Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM

BIG NEWS : ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ ; ನಿರುದ್ಯೋಗ ದರ ಶೇ. 5.1 ರಿಂದ ಶೇ. 5.6ಕ್ಕೆ ಏರಿಕೆ

17/06/2025 6:19 AM

BREAKING : ನೇರ ಪ್ರಸಾರದ ವೇಳೆ ಇರಾನ್ ‘ಸರ್ಕಾರಿ ಟಿವಿ ಸ್ಟುಡಿಯೋ’ ಮೇಲೆ ಇಸ್ರೇಲ್ ದಾಳಿ : ವಿಡಿಯೋ ವೈರಲ್ | WATCH VIDEO

17/06/2025 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ‘1000 ಗ್ರಾಮ ಲೆಕ್ಕಿಗ ನೇಮಕಾತಿ ಅಧಿಸೂಚನೆ
KARNATAKA

‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ‘1000 ಗ್ರಾಮ ಲೆಕ್ಕಿಗ ನೇಮಕಾತಿ ಅಧಿಸೂಚನೆ

By kannadanewsnow0920/02/2024 5:12 AM

ಬೆಂಗಳೂರು: ಕಂದಾಯ ಇಲಾಖೆಯ ( Revenue Department ) ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ( Village Accountants Recruitment – VA ) ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

“ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರು ಪ್ರಶ್ನಿಸಿದ್ದರು.

ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಮುಂದುವರೆದು, “ಇತರೆ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಯಲ್ಲಿ ನೌಕರರ ಸಂಖ್ಯೆ ಅಧಿಕವಿದೆ. ಅಲ್ಲದೆ, ಸಾರ್ವಜನಿಕರಿಗೆ ಶೀಘ್ರ ಸೇವೆ ನೀಡುವ ಉದ್ದೇಶಿದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಹ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

ನಿಯೋಜನೆ ಮೇಲೆ ಅಧಿಕಾರಿಗಳು ಬೇರೆಡೆ ಕೆಲಸಕ್ಕೆ ತೆರಳುವ ಬಗ್ಗೆಯೂ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, “ಸರ್ಕಾರಕ್ಕೆ ಸಾರ್ವಜನಿಕರ ಹಿತ ಮುಖ್ಯ. ಹೀಗಾಗಿ ಕಂದಾಯ ಇಲಾಖೆ ನೌಕರರು ನಿಯೋಜನೆಯ ಮೇಲೆ ಬೇರೆಡೆ ತೆರಳುವುದು ಸರಿಯಲ್ಲ. ಅವರು ಸರ್ಕಾರ ನೌಕರಿ ಕೊಟ್ಟ ಕಡೆ ಕೆಲಸ ಮಾಡಲಿ” ಎಂದು ಅಭಿಪ್ರಾಯಪಟ್ಟರು.

ಮುಂದುವರೆದು, “ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದಾರೆ. ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಆದರೆ, ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಎಲ್ಲಾ ಜಿಲ್ಲಾಧಿಕಾರಿಗಳಿಗೂ ಈಗಾಗಲೇ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ವಿವೇಚನೆ ಮೇಲೆ ಗರಿಷ್ಠ 5 ಸ್ಥಾನಗಳನ್ನು ಹೊರತುಪಡಿಸಿ ಉಳಿದ ಎಲ್ಲ ನೌಕರರನ್ನೂ ಮೂಲ ಸ್ಥಾನಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಜನರಿಗೆ ಸರಳ ಹಾಗೂ ಶೀಘ್ರ ಸೇವೆ ಒದಗಿಸಲು ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

‘BMTC ನೌಕರ’ರಿಗೆ ಗುಡ್ ನ್ಯೂಸ್: ‘ಅಪಘಾತ ವಿಮಾ ಪರಿಹಾರ’ ಮೊತ್ತ ‘3 ಲಕ್ಷದಿಂದ 1 ಕೋಟಿ’ಗೆ ಹೆಚ್ಚಳ

ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM1 Min Read

BIG NEWS: ರಾಜ್ಯದ 1008 ಶಾಲೆಗಳಲ್ಲಿ LKG, UKG ತರಗತಿ ಪ್ರಾರಂಭ: ಸಚಿವ ಮಧು ಬಂಗಾರಪ್ಪ

17/06/2025 6:15 AM1 Min Read

GOOD NEWS: ಶೀಘ್ರವೇ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

17/06/2025 6:05 AM1 Min Read
Recent News

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

17/06/2025 6:23 AM

BIG NEWS : ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ ; ನಿರುದ್ಯೋಗ ದರ ಶೇ. 5.1 ರಿಂದ ಶೇ. 5.6ಕ್ಕೆ ಏರಿಕೆ

17/06/2025 6:19 AM

BREAKING : ನೇರ ಪ್ರಸಾರದ ವೇಳೆ ಇರಾನ್ ‘ಸರ್ಕಾರಿ ಟಿವಿ ಸ್ಟುಡಿಯೋ’ ಮೇಲೆ ಇಸ್ರೇಲ್ ದಾಳಿ : ವಿಡಿಯೋ ವೈರಲ್ | WATCH VIDEO

17/06/2025 6:18 AM

BIG NEWS: ರಾಜ್ಯದ 1008 ಶಾಲೆಗಳಲ್ಲಿ LKG, UKG ತರಗತಿ ಪ್ರಾರಂಭ: ಸಚಿವ ಮಧು ಬಂಗಾರಪ್ಪ

17/06/2025 6:15 AM
State News
KARNATAKA

BIG NEWS : ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿದಾರರ ಕಾರ್ಡ್ ರದ್ದು : ಸರ್ಕಾರದಿಂದ `ಥರ್ಡ್ ಪಾರ್ಟಿ’ ಸಮೀಕ್ಷೆ.!

By kannadanewsnow5717/06/2025 6:23 AM KARNATAKA 1 Min Read

ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಅನರ್ಹರರ ಪತ್ತೆಗೆ ರಾಜ್ಯ ಸರ್ಕಾರವು ಮಹತ್ವದ…

BIG NEWS: ರಾಜ್ಯದ 1008 ಶಾಲೆಗಳಲ್ಲಿ LKG, UKG ತರಗತಿ ಪ್ರಾರಂಭ: ಸಚಿವ ಮಧು ಬಂಗಾರಪ್ಪ

17/06/2025 6:15 AM

GOOD NEWS: ಶೀಘ್ರವೇ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

17/06/2025 6:05 AM

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

17/06/2025 6:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.