Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಕೇಸ್ : ಇಂದು 13ನೇ ಪಾಯಿಂಟ್ ನಲ್ಲಿ ‘GPR’ ಮೂಲಕ ಅಸ್ಥಿಪಂಜರ ಪತ್ತೆಗೆ ‘SIT’ ಸಿದ್ದತೆ.!

07/08/2025 9:40 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 281 ಅಂಕ ಕುಸಿತ : 24,700 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

07/08/2025 9:37 AM
Want to reduce your risk of diabetes and heart disease

ಮಧುಮೇಹ ಮತ್ತು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಬಯಸುವಿರಾ? ಹಾಗಾದ್ರೇ ಹೀಗೆ ಮಾಡಿ

07/08/2025 9:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ!

By kannadanewsnow5714/09/2024 5:16 AM

ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಕರ್ಸ್ ಗಳು ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮತಿ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕೇಂದ್ರ ಸರಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರಕಾರ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ಬ್ಯಾಂಕಗಳು ನಿಗದಿತ ಗುರಿಗೆ ಅನುಗುಣವಾಗಿ ಸಾಲ ಬಿಡುಗಡೆ ಮಾಡಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ಸಚಿವರು ತಿಳಿಸಿದರು.

ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ ಎನ್.ಜಿ. ಅವರು ಮಾತನಾಡಿ, ಕೃಷಿ ಬೆಳೆ ಸಾಲವು ಜೂನ್ 2024 ರ ಅಂತ್ಯಕ್ಕೆ 610.8 ಕೋಟಿ ರೂ. ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 650.34 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಮತ್ತು ಶೇ.106.47 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ.

ಕೃಷಿ ಅವಧಿ ಸಾಲವು ಜೂನ್ 2024 ರ ಅಂತ್ಯಕ್ಕೆ 615.66 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 641.57 ಕೋ.ರೂಗಳಷ್ಟು ಸಾಧನೆಯಾಗಿದೆ. ಶೇ. 104.18 ರಷ್ಟು ತ್ರೈಮಾಸಿಕ ಗುರಿಗೆ ಸಾಧನೆಯಾಗಿದೆ.

ಸೂಕ್ಷ್ಮ , ಸಣ್ಣ, ಹಾಗೂ ಮಧ್ಯಮ ಉದ್ಯಮಗಳು ಜೂನ್ 2024 ರ ಅಂತ್ಯಕ್ಕೆ 2357.81 ಕೋ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 3312.98 ಕೋ.ರೂ.ಗಳಷ್ಟು ಸಾಧನೆಯಾಗಿದೆ. ಶೇ.140.51 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ.

ಇತರೆ ಆಧ್ಯತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 180.23 ಕೋಟಿ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 147.8 ಕೋಟಿ.ರೂ. ಗಳಷ್ಟು ಸಾಧನೆಯಾಗಿದೆ. ಮತ್ತು ಶೇ 82.01 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ.

ಆಧ್ಯತಾ ರಹಿತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 1828.76 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 2701.13 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಶೇ.147.7 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ.

ಒಟ್ಟಾರೆಯಾಗಿ ಜೂನ್ 2024 ರ ಅಂತ್ಯಕ್ಕೆ 5593.26 ಕೋಟಿ ರೂ.ಗಳ ಗುರಿಯನ್ನು ಹೊಂದಿದ್ದು, 2024 ರ ಅಂತ್ಯಕ್ಕೆ 7453.82 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ.133.26 ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರ್.ಬಿ.ಐ ಜಿಲ್ಲಾ ಅಗ್ರಣೀಯ ಅಧಿಕಾರಿ ಅರುಣಕುಮಾರ, ಬ್ಯಾಂಕ್ ಆಪ್ ಬರೋಡಾ ದ ಜಿಲ್ಲಾ ಪ್ರಾದೇಶಿಕ ವ್ಯವಸ್ಥಾಪಕ ವಿಜಯ ಪಾಟೀಲ, ನಬಾರ್ಡ್ ಎಜಿಎಮ್ ಮಯೂರ ಕಾಂಬ್ಳೆ ಅವರು ಮಾತನಾಡಿದರು.
ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ ಪ್ರಭುದೇವ ಎನ್.ಜಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.

ಸಭೆಯಲ್ಲಿ ವಿವಿಧ ಬ್ಯಾಂಕ್ ಗಳ ಪ್ರಾದೇಶಿಕ ವ್ಯವಸ್ಥಾಪಕರು, ಶಾಖಾ ವ್ಯವಸ್ಥಾಪಕರು, ರೈತ ಪ್ರತಿನಿಧಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Good news for farmers in the state: Pralhad Joshi asks banks to disburse loans up to Rs 10 lakh without CIBIL score ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ : ಇಂದು 13ನೇ ಪಾಯಿಂಟ್ ನಲ್ಲಿ ‘GPR’ ಮೂಲಕ ಅಸ್ಥಿಪಂಜರ ಪತ್ತೆಗೆ ‘SIT’ ಸಿದ್ದತೆ.!

07/08/2025 9:40 AM1 Min Read

ಶ್ರೀ ಮಹಾಲಕ್ಷ್ಮೀ ಅಷ್ಟೋತ್ತರ ಶತ ನಾಮಾವಳಿ

07/08/2025 9:32 AM3 Mins Read

ಕಾಮಾಕ್ಷಿ ಅಮ್ಮನವರ ದೀಪ ಇಂದಿಗೂ ಎಲ್ಲರ ಮನೆಗಳಲ್ಲಿ ಏಕೆ ಉರಿಯುತ್ತದೆ ಎಂದು ನಿಮಗೆ ತಿಳಿದಿದೆಯೇ?

07/08/2025 9:30 AM3 Mins Read
Recent News

BREAKING : ಧರ್ಮಸ್ಥಳ ಕೇಸ್ : ಇಂದು 13ನೇ ಪಾಯಿಂಟ್ ನಲ್ಲಿ ‘GPR’ ಮೂಲಕ ಅಸ್ಥಿಪಂಜರ ಪತ್ತೆಗೆ ‘SIT’ ಸಿದ್ದತೆ.!

07/08/2025 9:40 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 281 ಅಂಕ ಕುಸಿತ : 24,700 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

07/08/2025 9:37 AM
Want to reduce your risk of diabetes and heart disease

ಮಧುಮೇಹ ಮತ್ತು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಬಯಸುವಿರಾ? ಹಾಗಾದ್ರೇ ಹೀಗೆ ಮಾಡಿ

07/08/2025 9:36 AM

ಶ್ರೀ ಮಹಾಲಕ್ಷ್ಮೀ ಅಷ್ಟೋತ್ತರ ಶತ ನಾಮಾವಳಿ

07/08/2025 9:32 AM
State News
KARNATAKA

BREAKING : ಧರ್ಮಸ್ಥಳ ಕೇಸ್ : ಇಂದು 13ನೇ ಪಾಯಿಂಟ್ ನಲ್ಲಿ ‘GPR’ ಮೂಲಕ ಅಸ್ಥಿಪಂಜರ ಪತ್ತೆಗೆ ‘SIT’ ಸಿದ್ದತೆ.!

By kannadanewsnow5707/08/2025 9:40 AM KARNATAKA 1 Min Read

ಧರ್ಮಸ್ಥಳ : ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ…

ಶ್ರೀ ಮಹಾಲಕ್ಷ್ಮೀ ಅಷ್ಟೋತ್ತರ ಶತ ನಾಮಾವಳಿ

07/08/2025 9:32 AM

ಕಾಮಾಕ್ಷಿ ಅಮ್ಮನವರ ದೀಪ ಇಂದಿಗೂ ಎಲ್ಲರ ಮನೆಗಳಲ್ಲಿ ಏಕೆ ಉರಿಯುತ್ತದೆ ಎಂದು ನಿಮಗೆ ತಿಳಿದಿದೆಯೇ?

07/08/2025 9:30 AM

BIG NEWS : `ಸೌಜನ್ಯಾಳ ದಾರುಣ ಹತ್ಯೆ’ಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ : ನಟ ಪ್ರಕಾಶ್ ರಾಜ್ ಕಿಡಿ | WATCH VIDEO

07/08/2025 9:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.