ್ಕೆಲ್ಲಾ ಇತಿಶ್ರೀ ಹಾಡುವ ಉದ್ದೇಶದಿಂದಲೇ ಪೋಡಿ ಅಭಿಯಾನ ಆರಂಭಿಸಿದ್ದೇವೆ, ಈ ಸಂದರ್ಭದಲ್ಲಿ ಇಲಾಖಾ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಚೌಕಟ್ಟನಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಾವು ನಿಮ್ಮ ಮೇಲೆ ಕಠಿಣ ಕ್ರಮ ಜರುಗಿಸಬೇಕಾದೀತು ಎಂದು ಎಚ್ಚರಿಸಿದ್ದೇನೆ ಎಂದರು.

Good news for farmers in the state; 'Podi' campaign to be launched from September ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM2 Mins Read

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM3 Mins Read

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

24/06/2025 4:33 PM1 Min Read
Recent News

ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ‘ಟಿಕೆಟ್ ದರ’ ಏರಿಕೆ, ಜುಲೈ 1ರಿಂದ್ಲೇ ಹೊಸ ದರ ಜಾರಿ!

24/06/2025 4:42 PM

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

‘ಬಾಂಬ್ ಹಾಕುವುದನ್ನ ಈಗಲೇ ನಿಲ್ಲಿಸಿ’ : ಇರಾನ್ ಕದನ ವಿರಾಮದ ಬಳಿಕ ‘ಇಸ್ರೇಲ್’ಗೆ ಟ್ರಂಪ್ ಎಚ್ಚರಿಕೆ

24/06/2025 4:37 PM
State News
KARNATAKA

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

By kannadanewsnow0924/06/2025 4:40 PM KARNATAKA 2 Mins Read

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು…

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

24/06/2025 4:33 PM

BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ : ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

24/06/2025 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.