Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಉಡಾವಣೆಯಾದ ಕೂಡಲೇ ಅಪಘಾತಕ್ಕೀಡಾದ ಎಲೋನ್ ಮಸ್ಕ್ ‘ಸೂಪರ್ ಹೆವಿ ರಾಕೆಟ್’

28/05/2025 6:45 AM

BREAKING : ಕುವೈತ್ ಗೆ ಹೋಗಿದ್ದ ಸರ್ವಪಕ್ಷ ನಿಯೋಗದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಆಸ್ಪತ್ರೆಗೆ ದಾಖಲು

28/05/2025 6:35 AM

ಎಲ್ಎಸ್ಜಿ ವಿರುದ್ಧ ಆರ್ಸಿಬಿಗೆ 6 ವಿಕೆಟ್ಗಳ ಜಯ | IPL 2025

28/05/2025 6:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಚಾಲಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ QR Code ಸಮೇತ DL, RC ಸ್ಮಾರ್ಟ್‌ ಕಾರ್ಡ್ ವಿತರಣೆ!
KARNATAKA

ವಾಹನ ಚಾಲಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ QR Code ಸಮೇತ DL, RC ಸ್ಮಾರ್ಟ್‌ ಕಾರ್ಡ್ ವಿತರಣೆ!

By kannadanewsnow5726/09/2024 11:29 AM

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿಗೆ ಬರಲಿದ್ದು, ಡಿಜಿಟಲ್ ತಂತ್ರಜ್ಞಾನ ಬಳಕೆಗೆ ಮಹತ್ವದ ಕ್ರಮ ಕೈಗೊಂಡಿರುವ ಸರ್ಕಾರ, ಕ್ಯೂಆರ್ ಕೋಡ್ ಮತ್ತು ಚಿಪ್ ಹೊಂದಿದ ಸ್ಮಾರ್ಟ್ ಡಿಎಲ್ ಮತ್ತು ಆರ್‌ಸಿಗಳನ್ನು 2025ರ ಜನವರಿಯಿಂದ ವಿತರಿಸಲು ಮುಂದಾಗಿದೆ.

ಹೌದು, ಈಗಾಗಲೇ ನಿಮ್ಮ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ಗಳಲ್ಲಿ ಚಿಪ್ ಇದೆ. ಇನ್ಮುಂದೆ ಹೊಸ ಡಿಎಲ್‌ಗಳಲ್ಲಿ ಕ್ಯೂಆರ್ ಕೋಡ್ ಕೂಡಾ ಇರಲಿದೆ. 2025 ರ ಜನವರಿಯಿಂದ ಈ ಯೋಜನೆ ಜಾರಿಗೆ ಬರಲಿದೆ. ದೇಶಾದ್ಯಂತ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ಗಳು ಒಂದೇ ರೀತಿ ಇರಬೇಕು ಅನ್ನೋದು ಸರ್ಕಾರದ ಚಿಂತನೆ. ವಾಹನ ಚಾಲನಾ ಪರವಾನಗಿ ಹಾಗೂ ವಾಹನಗಳ ನೋಂದಣಿ ಪ್ರಮಾಣ ಪತ್ರದಲ್ಲಿ ಇರುವ ಎಲ್ಲಾ ರೀತಿಯ ಲೋಪ ದೋಷಗಳನ್ನ ನಿವಾರಣೆ ಮಾಡಬೇಕು ಅನ್ನೋದು ಸರ್ಕಾರದ ನಿಲುವು. ಇದಕ್ಕಾಗಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಒಂದಷ್ಟು ನಿಯಮಾವಳಿಗಳನ್ನ ರೂಪಿಸಿದೆ. ಈ ನಿಯಮಾವಳಿಗಳ ಪ್ರಕಾರವೇ ಎಲ್ಲ ರಾಜ್ಯಗಳಲ್ಲೂ ಹೊಸ ಕಾರ್ಡ್‌ ವಿತರಣೆ ಮಾಡಲಾಗುತ್ತದೆ.

ಡಿಎಲ್‌ನ ಮುಂಭಾಗದಲ್ಲಿ ಕಾರ್ಡ್‌ ಮಾಲೀಕರ ಹೆಸರು, ಫೋಟೋ, ಅಡ್ರೆಸ್, ಹುಟ್ಟಿದ ದಿನಾಂಕ, ರಕ್ತದ ಗುಂಪು ಸೇರಿದಂತೆ ಹಲವು ವಿವರಗಳು ಇರುತ್ತವೆ. ಡಿಎಲ್‌ನ ಹಿಂಭಾಗದಲ್ಲಿ ನಿಮ್ಮ ಮೊಬೈಲ್ ನಂಬರ್, ಯಾವೆಲ್ಲಾ ಮಾದರಿಯ ವಾಹನ ಚಲಾಯಿಸಲು ಅನುಮತಿ ಇದೆ ಅನ್ನೋ ವಿವರ ಇರುತ್ತೆ. ಇನ್ನು ಈ ಎಲ್ಲಾ ವಿಷಯಗಳೂ ಚಿಪ್‌ಗಳಲ್ಲಿ ಇರುವ ಜೊತೆಯಲ್ಲೇ ಕ್ಯೂ ಆರ್ ಕೋಡ್‌ನಲ್ಲೂ ಇರಲಿದೆ. ಅಷ್ಟೇ ಅಲ್ಲ, ತುರ್ತು ಸಂಪರ್ಕ ಸಂಖ್ಯೆ ಕೂಡಾ ಇರುತ್ತೆ.

ಡಿಎಲ್ ಮತ್ತು ಆರ್.ಸಿ. ಸ್ಮಾರ್ಟ್ ಕಾರ್ಡ್ ಟೆಂಡರ್ ಕರೆಯಲಾಗಿದ್ದು, ಪರಿಶೀಲನೆ ಹಂತದಲ್ಲಿದೆ. ಇನ್ನೆರಡು ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಂಡು ಅನುಮೋದನೆ ದೊರೆತಲ್ಲಿ 60 ದಿನದಲ್ಲಿ ಸ್ಮಾರ್ಟ್ ಡಿಎಲ್ ಮತ್ತು ಆರ್.ಸಿ. ಕಾರ್ಡ್ ಗಳ ವಿತರಣೆ ಆರಂಭವಾಗಲಿದೆ. ಎಲ್ಲಾ ರಾಜ್ಯಗಳ ಡಿಎಲ್ ಗಳು ಮತ್ತು ಆರ್.ಸಿ.ಗಳು ಒಂದೇ ರೀತಿ ಇರಲಿದ್ದು, ಕ್ಯೂಆರ್ ಕೋಡ್ ನಿಂದಾಗಿ ಸಂಚಾರ ಪೊಲೀಸರು ಸೇರಿ ಇತರೆ ಇಲಾಖೆಗಳ ಅಧಿಕಾರಿಗಳು ಸುಲಭವಾಗಿ ವಾಹನ ಚಾಲಕರು, ಮಾಲೀಕರ ವಿವರ ಪರಿಶೀಲಿಸಬಹುದಾಗಿದೆ. ಡಿಎಲ್ ನಲ್ಲಿ ಕಾರ್ಡ್ ದಾರರ ಹೆಸರು, ಫೋಟೋ, ವಿಳಾಸ, ಸಿಂಧುತ್ವ ಅವಧಿ, ಜನ್ಮ ದಿನಾಂಕ, ರಕ್ತದ ಗುಂಪು ಮೊಬೈಲ್ ಸಂಖ್ಯೆ, ತುರ್ತು ಸಂಪರ್ಕ ಸಂಖ್ಯೆ ಸೇರಿ 25ಕ್ಕೂ ಹೆಚ್ಚು ಮಾಹಿತಿ ಇರುತ್ತದೆ.

ಹೊಸ ಆರ್‌ಸಿ ಕಾರ್ಡ್ ಮುಂಭಾಗದಲ್ಲಿ ವಾಹನದ ನೋಂದಣಿ ಸಂಖ್ಯೆ, ನೋಂದಣಿ ಆದ ದಿನಾಂಕ, ಕಾರ್ಡ್‌ ಅಂತ್ಯ ಆಗುವ ದಿನಾಂಕ, ಚಾಸಿಸ್ ಸಂಖ್ಯೆ, ಎಂಜಿನ್ ಸಂಖ್ಯೆ ಜೊತೆಯಲ್ಲೇ ವಾಹನಗಳ ಟ್ರ್ಯಾಕಿಂಗ್ ಸಿಸ್ಟಂ ಕೂಡಾ ಅಳವಡಿಕೆ ಮಾಡಲಾಗಿರುತ್ತೆ. ಇನ್ನು ಆರ್‌ಸಿ ಕಾರ್ಡ್‌ನ ಹಿಂಭಾಗದಲ್ಲಿ ವಾಹನ ತಯಾರಕರ ಹೆಸರು, ವಾಹನದ ಮಾದರಿ, ಸೀಟುಗಳ ಸಾಮರ್ಥ್ಯ ಸೇರಿದಂತೆ ಹಲವು ಅಂಶಗಳನ್ನು ನಮೂದು ಮಾಡಲಾಗಿರುತ್ತದೆ.

Good news for motorists: DL RC smart cards with QR code issued in the state! RC ಸ್ಮಾರ್ಟ್‌ ಕಾರ್ಡ್ ವಿತರಣೆ! ವಾಹನ ಚಾಲಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ QR Code ಸಮೇತ DL
Share. Facebook Twitter LinkedIn WhatsApp Email

Related Posts

BREAKING : ಜುಲೈನಿಂದ ಅನರ್ಹರಿಗೆ ‘ಗ್ಯಾರಂಟಿ’ ಯೋಜನೆಗಳು ಬಂದ್ : ಬಸವರಾಜ ರಾಯರೆಡ್ಡಿ ಹೇಳಿಕೆ

28/05/2025 6:18 AM1 Min Read

BIG NEWS : ರಾಜ್ಯದಲ್ಲಿ ಬಾಂಗ್ಲಾ ಸೇರಿದಂತೆ ಅಕ್ರಮ ವಲಸಿಗರ ಗಣತಿ : ಗೃಹ ಸಚಿವ ಜಿ.ಪರಮೇಶ್ವರ್

28/05/2025 6:10 AM1 Min Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 540 ಅರಣ್ಯ ರಕ್ಷಕ ಸೇರಿ ಇತರೆ ಹುದ್ದೆಗಳಿಗೆ ನೇಮಕಾತಿ ಆರಂಭ | JOB ALERT

28/05/2025 6:01 AM1 Min Read
Recent News

Watch video: ಉಡಾವಣೆಯಾದ ಕೂಡಲೇ ಅಪಘಾತಕ್ಕೀಡಾದ ಎಲೋನ್ ಮಸ್ಕ್ ‘ಸೂಪರ್ ಹೆವಿ ರಾಕೆಟ್’

28/05/2025 6:45 AM

BREAKING : ಕುವೈತ್ ಗೆ ಹೋಗಿದ್ದ ಸರ್ವಪಕ್ಷ ನಿಯೋಗದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಆಸ್ಪತ್ರೆಗೆ ದಾಖಲು

28/05/2025 6:35 AM

ಎಲ್ಎಸ್ಜಿ ವಿರುದ್ಧ ಆರ್ಸಿಬಿಗೆ 6 ವಿಕೆಟ್ಗಳ ಜಯ | IPL 2025

28/05/2025 6:31 AM

BREAKING : ಜುಲೈನಿಂದ ಅನರ್ಹರಿಗೆ ‘ಗ್ಯಾರಂಟಿ’ ಯೋಜನೆಗಳು ಬಂದ್ : ಬಸವರಾಜ ರಾಯರೆಡ್ಡಿ ಹೇಳಿಕೆ

28/05/2025 6:18 AM
State News
KARNATAKA

BREAKING : ಜುಲೈನಿಂದ ಅನರ್ಹರಿಗೆ ‘ಗ್ಯಾರಂಟಿ’ ಯೋಜನೆಗಳು ಬಂದ್ : ಬಸವರಾಜ ರಾಯರೆಡ್ಡಿ ಹೇಳಿಕೆ

By kannadanewsnow0528/05/2025 6:18 AM KARNATAKA 1 Min Read

ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.…

BIG NEWS : ರಾಜ್ಯದಲ್ಲಿ ಬಾಂಗ್ಲಾ ಸೇರಿದಂತೆ ಅಕ್ರಮ ವಲಸಿಗರ ಗಣತಿ : ಗೃಹ ಸಚಿವ ಜಿ.ಪರಮೇಶ್ವರ್

28/05/2025 6:10 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 540 ಅರಣ್ಯ ರಕ್ಷಕ ಸೇರಿ ಇತರೆ ಹುದ್ದೆಗಳಿಗೆ ನೇಮಕಾತಿ ಆರಂಭ | JOB ALERT

28/05/2025 6:01 AM

BIG NEWS : ಬೆಂಗಳೂರಲ್ಲಿ ‘ಡ್ರಗ್ಸ್’ ಮಟ್ಟ ಹಾಕಲು ಕಠಿಣ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

28/05/2025 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.