Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTC ನಿವೃತ್ತ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ: ಶೇ.15ರಷ್ಟು ವೇತನ ಹೆಚ್ಚಳ | KSRTC Employees
KARNATAKA

KSRTC ನಿವೃತ್ತ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ: ಶೇ.15ರಷ್ಟು ವೇತನ ಹೆಚ್ಚಳ | KSRTC Employees

By kannadanewsnow5727/06/2024 9:32 PM

ಬೆಂಗಳೂರು: ಮಾನ್ಯ ಸಾರಿಗೆ ಹಾಗೂ ಮುಜರಾಯಿ‌ ಸಚಿವರ ಆದೇಶದಂತೆ
ನಿವೃತ್ತಿ ಹೊಂದಿದ ಅಧಿಕಾರಿಗಳು ಹಾಗೂ ನೌಕಕರು ಸುಮಾರು 10000 ಮಂದಿಗೆ ಈ ಹಿಂದೆ ದಿನಾಂಕ 01.03.2023 ರಿಂದ ಜಾರಿಗೊಳಿಸಿದ
ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿಗಳನ್ನು ಪರಿಷ್ಕರಿಸಿ, ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ( ಅಂದಾಜು ನಾಲ್ಕು ಸಾರಿಗೆ ನಿಗಮಗಳ ಮೊತ್ತ ರೂ.220 ಕೋಟಿ ) ಬಿಡುಗಡೆ ಮಾಡಲು ಆದೇಶ

ಈ ಸಂಬಂಧ ಹಲವು ಬಾರಿ ಮಾನ್ಯ ಸಾರಿಗೆ ಸಚಿವರನ್ನು ಭೇಟಿ ಮಾಡಿ ನಮಗೆ ಸದರಿ ಆದೇಶವನ್ನು ಬಿಡುಗಡೆಗೊಳಿಸಬೇಕೆಂದು ಕಾರ್ಮಿಕ ಸಂಘಟನೆಗಳ‌ ಮುಖಂಡರುಗಳು ಮನವಿ ಸಲ್ಲಿಸಿದ್ದರು. ಈ‌ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಮಾರ್ಚ್ ನಲ್ಲಿಯೇ ಭರವಸೆ ನೀಡಿದ್ದ ಸಾರಿಗೆ ಸಚಿವರು ಚುನಾವಣೆ‌ ನೀತಿ ಸಂಹಿತೆ ಕಾರಣ ಬಿಡುಗಡೆಯಾಗದೆ ಉಳಿದಿದ್ದ ಆದೇಶಕ್ಕೆ ಇಂದು ಸಹಿಯಾಗಿದೆ.

ಸರ್ಕಾರದ ಆದೇಶ ಸಂಖ್ಯೆ ಟಿ.ಡಿ 12 ಟಿಸಿಬಿ 2023 ಬೆಂಗಳೂರು ದಿನಾಂಕ 17.03.2023 ರಲ್ಲಿ ಅಧಿಕಾರಿ ಮತ್ತು ನೌಕರರು ದಿನಾಂಕ 31.12.2019 ರಂದು ಪಡೆಯುತ್ತಿದ್ದ ಮೂಲವೇತನವನ್ನು ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿಗಳನ್ನು ಪರಿಷ್ಕರಿಸಿ, ದಿನಾಂಕ 01.03.2023 ರಿಂದ ಜಾರಿಗೊಳಿಸಲು ಆದೇಶಿಸಿರುವಂತೆ, ದಿನಾಂಕ 01.03.2023 ರಂದು ಸಂಸ್ಥೆಯ ಸೇವೆಯಲ್ಲಿದ್ದ (On Roll) ಅಧಿಕಾರಿ/ನೌಕರರಿಗೆ ದಿನಾಂಕ 01.01.2020 ರಿಂದ ದಿನಾಂಕ 28.02.2023 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಸಿ, ದಿನಾಂಕ 01.03.2023 ರಿಂದ ಜಾರಿಗೊಳಿಸಿ, ಏಪ್ರಿಲ್-2023 ರ ಮಾಹೆಯಿಂದ ಮತ್ತು ಮುಂದಕ್ಕೆ ವೇತನದಲ್ಲಿ ಅನುಷ್ಠಾನಗೊಳಿಸಲು ಹಾಗೂ ಮಾರ್ಚ್-2023 ರ ಮಾಹೆಯ ವ್ಯತ್ಯಾಸವನ್ನು ಏಪ್ರಿಲ್-2023 ರ ಮಾಹೆಯ ವೇತನದೊಂದಿಗೆ ಸೇರಿಸಿ ಪಾವತಿಸಲು ಸುತ್ತೋಲೆ ಸಂಖ್ಯೆ 16/2023 ದಿನಾಂಕ 28.03.2023 ರಲ್ಲಿ ತಿಳಿಸಲಾಗಿತ್ತು.

ಪ್ರಸ್ತುತ ದಿನಾಂಕ 01.01.2020 ರಿಂದ ದಿನಾಂಕ 28.02.2023 ರ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಅರ್ಹ ದಿನಾಂಕದವರೆಗೆ ವೇತನವನ್ನು ನೋಷನಲ್ ಆಗಿ ನಿಗದಿಪಡಿಸಲು ಹಾಗೂ ನಿಗದಿಪಡಿಸಿದ ವೇತನವನ್ನು ಅಧಿಕಾರಿ/ನೌಕರನು ಅಂತಿಮ ದಿನಾಂಕದಂದು ಪಡೆಯುತ್ತಿದ್ದ ಮೂಲವೇತನವೆಂದು ಪರಿಗಣಿಸಿ, ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳನ್ನು ಮಾತ್ರ ಲೆಕ್ಕಾಚಾರ ಮಾಡಿ ಪಾವತಿಸಲು ಅನುಮೋದನೆ ನೀಡಲಾಗಿದೆ.

ಅದರಂತೆ ದಿನಾಂಕ 01.01.2020 ರಿಂದ ದಿನಾಂಕ 28.02.2023 ರ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಅರ್ಹ ದಿನಾಂಕದವರೆಗೆ ಸುತ್ತೋಲೆ ಸಂಖ್ಯೆ 16/23 ರಲ್ಲಿ ತಿಳಿಸಿರುವ ವಿಧಾನಗಳನ್ನು ಅನುಸರಿಸಿ, ಪರಿಷ್ಕೃತ ವೇತನ ನಿಗದಿ (ನೋಷನಲ್ ಆಗಿ) ಪಟ್ಟಿಗಳನ್ನು ದಿನಾಂಕ 31.08.2024 ರೊಳಗಾಗಿ ತಯಾರಿಸಲು ಅಗತ್ಯ ಕ್ರಮಕೈಗೊಳ್ಳುವುದು.

ನೋಷನಲ್ ಆಗಿ ನಿಗದಿಪಡಿಸಿದ ಪರಿಷ್ಕೃತ ಮೂಲವೇತನವನ್ನು ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳ ವ್ಯತ್ಯಾಸಗಳ ಪಾವತಿಗಾಗಿ ಮಾತ್ರ ಪರಿಗಣಿಸುವುದು.

ಮುಂದುವರೆದು ಅರ್ಹ ಸೇವಾ ವಿಮುಕ್ತ ಅಧಿಕಾರಿ/ನೌಕರರ ಪರಿಷ್ಕೃತ ವೇತನ ನಿಗದಿಯನ್ವಯ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳ ವ್ಯತ್ಯಾಸಗಳನ್ನು ಲೆಕ್ಕಾಚಾರಗೊಳಿಸಿ, ಗಳಿಕೆ ರಜೆ ನಗದೀಕರಣ ಬಿಲ್ಲಿನಲ್ಲಿ ಶಾಸನ ಬದ್ದ ಕಡಿತಗಳನ್ನು ಹಾಗೂ ಅಧಿಕಾರಿ/ನೌಕರನಿಂದ ಬರಬೇಕಾದ ಯಾವುದೇ ಬಾಕಿ ಮೊತ್ತವಿದ್ದಲ್ಲಿ ಕಡಿತಗೊಳಿಸಿ ಪಾವತಿಸಬೇಕಾದ ನಿವ್ವಳ ಮೊತ್ತದ ಕ್ಲೀಮ್‌ಗಳನ್ನು ದಿನಾಂಕ 30.09.2024 ರೊಳಗಾಗಿ ಸಿದ್ದಪಡಿಸಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳುವುದು.

ಕರಾರಸಾ/ಬೆಂಮನಸಾ/ವಾಕರಸಾ/ಕಕರಸಾ ಸಂಸ್ಥೆಗಳು ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳ ವ್ಯತ್ಯಾಸದ ಕ್ಲೀಮ್‌ಗಳ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸಿ, ಸಾಧ್ಯವಾದಲ್ಲಿ 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಪಾವತಿಸಲು ಅಗತ್ಯ ಕ್ರಮಕೈಗೊಳ್ಳುವುದು.

Good news for ksrtc retired transport employees: 15% pay hike | KSRTC Employees
Share. Facebook Twitter LinkedIn WhatsApp Email

Related Posts

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM1 Min Read

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM4 Mins Read

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM1 Min Read
Recent News

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM
State News
KARNATAKA

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

By kannadanewsnow0511/01/2026 9:08 PM KARNATAKA 1 Min Read

ಉತ್ತರಕನ್ನಡ : ಪಾಗಲ್ ಪ್ರೇಮಿ ಒಬ್ಬ ಪ್ರೀತ್ಸೆ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ…

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM

ಮಂಗಳೂರಿನಲ್ಲಿ ಘೋರ ಘಟನೆ : ಚುರುಮುರಿ ಸ್ಟಾಲ್ ಗೆ ಬಂದ ಹಸುವಿಗೆ ಚೂರಿ ಇರಿದ ಪಾಪಿ!

11/01/2026 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.