ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಖಾಲಿ ಇರುವ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ‘ಪದೋನ್ನತಿ’ (Promotion) ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಚಾಲನೆ ನೀಡಿದ್ದು, ಈ ಸಂಬಂಧ ಸಮಗ್ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಶಿಕ್ಷಕರ ಮರುಹೊಂದಾಣಿಕೆ ಮತ್ತು ವರ್ಗಾವಣೆ ಪ್ರಕ್ರಿಯೆಯ ನಂತರ ಲಭ್ಯವಿರುವ ಖಾಲಿ ಹುದ್ದೆಗಳನ್ನು ಈ ಬಡ್ತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲಾಗುವುದು.
ಅರ್ಹತೆ: ಜನವರಿ 1, 2026 ರಂದು ಅಂತಿಮಗೊಂಡ ಜ್ಯೇಷ್ಠತಾ ಪಟ್ಟಿಯ ಆಧಾರದ ಮೇಲೆ ಅರ್ಹ ಶಿಕ್ಷಕರನ್ನು ಬಡ್ತಿಗೆ ಪರಿಗಣಿಸಲಾಗುತ್ತದೆ.
ಅಂಗವಿಕಲ ಮೀಸಲಾತಿ: ಶೇ. 4 ರಷ್ಟು ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದ್ದು, ಅಂಗವಿಕಲ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ನಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.
ಪಾರದರ್ಶಕತೆ: ಶಿಕ್ಷಕರ ಸೇವಾ ಪುಸ್ತಕ (Service Register) ಮತ್ತು ಇ-ಸಿಎಸ್ (HRMS) ತಂತ್ರಾಂಶದಲ್ಲಿನ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಬಡ್ತಿ ನೀಡಲು ಸೂಚಿಸಲಾಗಿದೆ.
ಬಡ್ತಿ ಪ್ರಕ್ರಿಯೆಯ ವೇಳಾಪಟ್ಟಿ ಹೀಗಿದೆ:
ಬಡ್ತಿ ಪ್ರಕ್ರಿಯೆಯನ್ನು ಅತ್ಯಂತ ವೇಗವಾಗಿ ನಡೆಸಲು ಇಲಾಖೆ ತೀರ್ಮಾನಿಸಿದ್ದು, ಏಪ್ರಿಲ್ ತಿಂಗಳ ಅಂತ್ಯದೊಳಗೆ ಎಲ್ಲಾ ಪ್ರಕ್ರಿಯೆ ಮುಗಿಯಲಿದೆ.









