ಬೆಂಗಳೂರು: ನಮ್ಮ ಮೆಟ್ರೋ ಇದೀಗ ಹೈಟೆಕ್ ಆಗುತ್ತಿದೆ. ಮೆಟ್ರೋ ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಬಿಎಂಆರ್ಸಿಎಲ್ ಪ್ಲ್ಯಾನ್ ಮಾಡಿದೆ.
BIGG NEWS: ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಪುತ್ರ ಯತೀಂದ್ರ? ಯಾವ ಕ್ಷೇತ್ರ ಗೊತ್ತಾ?
ಆದಾಯ ಸಂಗ್ರಹಣೆ ಭಾಗವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಲ್ಲಿ ಇನ್ನೂ 4 ಮಹಡಿಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.ಬೆಂಗಳೂರಿನ ಮೆಜೆಸ್ಟಿಕ್ ಸದಾ ಜನದಟ್ಟಣೆಯಿಂದ ಕೂಡಿರುವ ಪ್ರದೇಶ. ಪ್ರತಿನಿತ್ಯ ಲಕ್ಷಾಂತರ ಜನರು ಈ ಪ್ರದೇಶಕ್ಕೆ ಭೇಟಿ ನೀಡುತ್ತಾರೆ.
BIGG NEWS: ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಪುತ್ರ ಯತೀಂದ್ರ? ಯಾವ ಕ್ಷೇತ್ರ ಗೊತ್ತಾ?
ನಮ್ಮ ಮೆಟ್ರೋ ಹೊರತುಪಡಿಸಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣ, ರೈಲು ನಿಲ್ದಾಣ ಸಹ ಇದೇ ಪ್ರದೇಶದಲ್ಲಿದೆ. ಇಲ್ಲಿ ವಾಣಿಜ್ಯ ಚಟುವಟಿಕೆ ಆರಂಭಿಸಿದರೆ ಅನುಕೂಲವಾಗಲಿದೆ ಎಂಬುದು ಬಿಎಂಆರ್ಸಿಎಲ್ ಲೆಕ್ಕಾಚಾರ. ಈ ಕಾರಣಕ್ಕಾಗಿಯೇ ಮೆಟ್ರೋ ನಿಲ್ದಾಣದಲ್ಲಿ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಿ ಶಾಪಿಂಗ್ ಮಾಲ್, ಥಿಯೇಟರ್, ಕಚೇರಿಗಳಿಗೆ ಬಾಡಿಗೆ ನೀಡಲು ಬಿಎಂಆರ್ಸಿಎಲ್ ನಿರ್ಧರಿಸಿದೆ.