Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಮಹಾನಗರ ಪಾಲಿಕೆಯ ನೌಕರ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ
KARNATAKA

GOOD NEWS: ‘ಮಹಾನಗರ ಪಾಲಿಕೆಯ ನೌಕರ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ

By kannadanewsnow0913/09/2024 7:56 PM

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಮಹಾನಗರ ಪಾಲಿಕೆಯ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ.

ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿನಾಂಕ: 22.07.2024ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಿ, ಅದರಂತೆ ರಾಜ್ಯ ಸರ್ಕಾರಿ ನೌಕರರ ಮುಖ್ಯವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಹಾಗೂ ಪಿಂಚಣಿಯನ್ನು ದಿನಾಂಕ: 01.07.2022 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿರುತ್ತದೆ. ಈ ಆದೇಶದ ಕಂಡಿಕೆ (8) ರಲ್ಲಿ ಅನ್ವಯಿಸುವ ಬದಲಾವಣೆಗಳೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ದಿನಾಂಕ: 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಚಿಸಲಾಗಿರುತ್ತದೆ.

ದಿನಾಂಕ: 23.08.2024ರ ಆದೇಶದಲ್ಲಿನ ಕಂಡಿಕೆ 11.1 ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ ಎಂದು ತಿಳಿಸಲಾಗಿರುತ್ತದೆ.

ದಿನಾಂಕ: 02.09.2024ರ ಪತ್ರದಲ್ಲಿ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರು, ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024, ದಿನಾಂಕ: 22.07.2024 ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಅಂಗೀಕರಿಸಿ, ಕಂಡಿಕೆ (8) ರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳಿಗೆ ಈ ಸೌಲಭ್ಯವನ್ನು ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ.

ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024, ದಿನಾಂಕ: 17.08.2024 ಮತ್ತು 23.08.2024 ರ ಆದೇಶದಲ್ಲಿ, ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗಧಿಪಡಿಸುವ ಕುರಿತು ವಿಸ್ತಾರವಾದ ಆದೇಶವನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದ ಕಂಡಿಕೆ (11.1) ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಆದೇಶ ಹೊರಡಿಸುವಂತೆ ನಮೂದಿಸಲಾಗಿರುತ್ತದೆ.

ಸರ್ಕಾರದ ಆದೇಶ ಸಂಖ್ಯೆ: ಆಇ / ಪಿಇಎನ್ / 262 / 2024, ದಿನಾಂಕ: 28.08.2024 ರಲ್ಲಿ ರಾಜ್ಯ ಸರ್ಕಾರಿ ನಿವೃತ್ತಿದಾರರಿಗೆ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿರುತ್ತದೆ. ಆದ್ದರಿಂದ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 2024ರ ಪರಿಷ್ಕೃತ ಪಿಂಚಣಿ ಶ್ರೇಣಿಯನ್ನು ಮಹಾನಗರ ಪಾಲಿಕೆ ವೃಂದದ ಪಿಂಚಣಿದಾರರಿಗೆ ಯಥಾವತ್ತಾಗಿ ವಿಸ್ತರಿಸಲು ಆದೇಶ ಹೊರಡಿಸುವಂತೆ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರು ಕೋರಿರುತ್ತಾರೆ.

ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರ ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದ್ದಾರೆ.

7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ, ಸರ್ಕಾರದ ಆದೇಶ ಸಂಖ್ಯೆ: ಆಇ 21 2024, DO: 22.07.2024, 17.08.2024 3 23.08.2024 ಹೊರಡಿಸಲಾಗಿದ್ದು, ಸದರಿ ಆದೇಶಗಳಲ್ಲಿ ತಿಳಿಸಿರುವಂತೆ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಸೌಲಭ್ಯಗಳನ್ನು ಯಥಾವತ್ತಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರುಗಳಿಗೂ ಸಹಾ ಯಥಾವತ್ತಾಗಿ ಜಾರಿಗೊಳಿಸಲು ಆದೇಶಿಸಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಹಣಕಾಸು ಆಯೋಗದ ವೇತನ ಅನುದಾನದಿಂದ ಭರಿಸತಕ್ಕದ್ದು ಎಂದು ತಿಳಿಸಿದ್ದಾರೆ.

‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಸಂಭ್ರಮದಿಂದ ಆಚರಿಸಲು ‘ಡಾ.ಬಿಳಿಮಲೆ’ ಕರೆ

BIG NEWS: ಕರ್ನಾಟಕದಲ್ಲಿ ‘ಮಹಿಳಾ ಆರೋಗ್ಯ ಸಿಬ್ಬಂದಿ’ಯ ಸುರಕ್ಷತೆಗೆ ಬರಲಿದೆ ‘AI ತಂತ್ರಜ್ಞಾನ’ದ ಭದ್ರತಾ ವ್ಯವಸ್ಥೆ

Share. Facebook Twitter LinkedIn WhatsApp Email

Related Posts

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM2 Mins Read

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read
Recent News

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM
State News
KARNATAKA

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

By kannadanewsnow0907/06/2025 8:48 PM KARNATAKA 2 Mins Read

ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು…

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.