Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM

BIG NEWS : ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡರೂ ಪತ್ನಿಯ ಕುಟುಂಬದ ವಿರುದ್ಧ `ಕ್ರಿಮಿನಲ್ ಕೇಸ್’ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

19/04/2026 7:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ `ಭತ್ತ’ ಖರೀದಿ ಪ್ರಕ್ರಿಯೆ ಆರಂಭ.!
KARNATAKA

ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ `ಭತ್ತ’ ಖರೀದಿ ಪ್ರಕ್ರಿಯೆ ಆರಂಭ.!

By kannadanewsnow5723/01/2025 6:34 AM

ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ. ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್, 01 ರಿಂದ ಆರಂಭವಾಗಿದ್ದು, 2025 ರ ಮಾರ್ಚ್, 31 ರವರೆಗೆ ಭತ್ತ ಖರೀದಿ ಮತ್ತು ನೋಂದಣಿಗೆ ಅವಕಾಶ ಇರುತ್ತದೆ.

ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್-2024 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ಗೆ 2300 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‍ಗೆ 4290 ರೂ. ನಿಗದಿಪಡಿಸಲಾಗಿರುತ್ತದೆ.

ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 05 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣ ಹಾಗೂ ವಿರಾಜಪೇಟೆ ಎಪಿಎಂಸಿ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ.

2025 ರ ಜನವರಿ, 22 ರಂತೆ ಒಟ್ಟು ಮಡಿಕೇರಿಯಲ್ಲಿ 05 ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 04 ಒಟ್ಟು 09 ರೈತರು ಒಟ್ಟು 269.50 ಕ್ವಿಂಟಾಲ್ ಭತ್ತ ನೀಡಲು ನೋಂದಣಿ ಮಾಡಿಕೊಂಡಿದ್ದಾರೆ. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳೆದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ.

ಸರಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ಧಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್‍ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ.ಸಂ. ಸೋಮಯ್ಯ, ಖರೀದಿ ವ್ಯವಸ್ಥಾಪಕರು, ಕೊಡಗು ಜಿಲ್ಲೆ 8073448843 ನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ. ಅವರು ತಿಳಿಸಿದ್ದಾರೆ.

Good news for farmers: Paddy procurement process begins under support price scheme ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ `ಭತ್ತ' ಖರೀದಿ ಪ್ರಕ್ರಿಯೆ ಆರಂಭ.!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM1 Min Read

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM1 Min Read

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM1 Min Read
Recent News

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM

BIG NEWS : ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡರೂ ಪತ್ನಿಯ ಕುಟುಂಬದ ವಿರುದ್ಧ `ಕ್ರಿಮಿನಲ್ ಕೇಸ್’ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

19/04/2026 7:07 AM

ಪ್ರಧಾನಿ ಮೋದಿ ಭಾಷಣಕ್ಕೆ ವಿಪಕ್ಷಗಳ ಆಕ್ರೋಶ; ‘ಮಹಿಳೆಯರ ಹೆಸರಲ್ಲಿ ಸಂವಿಧಾನಕ್ಕೆ ದ್ರೋಹ’ ಎಂದು ರಾಹುಲ್ ಗಾಂಧಿ ಕಿಡಿ !

19/04/2026 7:01 AM
State News
KARNATAKA

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

By kannadanewsnow5719/04/2026 7:17 AM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಚಾರಣ (Trekking) ಕೈಗೊಳ್ಳುವವರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆಯು ಹೊಸ ನಿಯಮಗಳನ್ನು ಜಾರಿಗೆ…

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.