Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಕಾನೂನು ತರುತ್ತೇವೆ : DCM ಡಿ.ಕೆ. ಶಿವಕುಮಾ‌ರ್

10/06/2025 6:05 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಹಗಲಲ್ಲೂ ಕರೆಂಟ್ ಸ್ಟೀಂ’ಗೆ ನಾಳೆ ಚಾಲನೆ

10/06/2025 5:59 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಬೋರ್ವೆಲ್’ ಕೊರೆಸಲು ಸಿಗಲಿದೆ 4 ಲಕ್ಷ ರೂ. ಸಬ್ಸಿಡಿ.!

10/06/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ ಆರೋಗ್ಯ ಇಲಾಖೆಯ 32,870 ಹುದ್ದೆ ನೇಮಕಾತಿಗೆ ಅಧಿಸೂಚನೆ
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ ಆರೋಗ್ಯ ಇಲಾಖೆಯ 32,870 ಹುದ್ದೆ ನೇಮಕಾತಿಗೆ ಅಧಿಸೂಚನೆ

By kannadanewsnow0917/12/2024 3:23 PM

ಬೆಳಗಾವಿ ಸುವರ್ಣಸೌಧ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಸೋಮವಾರದಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು
ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ.

ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಒಂದು ವರ್ಷದ ಕಡ್ಡಾಯ ಸೇವೆಗಾಗಿ ಬರುವ ವೈದ್ಯ ಅಭ್ಯರ್ಥಿ/ತಜ್ಞ ವೈದ್ಯ ಅಭ್ಯರ್ಥಿಗಳನ್ನು ವೈದ್ಯರ/ತಜ್ಞರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಇಲಾಖೆಯಲ್ಲಿ ಖಾಲಿಯಿರುವ 120 ತಜ್ಞ ವೈದ್ಯರು ಹಾಗೂ 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ರೋಗಿಗಳಿಗೆ ಅಡಚಣೆಯಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಫಾರ್ಮಸಿ ಅಧಿಕಾರಿಯ 400 ಹುದ್ದೆ, ಕಿರಿಯ ವೈದ್ಯಾಧಿಕಾರಿ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಯ 150 ಹುದ್ದೆ, ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿಯ 8 ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆಯಲ್ಲಿದೆ.

ಇಲಾಖೆಯಲ್ಲಿ ಖಾಲಿ ಇರುವ 200 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿ ಅಧಿಕಾರಿಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡುವವರೆಗೆ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮತಿ ನೀಡಲಾಗಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿನ ಖಾಲಿಯಿರುವ ಒಟ್ಟು 320 ವಿವಿಧ ಅರೆ ವೈದ್ಯಕೀಯ ಹುದ್ದೆಗಳನ್ನು ವಿಶೇಷ ನೇಮಕಾತಿ ಸಮಿತಿ ಮೂಲಕ ಭರ್ತಿ ಮಾಡಲು Online ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿನ ಸಹಾಯಕ ಕೀಟ ಶಾಸ್ತ್ರಜ್ಞರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಖಾಲಿಯಿರುವ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಮುಂದುವರೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 9871 ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿದ್ದು, ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಿದ ನಂತರ ಈ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

GOOD NEWS: 2025ರಿಂದ ‘NCERT ಪಠ್ಯಪುಸ್ತಕ’ಗಳ ಬೆಲೆ ಇಳಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NCERT textbooks

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಕಾನೂನು ತರುತ್ತೇವೆ : DCM ಡಿ.ಕೆ. ಶಿವಕುಮಾ‌ರ್

10/06/2025 6:05 AM1 Min Read

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಹಗಲಲ್ಲೂ ಕರೆಂಟ್ ಸ್ಟೀಂ’ಗೆ ನಾಳೆ ಚಾಲನೆ

10/06/2025 5:59 AM1 Min Read

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಬೋರ್ವೆಲ್’ ಕೊರೆಸಲು ಸಿಗಲಿದೆ 4 ಲಕ್ಷ ರೂ. ಸಬ್ಸಿಡಿ.!

10/06/2025 5:45 AM2 Mins Read
Recent News

BIG NEWS : ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಕಾನೂನು ತರುತ್ತೇವೆ : DCM ಡಿ.ಕೆ. ಶಿವಕುಮಾ‌ರ್

10/06/2025 6:05 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಹಗಲಲ್ಲೂ ಕರೆಂಟ್ ಸ್ಟೀಂ’ಗೆ ನಾಳೆ ಚಾಲನೆ

10/06/2025 5:59 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಬೋರ್ವೆಲ್’ ಕೊರೆಸಲು ಸಿಗಲಿದೆ 4 ಲಕ್ಷ ರೂ. ಸಬ್ಸಿಡಿ.!

10/06/2025 5:45 AM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

10/06/2025 5:30 AM
State News
KARNATAKA

BIG NEWS : ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಕಾನೂನು ತರುತ್ತೇವೆ : DCM ಡಿ.ಕೆ. ಶಿವಕುಮಾ‌ರ್

By kannadanewsnow5710/06/2025 6:05 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಸೂಕ್ತ ಕಾನೂನು…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಹಗಲಲ್ಲೂ ಕರೆಂಟ್ ಸ್ಟೀಂ’ಗೆ ನಾಳೆ ಚಾಲನೆ

10/06/2025 5:59 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಬೋರ್ವೆಲ್’ ಕೊರೆಸಲು ಸಿಗಲಿದೆ 4 ಲಕ್ಷ ರೂ. ಸಬ್ಸಿಡಿ.!

10/06/2025 5:45 AM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

10/06/2025 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.