Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಗ್ರಾಹಕರಿಗೆ ಬಿಗ್ ಶಾಕ್ : `TV, ಲ್ಯಾಪ್ ಟಾಪ್, ಮೊಬೈಲ್’ ಬೆಲೆಯಲ್ಲಿ ಭಾರೀ ಏರಿಕೆ | Electronics prices Hike

18/01/2026 5:39 AM

ಉದ್ಯೋಗವಾರ್ತೆ : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘RBI’ ನಲ್ಲಿ 572 ಹುದ್ದೆಗಳಿಗೆ ಅರ್ಜಿ ಆಹ್ವಾನ |RBI recruitment 2026

18/01/2026 5:37 AM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

18/01/2026 5:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ `ಭತ್ತ’ ಖರೀದಿ ಪ್ರಕ್ರಿಯೆ ಆರಂಭ.!
KARNATAKA

ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ `ಭತ್ತ’ ಖರೀದಿ ಪ್ರಕ್ರಿಯೆ ಆರಂಭ.!

By kannadanewsnow5723/01/2025 6:34 AM

ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ. ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್, 01 ರಿಂದ ಆರಂಭವಾಗಿದ್ದು, 2025 ರ ಮಾರ್ಚ್, 31 ರವರೆಗೆ ಭತ್ತ ಖರೀದಿ ಮತ್ತು ನೋಂದಣಿಗೆ ಅವಕಾಶ ಇರುತ್ತದೆ.

ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್-2024 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ಗೆ 2300 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‍ಗೆ 4290 ರೂ. ನಿಗದಿಪಡಿಸಲಾಗಿರುತ್ತದೆ.

ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 05 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣ ಹಾಗೂ ವಿರಾಜಪೇಟೆ ಎಪಿಎಂಸಿ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ.

2025 ರ ಜನವರಿ, 22 ರಂತೆ ಒಟ್ಟು ಮಡಿಕೇರಿಯಲ್ಲಿ 05 ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 04 ಒಟ್ಟು 09 ರೈತರು ಒಟ್ಟು 269.50 ಕ್ವಿಂಟಾಲ್ ಭತ್ತ ನೀಡಲು ನೋಂದಣಿ ಮಾಡಿಕೊಂಡಿದ್ದಾರೆ. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳೆದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ.

ಸರಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ಧಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್‍ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ.ಸಂ. ಸೋಮಯ್ಯ, ಖರೀದಿ ವ್ಯವಸ್ಥಾಪಕರು, ಕೊಡಗು ಜಿಲ್ಲೆ 8073448843 ನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ. ಅವರು ತಿಳಿಸಿದ್ದಾರೆ.

Good news for farmers: Paddy procurement process begins under support price scheme ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ `ಭತ್ತ' ಖರೀದಿ ಪ್ರಕ್ರಿಯೆ ಆರಂಭ.!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

18/01/2026 5:31 AM2 Mins Read

BIG NEWS: ರಾಜ್ಯದ ‘ಶಾಲಾ ದಾಖಲಾತಿ’ಗಳಲ್ಲಿ ‘ಜಾತಿ ತಿದ್ದುಪಡಿ’ ಬಗ್ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ

18/01/2026 5:30 AM2 Mins Read

ಜ.21ರಂದು ಸಾಗರದಲ್ಲಿ ‘ರಾಜ್ಯ ಸುರಭಿ ಶ್ರೀ ಪ್ರಶಸ್ತಿ’ ಪ್ರದಾನ: ಅಧ್ಯಕ್ಷ ಎಸ್.ಜಿ ರಾಮಚಂದ್ರ

17/01/2026 10:15 PM2 Mins Read
Recent News

BIG NEWS : ಗ್ರಾಹಕರಿಗೆ ಬಿಗ್ ಶಾಕ್ : `TV, ಲ್ಯಾಪ್ ಟಾಪ್, ಮೊಬೈಲ್’ ಬೆಲೆಯಲ್ಲಿ ಭಾರೀ ಏರಿಕೆ | Electronics prices Hike

18/01/2026 5:39 AM

ಉದ್ಯೋಗವಾರ್ತೆ : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘RBI’ ನಲ್ಲಿ 572 ಹುದ್ದೆಗಳಿಗೆ ಅರ್ಜಿ ಆಹ್ವಾನ |RBI recruitment 2026

18/01/2026 5:37 AM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

18/01/2026 5:31 AM

BIG NEWS: ರಾಜ್ಯದ ‘ಶಾಲಾ ದಾಖಲಾತಿ’ಗಳಲ್ಲಿ ‘ಜಾತಿ ತಿದ್ದುಪಡಿ’ ಬಗ್ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ

18/01/2026 5:30 AM
State News
KARNATAKA

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಯಾವುದೇ ಅರ್ಜಿ ಗ್ರಾಮ ಪಂಚಾಯ್ತಿಗೆ ಸಲ್ಲಿಸಿದ್ರೆ ಈ ಕರ್ತವ್ಯ ಕಡ್ಡಾಯ

By kannadanewsnow0918/01/2026 5:31 AM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿ ಎನ್ನುವಂತೆ ಯಾವುದೇ ಗ್ರಾಮ ಪಂಚಾಯ್ತಿಗಳಲ್ಲಿ ನೀವು ಯಾವುದೇ ರೀತಿಯ ಅರ್ಜಿ ಸಲ್ಲಿಕೆ ಮಾಡಿದರೇ,…

BIG NEWS: ರಾಜ್ಯದ ‘ಶಾಲಾ ದಾಖಲಾತಿ’ಗಳಲ್ಲಿ ‘ಜಾತಿ ತಿದ್ದುಪಡಿ’ ಬಗ್ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ

18/01/2026 5:30 AM

ಜ.21ರಂದು ಸಾಗರದಲ್ಲಿ ‘ರಾಜ್ಯ ಸುರಭಿ ಶ್ರೀ ಪ್ರಶಸ್ತಿ’ ಪ್ರದಾನ: ಅಧ್ಯಕ್ಷ ಎಸ್.ಜಿ ರಾಮಚಂದ್ರ

17/01/2026 10:15 PM

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.