Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಮ್ಮು ಕಾಶ್ಮೀರದಲ್ಲಿ ಅರುಂಧತಿ ರಾಯ್, ನೂರಾನಿ ಸೇರಿ 25 ಪುಸ್ತಕಗಳಿಗೆ ನಿಷೇಧ | Arundhati Roy

07/08/2025 7:15 AM

ಮರ್ಚೆಂಟ್ ಶಿಪ್ಪಿಂಗ್ ಮಸೂದೆಗೆ ಲೋಕಸಭೆ ಅಂಗೀಕಾರ

07/08/2025 7:09 AM

BREAKING : `ಕುಕ್ಕರ್ ಬಾಂಬ್ ಸ್ಫೋಟ ಕೇಸ್’ ಗೆ ಬಿಗ್ ಟ್ವಿಸ್ಟ್ : ಉಗ್ರರ ಟಾರ್ಗೆಟ್ ಆಗಿತ್ತು `ಧರ್ಮಸ್ಥಳ’ ದೇಗುಲ.!

07/08/2025 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಏಪ್ರಿಲ್‌ ನೊಳಗೆ ‘3,000 ಲೈನ್‌ಮನ್‌’ ನೇಮಕ
KARNATAKA

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಏಪ್ರಿಲ್‌ ನೊಳಗೆ ‘3,000 ಲೈನ್‌ಮನ್‌’ ನೇಮಕ

By kannadanewsnow0917/02/2025 6:05 PM

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದೊಳಗೆ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಜನಪ್ರತಿನಿಧಿಗಳ ಸಲಹೆ ಪಡೆಯಿರಿ

ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ಶೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಮತನಾಡಿ, ನೆಗಳೂರಿನಲ್ಲಿ 110 ಕೆ.ವಿ. ಸಾಮರ್ಥ್ಯದ ಸ್ಟೆಷನ್‌ ಪ್ರಾರಂಭಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು,ಈ ಬಗ್ಗೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಮಾತನಾಡಿ, ಅಧಿಕ ಒತ್ತಡದಿಂದ ಟ್ರಾನ್ಸ್ ಫಾರ್ಮರ್ ಗಳು ಸುಡುತ್ತಿವೆ. ಆದ್ದರಿಂದ ಅವುಗನ್ನು ಮೇಲ್ದರ್ಜೆಗೇರಿಸಬೇಕು. ಸುಟ್ಟು ಹೋದ ಟ್ರಾನ್್ ಫಾರ್ಮರ್ ಗಳನ್ನು ಶೀಘ್ರ ಬದಲಿಸಬೇಕು ಎಂದು ಮನವಿ ಮಾಡಿದರು.

ಹಿರೇಕೆರೂರು ಶಾಸಕ ಯು.ಬಿ ಬಣಕಾರ ಮಾತನಾಡಿ, ಕೃಷಿ ಪಂಪ್ ಸೆಟ್ ಗಳಿಗೆ ದಿನದ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು. ಕೆಲವು ಕಡೆ ಹಳೆಯದಾಗಿರುವ ವಿದ್ಯುತ್‌ ಲೈನ್‌ಗಳನ್ನು ಬದಲಿಸಬೇಕು ಎಂದು ಮನವಿ ಮಡಿದರು.

ಶಾಸಕರ ಅಹಾಲುಗಳನ್ನು ಆಲಿಸಿದ ಸಚಿವ ಕೆ.ಜೆ.ಜಾರ್ಜ್, ಈ ಎಲ್ಲಾ ವಿಚಾರಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶರಿಗೆ ಸೂಚಿಸಿದರು. ಜತೆಗೆ ಸಕ್ಕರೆ ಕಾರ್ಖಾನೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ವರದಿ ಪಡೆದು ಕ್ರಮ ಜರುಗಿಸುವಂತೆಯೂ ತಾಕೀತು ಮಡಿದರು.

ಸಭೆಯಲ್ಲಿ ಬ್ಯಾಡಗಿ ಶಾಸಕರೂ ಆದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‍ಪೀ ರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಪ್ರಕಾಶ ಕೋಳಿವಾಡ, ಯಾಸಿರ್ ಅಹ್ಮ ದ್‍ಖಾನ್ ಪಠಾಣ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಫೆ.24ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು ವಕೀಲರ ಸಂಘದ ಮೇಯೋ ಹಾಲ್ ವಿಭಾಗಕ್ಕೆ ಎ.ಪಿ.ನಟೇಶ್ ಆಯ್ಕೆ

ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ

Share. Facebook Twitter LinkedIn WhatsApp Email

Related Posts

BREAKING : `ಕುಕ್ಕರ್ ಬಾಂಬ್ ಸ್ಫೋಟ ಕೇಸ್’ ಗೆ ಬಿಗ್ ಟ್ವಿಸ್ಟ್ : ಉಗ್ರರ ಟಾರ್ಗೆಟ್ ಆಗಿತ್ತು `ಧರ್ಮಸ್ಥಳ’ ದೇಗುಲ.!

07/08/2025 7:08 AM1 Min Read

BIG NEWS: ‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

07/08/2025 7:02 AM2 Mins Read

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

07/08/2025 6:55 AM2 Mins Read
Recent News

ಜಮ್ಮು ಕಾಶ್ಮೀರದಲ್ಲಿ ಅರುಂಧತಿ ರಾಯ್, ನೂರಾನಿ ಸೇರಿ 25 ಪುಸ್ತಕಗಳಿಗೆ ನಿಷೇಧ | Arundhati Roy

07/08/2025 7:15 AM

ಮರ್ಚೆಂಟ್ ಶಿಪ್ಪಿಂಗ್ ಮಸೂದೆಗೆ ಲೋಕಸಭೆ ಅಂಗೀಕಾರ

07/08/2025 7:09 AM

BREAKING : `ಕುಕ್ಕರ್ ಬಾಂಬ್ ಸ್ಫೋಟ ಕೇಸ್’ ಗೆ ಬಿಗ್ ಟ್ವಿಸ್ಟ್ : ಉಗ್ರರ ಟಾರ್ಗೆಟ್ ಆಗಿತ್ತು `ಧರ್ಮಸ್ಥಳ’ ದೇಗುಲ.!

07/08/2025 7:08 AM

ಗಮನಿಸಿ: ನಿಮ್ಮ ಕೊಲೆಸ್ಟ್ರಾಲ್ ಹೆಚ್ಚಾಗಲು ಈ ವಸ್ತುಗಳು ಕಾರಣ…!

07/08/2025 7:07 AM
State News
KARNATAKA

BREAKING : `ಕುಕ್ಕರ್ ಬಾಂಬ್ ಸ್ಫೋಟ ಕೇಸ್’ ಗೆ ಬಿಗ್ ಟ್ವಿಸ್ಟ್ : ಉಗ್ರರ ಟಾರ್ಗೆಟ್ ಆಗಿತ್ತು `ಧರ್ಮಸ್ಥಳ’ ದೇಗುಲ.!

By kannadanewsnow5707/08/2025 7:08 AM KARNATAKA 1 Min Read

ಬೆಂಗಳೂರು : 2022 ರಲ್ಲಿ ನಡೆದಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ.…

BIG NEWS: ‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

07/08/2025 7:02 AM

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

07/08/2025 6:55 AM

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

07/08/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.