ಬೆಂಗಳೂರು: ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಪ್ರಮಾಣಿಕರಿಸಿ ನೀಡಲಾಗುವ “ಜೀವಂತ ಪ್ರಮಾಣ ಪತ್ರ’ ನೀಡುವ ಸೇವೆಯನ್ನು ರಾಜ್ಯ ಸರ್ಕಾರ ಸರಳೀಕರಿಸಿ ಎಲ್ಲರಿಗೂ ಸುಗಮವಾದ ವ್ಯವಹಾರವನ್ನು ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆಯ ನಡುವೆ ಆಗಿರುವ ಒಪ್ಪಂದದಂತೆ ಜೀವಂತ ಪ್ರಮಾಣ ಪತ್ರವನ್ನು “ಇ ವಿದ್ಯುನ್ಮಾನ” ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ‘ಪಿಂಚಣಿದಾರರಿಗೆ ಮನೆ ಬಾಗಿಲಿಗೆ ಸೇವೆ” ಒದಗಿಸಲು ಕ್ರಮವಹಿಸಲಾಗಿದೆ.

BIG NEWS: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ದ ಮೂಲಕ ‘ಕೆ-ಸೆಟ್ ಪರೀಕ್ಷೆ’ ನಡೆಸಲು ‘ರಾಜ್ಯ ಸರ್ಕಾರ’ ಆದೇಶ | K-SET Exam

ರಾಜ್ಯದಲ್ಲಿ 5ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದು, ಪ್ರತಿ ವರ್ಷ ನವಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.ಇನ್ನು ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ (ಡಿಜಿಟಲ್ ಜೀವಂತ ಪ್ರಮಾಣ ಪತ್ರ) ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಈ ಸೇವೆ ವಿಸ್ತರಿಸಲು ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಈ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ.

ಇ-ಜೀವಂತ ಪ್ರಮಾಣ ಪತ್ರ ಪಡೆಯಲು ಪಿಂಚಣಿದಾರರು ತಮ್ಮ ಹೆಸರು, ಪಿಪಿಓ ಸಂಖ್ಯೆ, ಬ್ಯಾಂಕು ಖಾತೆಯ ವಿವರ, ವಿಳಾಸ, ಪಿನ್ ಕೋಡ್ ಆಧಾರ್ ಸಂಖ್ಯೆ, ಮೊಬೈಲು ಸಂಖ್ಯೆಯ ವಿವರಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಒದಗಿಸಬೇಕು. ಜೀವನ್‌ ಪ್ರಮಾಣ್ ಪೋರ್ಟಲ್ ಮೂಲಕ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌’ ತಂತ್ರಾಂಶದಲ್ಲಿ ಮೇಲ್ಕಂಡ ವಿವರಗಳನ್ನು ಒದಗಿಸಿದ ನಂತರ ಕಾಗದ ರಹಿತ ಟಿಜಿಟಲ್ ಜೀವಂತ ಪ್ರಮಾಣ ಪತ್ರವನ್ನು ಸೃಜನೆತಾಗುತ್ತದೆ.ಇ-ಜೀವನ್ ಪ್ರಮಾಣ ಐಡಿಯನ್ನು ಪಿಂಚಣಿದಾರರಿಗೆ ಎಸ್.ಎಮ್.ಎಸ್‌. ಮೂಲಕ ಕಳುಹಿಸಲಾಗುವುದು, ಈ ಅಧಿಕೃತ ಸಂಖ್ಯೆಯ ನೆರವಿನಿಂದ ಪಿಂಚಣಿದಾರರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

BIGG NEWS: ನಾವು ಯಾರು ಧಮ್ಕಿ ಹಾಕಿಲ್ಲ, ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ: ಬಸನಗೌಡ ಪಾಟೀಲ್ ಯತ್ನಾಳ್​

ಪಿಂಚಣಿದಾರರ ಮನೆ ಬಾಗಿಲಿಗೆ ಬಂದು, ಬಯೋಮೆಟ್ರಿಕ್‌ ಉಪಕರಣದ ಮೂಲಕ ವಿವರಗಳನ್ನು ಪಡೆದುಕೊಂಡು, ಇ-ಜೀವಂತ ಪ್ರಮಾಣ ಪತ್ರವನ್ನು ಗ್ರಾಮೀಣ ಅಂಚೆ ಸೇವಕರು ನೀಡುವರು. ಪಿಂಚಣಿದಾರರು ತಮ್ಮ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಯಾವುದೇ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿರುವುದಿಲ್ಲ. ಪಿಂಚಣಿಯನ್ನು ಪಾವತಿಸುವ ಬ್ಯಾಂಕು ಶಾಖೆಗಳಿಗೆ ವಿದ್ಯುನ್ಮಾನ ತಂತ್ರಾಂಶದ ಮೂಲಕ ನೇರವಾಗಿ ತಮ್ಮ ಜೀವಂತ ಪ್ರಮಾಣ ಪತ್ರಗಳನ್ನು ರವಾನಿಸಬಹುದು.

ಪಿಂಚಣಿದಾರರು ಈ ಸೇವೆಯನ್ನು ನಿಗದಿತ 70 ರೂ.ಶುಲ್ಕ ಪಾವತಿಸಬೇಕಾಗುತ್ತದೆ. ಈ ಪ್ರಕ್ರಿಯೆ ಪ್ರತಿವರ್ಷದ ನವೆಂಬರ್- ಡಿಸಂಬರ್ ತಿಂಗಳುಗಳಲ್ಲಿ ದಾಖಲೀಕರಣಗೊಳ್ಳುತ್ತದೆ. ಪಿಂಚಣಿದಾರರಿಗೆ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಲು ಹತ್ತಿರದ ಅಂಚೆ ಕಛೇರಿ ಅಥವಾ ಪೋಸ್ಟ್‌ಮ್ಯಾನ್‌ ಅವರನ್ನು ಸಂಪರ್ಕಿಸಬಹುದು.

ಗೋವುಗಳ ಸಂಖ್ಯೆ ಅಭಿವೃದ್ಧಿಯಾಗುವ ಬದಲು ಕ್ಷೀಣಿಸುತ್ತಿರುವುದೇಕೆ? ಇದೇನಾ ಬಿಜೆಪಿ ಗೋರಕ್ಷಣೆ? – ಕಾಂಗ್ರೆಸ್ ಪ್ರಶ್ನೆ

ಪಿಂಚಣಿಯನ್ನು ಪಾವತಿಸುವ ನಾಲ್ಕು ಪ್ರಮುಖ ಬ್ಯಾಂಕುಗಳಾದ (Central Pension Processing Centers), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಬ್ಯಾಂಕುಗಳಲ್ಲಿ ಲಭ್ಯವಿರುವ ತಂತ್ರಾಂಶಗಳ ಮೂಲಕ ನೇರವಾಗಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸುವ ಸೌಲಭ್ಯ ಮುಂದುವರೆಯಲಿವೆ.

ಕಂಪ್ಯೂಟರ್ ತಂತ್ರಾಂಶ ಮತ್ತು ಮೊಬೈಲ್ ಬಳಕೆ ಮಾಡಲು ಸಾಧ್ಯವಿಲ್ಲದ ಸಾಮಾನ್ಯ ಪಿಂಚಣಿದಾರರಿಗೂ ಕೂಡ ಅಂಚೆ ಕಚೇರಿಯ ಮೂಲಕ ಜೀವಂತ ಪ್ರಮಾಣಪತ್ರವನ್ನು ಒದಗಿಸಲು ಸರ್ಕಾರ ಮನೆ ಬಾಗಿಲಿಗೆ ಸೇವೆಯ ಅವಕಾಶ ಕಲ್ಪಿಸಿದೆ.

ಹೆಚ್ಚಿನ ಮಾಹಿತಿಗಾಗಿ: ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆ Ford Hood, :080-22215073/22132031, ಇ-ಮೇಲ್ : adsppmt@karnataka.gov.in ಅಥವಾ ಅಂಚೆ ಕಚೇರಿಯ ದೂರವಾಣಿ ಸಂಖ್ಯೆ : 080-25597799 ಸಂಪರ್ಕಿಸಬಹುದು.

Share.
Exit mobile version