Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಶಿವಮೊಗ್ಗದಲ್ಲಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ, ಮಕ್ಕಳಿಗೆ ಗಂಭೀರ ಗಾಯ

14/01/2026 9:01 PM

ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ

14/01/2026 8:34 PM

BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ

14/01/2026 8:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ
KARNATAKA

ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ

By kannadanewsnow0914/01/2026 8:34 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗಿಲೆನ್-ಬಾರಿ ಸಿಂಡ್ರೋಮ್ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಚಿಕಿತ್ಸೆಗೆ ಅವಕಾಶ ನೀಡಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ನಮ್ಮ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಂತೆ,

* ದುಬಾರಿ ಚಿಕಿತ್ಸೆಗೆ ಸರ್ಕಾರಿ ಸವಲತ್ತು: ಈ ಹಿಂದೆ ಜಿ.ಬಿ.ಎಸ್ ಕಾಯಿಲೆಗೆ ನೀಡಲಾಗುತ್ತಿದ್ದ ಮೂಲ ಚಿಕಿತ್ಸೆಯ ಜೊತೆಗೆ, ಈಗ ಅತ್ಯಗತ್ಯವಾದ IVIG ಥೆರಪಿಯನ್ನೂ ಯೋಜನೆಯಡಿ ತರಲಾಗಿದೆ. ಇದಕ್ಕಾಗಿ ವಿಶೇಷ ಪ್ರೊಸೀಜರ್ ಕೋಡ್‌ಗಳನ್ನು (2B.M1.00061D ಮತ್ತು 2B.M1.00061E) ನಿಗದಿಪಡಿಸಲಾಗಿದೆ.

* ಚಿಕಿತ್ಸಾ ವೆಚ್ಚ ಮತ್ತು ಮಿತಿ: ಪ್ರತಿ ರೋಗಿಗೆ ಗರಿಷ್ಠ 2 ಲಕ್ಷ ರೂಪಾಯಿಗಳವರೆಗೆ ಈ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಔಷಧಿಯ ದರವನ್ನು ಪ್ರತಿ ಗ್ರಾಂಗೆ 2,000 ರೂಪಾಯಿಗಳಂತೆ ನಿಗದಿಪಡಿಸಲಾಗಿದ್ದು, ರೋಗಿಯ ತೂಕದ ಆಧಾರದ ಮೇಲೆ ಡೋಸೇಜ್ ನೀಡಲು ಸೂಚಿಸಲಾಗಿದೆ.

* ಪಾರದರ್ಶಕತೆಗೆ ಆದ್ಯತೆ: ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆಸ್ಪತ್ರೆಗಳು ಚಿಕಿತ್ಸೆ ನೀಡುವಾಗ ಔಷಧದ ಬಾಟಲಿ (Vial), ಅದರ ಬ್ಯಾಚ್ ಸಂಖ್ಯೆ, ರೋಗಿಯ ಹೆಸರಿರುವ ಫೋಟೋ ಹಾಗೂ ವೈದ್ಯರು ದೃಢೀಕರಿಸಿದ ಡೋಸೇಜ್ ಪಟ್ಟಿಯನ್ನು ಕಡ್ಡಾಯವಾಗಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕೆಂದು ಸೂಚಿಸಲಾಗಿದೆ.

* ಎಲ್ಲಾ ಆಸ್ಪತ್ರೆಗಳಿಗೆ ಅನ್ವಯ: ಈ ಸೌಲಭ್ಯವು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಯೋಜನೆಯಡಿ ನೋಂದಾಯಿತವಾಗಿರುವ (Empanelled) ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರಲಿದೆ.

ಬಡ ಮತ್ತು ಸಾಮಾನ್ಯ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ನರರೋಗಕ್ಕೆ ಸಂಬಂಧಿಸಿದ ಈ ಕಠಿಣ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವುದರಿಂದ ಸಾವಿರಾರು ರೋಗಿಗಳಿಗೆ ಅನುಕೂಲವಾಗಲಿದೆ. ಬಡ ಮತ್ತು ಸಾಮಾನ್ಯ ವರ್ಗದ ರೋಗಿಗಳಿಗೆ ಸಾವಿರಾರು ರೂಪಾಯಿ ವೆಚ್ಚದ ಈ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸುವ ಮೂಲಕ ಅವರ ಬದುಕಿಗೆ ಆಸರೆಯಾಗುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದ್ದಾರೆ.

BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ

ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗದಲ್ಲಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ, ಮಕ್ಕಳಿಗೆ ಗಂಭೀರ ಗಾಯ

14/01/2026 9:01 PM1 Min Read

BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ

14/01/2026 8:02 PM1 Min Read

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

14/01/2026 7:40 PM1 Min Read
Recent News

BREAKING: ಶಿವಮೊಗ್ಗದಲ್ಲಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ, ಮಕ್ಕಳಿಗೆ ಗಂಭೀರ ಗಾಯ

14/01/2026 9:01 PM

ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ

14/01/2026 8:34 PM

BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ

14/01/2026 8:02 PM

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

14/01/2026 7:40 PM
State News
KARNATAKA

BREAKING: ಶಿವಮೊಗ್ಗದಲ್ಲಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ, ಮಕ್ಕಳಿಗೆ ಗಂಭೀರ ಗಾಯ

By kannadanewsnow0914/01/2026 9:01 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಪತಿ, ಮಕ್ಕಳು…

ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ

14/01/2026 8:34 PM

BREAKING: ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ಧಮ್ಕಿ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ

14/01/2026 8:02 PM

ಬೆಂಗಳೂರಿನ ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಮಹತ್ವದ ಮಾಹಿತಿ: ನವೀಕರಣಕ್ಕೆ ಈ ದಾಖಲೆ ಸಲ್ಲಿಕೆ ಕಡ್ಡಾಯ

14/01/2026 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.