ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ತರಬೇತಿ ಭತ್ಯೆ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎರಡನೇ ತಂಡದ ಅಭ್ಯರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಪ್ರರ್ಗ-1 ರ ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 3.50 ಲಕ್ಷ ಆದಾಯ ಮಿತಿ ಹೊಂದಿದ್ದು 40 ವರ್ಷದೊಳಗಿನವರಾಗಿರಬೇಕು. ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಆದಾಯ 2.50 ಲಕ್ಷ ಆದಾಯ ಮಿತಿ ಹೊಂದಿದ್ದು 38 ವರ್ಷದೂಳಗಿನವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.4,000 ಭತ್ಯೆಯನ್ನು 4 ವರ್ಷಗಳವರೆಗೆ ನೀಡಲಾಗುವುದು.
ಕಾನೂನು ಪದವೀಧರರಿಗೆ ವಕೀಲ ವೃತ್ತಿಯಲ್ಲಿ ನ್ಯಾಯಾಂಗ ಸೇವೆಯ ಪೂರ್ವ ತರಬೇತಿ ಪಡೆಯಲು ಪದವಿ ಪಡೆದ 2 ವರ್ಷದೊಳಗಿನ ಅವಧಿಯ ಅರ್ಹ ಆಸಕ್ತಿಯುಳ್ಳ ಕಾನೂನು ಪದವೀಧರರು ಜುಲೈ 31, 2025 ರೊಳಗಾಗಿ ವೆಬ್ಸೈಟ್ www.bcwd.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.
Watch Video: ಗುತ್ತಿಗೆ ಸ್ಟಾಫ್ ನರ್ಸ್ ರಿನೀವಲ್ ಗೆ ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯ: ಆಡಿಯೋ ವೈರಲ್
BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ