Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

12/12/2025 1:45 PM

ಅಹಮದಾಬಾದ್ ನಲ್ಲಿ ಪಾಕಿಸ್ತಾನದ 195 ವಲಸಿಗರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ !

12/12/2025 1:35 PM

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯಾದ್ಯಂತ ‘ಪೋಡಿ ದುರಸ್ತಿ ಅಭಿಯಾನ’ ಆರಂಭ!
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯಾದ್ಯಂತ ‘ಪೋಡಿ ದುರಸ್ತಿ ಅಭಿಯಾನ’ ಆರಂಭ!

By kannadanewsnow5702/09/2024 10:53 AM

ಬೆಂಗಳೂರು : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಲಿದೆ.

ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ.

ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ.

ಸಿಎಂ ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೆಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ” ಎಂದು ಮಾಹಿತಿ ನೀಡಿದರು.

ಈ ಹಿಂದೆ ಪೋಡಿ ದುರಸ್ಥಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ತಯಾರಿಸಲು ಪ್ರಯತ್ನಿಸಲಾಗಿತ್ತು. ಆದರೆ, ಆ ಕೆಲಸವೂ ಸಮರ್ಪಕವಾಗಿ ಆಗಿರುವುದಿಲ್ಲ. ಆದ ಕೆಲವು ಕಡತಗಳು ಕಾಣೆಯಾಗಿವೆ ಅಥವಾ ಕೈಗೆ ಸಿಗುವುದಿಲ್ಲ. ಇದರಿಂದ ಕಡತಗಳು ಇದ್ದರೂ ಅನೇಕರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ಕಂದಾಯ ಇಲಾಖೆ ಪೋಡಿ ದುರಸ್ಥಿ 1-5 ಕಡತಗಳನ್ನು ಕಂಪ್ಯೂಟರ್ಗಳನ್ನು ಬಳಸಿ ಗಣಕೀಕರಿಸಿದ (ಡಿಜಿಟಲ್‌) 1-5 ಕಡತಗಳನ್ನು ತಯಾರಿಸಲು ಆರಂಭಿಸಿದೆ.

ಡಿಜಿಟಲ್‌ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಮುಂದುವರೆದು, “ಈ ಅಭಿಯಾನವನ್ನು ಸೆಪ್ಟೆಂಬರ್‌ 02 ರಿಂದ ರಾಜ್ಯಾದ್ಯಂತ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲೆಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳ ದುರಸ್ಥಿಯಾಗದೆ ಬಾಕಿ ಉಳಿದಿದೆ ಅಂತಹ ಪ್ರತಿಯೊಂದು ಕಡೆಯಲ್ಲೂ ಡಿಜಿಟಲಾಗಿ 1-5(ನಮೂನೆ)ಕಡತ ಸೆಪ್ಟೆಂಬರ್‌ 02 ರಿಂದ ತಯಾರಿ ಮಾಡಲಾಗುವುದು. 1-5(ನಮೂನೆ)ಕಡತ ಎಲ್ಲಾ ಸರ್ಕಾರಿ ಜಮೀನಿಗೆ (ರೈತರಿಗೆ ಮಂಜೂರಾಗಿರುವ), ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ.

1-5ನಮೂನೆ ಪ್ರಕಾರ ತಯಾರಾದ ಕಡತಗಳನ್ನು ಮುಂದೆ 6-10 ಮಾಡಿ ಅವರಿಗೆ ಸರ್ವೆಯೊಂದಿಗೆ ದುರಸ್ಥಿ ಮಾಡಿದ ನಂತರ ಹೊಸ ಸರ್ವೆ ನಂಬರ್ ಪಹಣಿಯೊಂದಿಗೆ ಸಂಪೂರ್ಣ ದಾಖಲೆ ಮಾಡಿಕೊಡಲಾಗುವುದು. ಇದನ್ನು ಅಭಿಯಾನ ಮಾದರಿಯಲ್ಲಿ ಅನುಷ್ಟಾನ ಮಾಡಲಾಗುವುದು. ಇದೊಂದು ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ರೈತರಿಗೆ ನೆಮ್ಮದಿಯನ್ನು ನೀಡುವ ಅಭಿಯಾನವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳೂ ಈ ಯೋಜನೆ ಯಶಸ್ವಿಯಾಗಲು ಸಹಕರಿಸಬೇಕಿದೆ. ಆ ಮೂಲಕ ರೈತರ ದೀರ್ಘ ಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮ್ಮಿಂದಾದ ಸಹಕಾರ ನೀಡಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.

Good news for farmers: State government to launch 'Podi repair campaign' across the state from today ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 50 ಲಕ್ಷ ರೂ.ವರಗೆ ಸಾಲ ಸೌಲಭ್ಯ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

12/12/2025 1:45 PM1 Min Read

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM1 Min Read

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

12/12/2025 1:07 PM3 Mins Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

12/12/2025 1:45 PM

ಅಹಮದಾಬಾದ್ ನಲ್ಲಿ ಪಾಕಿಸ್ತಾನದ 195 ವಲಸಿಗರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ !

12/12/2025 1:35 PM

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM

Alert : ಈ `ಬ್ಲಡ್ ಗ್ರೂಪ್’ ಹೊಂದಿರುವವರಿಗೆ `ಕ್ಯಾನ್ಸರ್’ ಅಪಾಯ ಹೆಚ್ಚು.!

12/12/2025 1:29 PM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

By kannadanewsnow5712/12/2025 1:45 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ…

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

12/12/2025 1:07 PM

BREAKING : ನನ್ನ ‘CM’ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೀನಿ : ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

12/12/2025 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.