Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ನಮ್ಮ ಮಕ್ಕಳೇ ನಮ್ಮ ಜಗತ್ತು” : ಬಂಗಲೆ ಖಾಲಿ ಮಾಡುವಲ್ಲಿನ ವಿಳಂಬದ ಕುರಿತು ಮಾಜಿ ‘ಸಿಜೆಐ ಚಂದ್ರಚೂಡ್’ ಪ್ರತಿಕ್ರಿಯೆ

08/07/2025 2:51 PM

ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ

08/07/2025 2:48 PM

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ
KARNATAKA

ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ

By kannadanewsnow0908/07/2025 2:48 PM

ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತನ್ನ ಸೇವೆಗಳಲ್ಲಿ ಮಹತ್ವಪೂರ್ಣ ಮುಂದಾಳುವು ಮಾಡಿದ್ದು, ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್‌ಡಿಸಿ) ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.

ಈ ಹೊಸ ಸೌಲಭ್ಯದಿಂದ, ಪ್ರಯಾಣಿಕರು ಈಗಿನಿಂದ ಈಜ್ ಮೈ ಟ್ರಿಪ್ (EaseMyTrip), ಹೈವೇ ಡಿಲೈಟ್ (Highway Delite), ಮೈಲ್ಸ್ ಅಂಡ್ ಕಿಲೋಮೀಟರ್ಸ್ (Miles & Kilometres via Telegram), ನಮ್ಮ ಯಾತ್ರಿ (Namma Yatri), ವನ್ ಟಿಕೆಟ್ (OneTicket), ರಾಪಿಡೋ (Rapido), ರೆಡ್ಬಸ್ (Redbus), ಟಮ್ಮಾಕ್ (Tummoc) ಮತ್ತು ಯಾತ್ರಿ – ಸಿಟಿ ಟ್ರಾವೆಲ್ ಗೈಡ್ (Yatri – City Travel Guide) ಎನ್ನುವ ಒಂಬತ್ತು ಜನಪ್ರಿಯ ಅಪ್ಲಿಕೇಶನ್‌ಗಳ ಮೂಲಕ ಬಿಎಂಆರ್‌ಸಿಎಲ್ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ.

ಈ ಹೊಸ ಆಯ್ಕೆಗಳು ಈಗಾಗಲೇ ಲಭ್ಯವಿರುವ ಟಿಕೆಟ್ ಬುಕ್ಕಿಂಗ್ ಆಯ್ದ ಮಾರ್ಗಗಳಾದ ನಮ್ಮ ಮೆಟ್ರೋ ಮೊಬೈಲ್ ಆಪ್, ಬಿಎಂಆರ್‌ಸಿಎಲ್ ವಾಟ್ಸಾಪ್ ಚಾಟ್‌ಬಾಟ್ (8105556677), ಮತ್ತು ಪೇಟಿಎಂ (Paytm) ಆಪ್‌ಗೆ ಪೂರಕವಾಗಿ ಸೇರುತ್ತಿದ್ದು, ಡಿಜಿಟಲ್ ಬಳಕೆದಾರರಿಗೆ ಇನ್ನಷ್ಟು ಸುಲಭ, ಲಭ್ಯವಿರುವ ಮತ್ತು ಸಹಜ ಟಿಕೆಟ್ ಬುಕ್ಕಿಂಗ್ ಅನುಭವವನ್ನು ಒದಗಿಸುತ್ತವೆ.

ಈ ಕುರಿತು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಮಹೇಶ್ವರ ರಾವ್, ಭಾ.ಆ.ಸೇ, ಅವರು ಮಾತನಾಡಿ, ಡಿಜಿಟಲ್ ಟಿಕೆಟ್ ವ್ಯವಸ್ಥೆಯ ಈ ವಿಸ್ತರಣೆಯು ಮೊದಲ ಹಂತದಿಂದ ಕೊನೆಯ ಹಂತದ ಸಂಪರ್ಕವರೆಗೆ (ಫಸ್ಟ್, ಮಿಡ್ ಮತ್ತು ಲಾಸ್ಟ್ ಮೈಲ್ ಕನೆಕ್ಟಿವಿಟಿ) ಏಕೀಕೃತಗೊಳಿಸುವ ನಮ್ಮ ದೀರ್ಘಕಾಲಿಕ ಪ್ರಯತ್ನದ ಭಾಗವಾಗಿದೆ. ಈಗಾಗಲೇ 2023ರಿಂದ ಓಎನ್‌ಡಿಸಿ ನೆಟ್‌ವರ್ಕ್‌ನಲ್ಲಿ ಆಟೋ ಮತ್ತು ಟ್ಯಾಕ್ಸಿ ಸೇವೆಗಳು ಲಭ್ಯವಿರುವ ಹಿನ್ನೆಲೆಯಲ್ಲಿ, ಮೆಟ್ರೋ ಟಿಕೆಟ್‌ಗಳ ಸೇರ್ಪಡೆ ಬಹುಮಾದ್ಯಮ ಸಂಚಾರ ವ್ಯವಸ್ಥೆಯ ಪ್ರಮುಖ ಅಂಗವಾಗುತ್ತಿದೆ. ಪ್ರಯಾಣಿಕರು ಇದೀಗ ಒಂದೇ ಅಪ್ಲಿಕೇಶನ್‌ನಿಂದ ತಮ್ಮ ಮನೆಯಿಂದ ಗಮ್ಯಸ್ಥಳದವರೆಗೆ ತಮ್ಮ ಸಂಪೂರ್ಣ ಪ್ರಯಾಣವನ್ನು ಸುಲಭವಾಗಿ ಯೋಜಿಸಬಹುದಾಗಿದ್ದು, ಇದು ಸಮಯ ಮತ್ತು ಶ್ರಮವನ್ನು ದ್ವಿಗುಣವಾಗಿ ಉಳಿಸುತ್ತದೆ. ಬಿಎಂಆರ್‌ಸಿಎಲ್ ಈ ಮೂಲಕ ಒಂದು ಮುಕ್ತ, ಒಳಗೊಳ್ಳುವಿಕೆಯಿಂದ ಕೂಡಿದ, ತಂತ್ರಜ್ಞಾನಾಧಾರಿತ ಭವಿಷ್ಯದ ನಗದುರಹಿತ ನಗರ ಸಂಚಾರ ವ್ಯವಸ್ಥೆ ಕಡೆಗೆ ನಿರ್ಣಾಯಕ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು.

ವಾರದ ದಿನಗಳ್ಲಲಿ ಪ್ರತಿ ದಿನ 8.5 ಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರು ನಮ್ಮ ಮೆಟ್ರೋ ಸೇವೆ ಬಳಸುತ್ತಿರುವ ಸಂದರ್ಭದಲ್ಲಿ, ಬೆಂಗಳೂರು ನಗರದಲ್ಲಿ ಸುಗಮ, ಏಕೀಕೃತ ಹಾಗೂ ಆಪ್ ಆಧಾರಿತ ಸಾರಿಗೆ ಅನುಭವದತ್ತ ಮಹತ್ವದ ಮುಂದಿನ ಹೆಜ್ಜೆಯಾಗಿದೆ.

Share. Facebook Twitter LinkedIn WhatsApp Email

Related Posts

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM1 Min Read

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM2 Mins Read

BREAKING : ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

08/07/2025 1:59 PM1 Min Read
Recent News

“ನಮ್ಮ ಮಕ್ಕಳೇ ನಮ್ಮ ಜಗತ್ತು” : ಬಂಗಲೆ ಖಾಲಿ ಮಾಡುವಲ್ಲಿನ ವಿಳಂಬದ ಕುರಿತು ಮಾಜಿ ‘ಸಿಜೆಐ ಚಂದ್ರಚೂಡ್’ ಪ್ರತಿಕ್ರಿಯೆ

08/07/2025 2:51 PM

ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ

08/07/2025 2:48 PM

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM
State News
KARNATAKA

ನಮ್ಮ ‘ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಕ್ಯೂಆರ್ ಟಿಕೆಟ್’ ಪರಿಚಯ

By kannadanewsnow0908/07/2025 2:48 PM KARNATAKA 2 Mins Read

ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತನ್ನ ಸೇವೆಗಳಲ್ಲಿ ಮಹತ್ವಪೂರ್ಣ…

KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

08/07/2025 2:37 PM

ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ದ ತಾರ್ಕೀಕ ಅಂತ್ಯದ ಹೋರಾಟ ಮಾಡಿದ್ದೇನೆ : ಬಿ ವೈ ವಿಜಯೇಂದ್ರ

08/07/2025 2:18 PM

BREAKING : ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

08/07/2025 1:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.