ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಆರ್ಥಿಕ ಮಿತವ್ಯಯದ ಕಾರಣ, ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ತಡೆ ನೀಡಿತ್ತು. ಕೋವಿಡ್ ಚೇತರಿಕೆಯ ನಂತ್ರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

BIG NEWS: ‘ಗಣೇಶೋತ್ಸವ’ ಸಂದರ್ಭದಲ್ಲಿ ‘ಉಗ್ರರ ದಾಳಿ’ಯ ಸಂಚು.?! ಮಹಾರಾಷ್ಟ್ರ ಕರಾವಳಿಯಲ್ಲಿ ಎಕೆ47 ಶಸ್ತ್ರಾಸ್ತ್ರ ತುಂಬಿದ್ದ ದೋಣಿ ಪತ್ತೆ.!

ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ದಿನಾಂಕ 13-08-2020ರಂದು ಆರ್ಥಿಕ ಮಿತವ್ಯಯ ಆದೇಶವನ್ನು ಜಾರಿಗೊಳಿಸಿದ್ದರಿಂದ ಖಾಸಗೀ ಅನುದಾನಿತ ಪದವಿ ಕಾಲೇಜುಗಳಲ್ಲಿ ಬಾಕಿ ಇರುವ ಬೋಧಕ-ಬೋಧಕೇತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು ಕ್ರಮ ಕೈಗೊಂಡಿರಲಿಲ್ಲ ಎಂದಿದ್ದಾರೆ.

ಹಾಸ್ಟೆಲ್​ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್​: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ

ಇದೀಗ ತುರ್ತಾಗಿ ಈ ಹುದ್ದೆಗಳ ಭರ್ತಿಗೆ ಅಗತ್ಯವಿರುವಂತ ಎಲ್ಲಾ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಖಾಲಿ ಹುದ್ದೆಗಳ ಮಾಹಿತಿಯನ್ನು, ಅನುದಾನಿತ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಇನ್ನಿತರೆ ಅಗತ್ಯ ಮಾಹಿತಿಗಳೊಂದಿಗೆ, ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಗೆ ಮೂರು ದಿನದೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.

Share.
Exit mobile version