ಬೆಂಗಳೂರು : ಮದ್ಯ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ ನೆಮ್ಮದಿಯ ಸುದ್ದಿ ನೀಡಿದ್ದು, ನಾಳೆಯಿಂದ ಮದ್ಯದ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಸಿಎಂ ಸಿದ್ದರಾಮಯ್ಯ ತಡೆ ನೀಡಿದ್ದು, ಆಗಸ್ಟ್‌ 1 ರಿಂದ ಹೊಸ ದರಗಳು ಜಾರಿಗೆ ಬರಲಿವೆ.

ರಾಜ್ಯದಲ್ಲಿ ನಂದಿನಿ ಹಾಲು ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಇದೀಗ ಆಗಸ್ಟ್‌ 1 ರಿಂದ ಮದ್ಯದ ದರ ಏರಿಕೆ ಮಾಡಲು ನಿರ್ಧರಿಸಿದೆ.

ಜುಲೈ 1 ರಿಂದ ಅವಯವಾಗುವಂತೆ ಮದ್ಯದ ದರ ಪರಿಷ್ಕರಣೆ ನಡೆಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಒಂದು ತಿಂಗಳ ಮಟ್ಟಿಗೆ ದರ ಪರಿಷ್ಕರಣೆ ಮಾಡದೆ, ಯಥಾಸ್ಥಿತಿ ಮುಂದುವರೆಸುವಂತೆ ಅಬಕಾರಿ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ಆಗಸ್ಟ್‌ 1 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.

Share.
Exit mobile version