ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನ ಉಪಹಾರ ಯೋಜನೆಯ ಮುಖ್ಯ ಅಡುಗೆಯವರು, ಸಹಾಯಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮಾಸಿಕ ಗೌರವ ಸಂಭಾವನೆಯನ್ನು 1000ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ತ್ರಿಲೋಕ ಚಂದ್ರ ಕೆವಿ ಅವರು ಸುತ್ತೋಲೆ ಹೊರಡಿಸಿದ್ದಾರೆ. 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯ 109ರಲ್ಲಿ ಘೋಷಣಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000ಗಳಷ್ಟು ಹೆಚ್ಚಿಸುವ ಕುರಿತಂತೆ ಉಲ್ಲೇಖಿಸಲಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಉಲ್ಲೇಖದಂತೆ ಮುಖ್ಯ ಅಡುಗೆಯವರು, ಸಹಾಯಕ ಅಡುಗೆಯವರಿಗೆ ಮಾಸಿಕ ಸಂಭಾವನೆ ಕೇಂದ್ರದ ಶೇ.60ರಷ್ಟು ಅಂದರೆ ರೂ.600 ಹಾಗೂ ಮಾಸಿಕ ಸಂಭಾವನೆ ರಾಜ್ಯದ ಶೇ.40ರಷ್ಟು ಅಂದರೆ ರೂ.400 ಸೇರಿದಂತೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಹೆಚ್ಚುವರಿ ಮಾಸಿಕ ಸಂಭಾವನೆಯ ಮೊತ್ತ ರೂ.3700 ಸೇರಿಸಿ, ರೂ.4700 ಮಾಸಿಕ ಸಂಭಾವನೆ ಮೊತ್ತ ನೀಡಲಾಗುವುದು ಅಂತ ತಿಳಿಸಿದ್ದಾರೆ.
ಇನ್ನೂ ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸದರಿ ಆದೇಶವನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು
ಜೂನ್.20ರಂದು ಬೆಂಗಳೂರಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ | Power Cut