ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಬಿಎಂಪಿಯಿಂದ ಇನ್ಮುಂದೆ ಮನೆ ಬಾಗಿಲಿಗೆ ಇ-ಖಾತಾ ತಲುಪಿಸುವಂತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಈ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ- ಖಾತಾ ತಲುಪಿಸುವ ಅಭಿಯಾನವನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು ಎಂದಿದ್ದಾರೆ.
ನಮ್ಮ ವೆಬ್ಸೈಟ್ನಲ್ಲಿ ಲಭ್ಯವಿರುವ ಕರಡು ಇ-ಖಾತಾದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೆ, ನಮ್ಮ ಸಿಬ್ಬಂದಿ ಅವರ ಮನೆಗೆ ಹೋಗಿ ಅಗತ್ಯ ದಾಖಲೆಗಳನ್ನು ಪಡೆದು ಅಪ್ಲೋಡ್ ಮಾಡಿ ಅಂತಿಮ ಇ-ಖಾತಾ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ- ಖಾತಾ ತಲುಪಿಸುವ ಅಭಿಯಾನವನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು. ನಮ್ಮ ವೆಬ್ಸೈಟ್ನಲ್ಲಿ ಲಭ್ಯವಿರುವ ಕರಡು ಇ-ಖಾತಾದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೆ, ನಮ್ಮ ಸಿಬ್ಬಂದಿ ಅವರ ಮನೆಗೆ ಹೋಗಿ ಅಗತ್ಯ ದಾಖಲೆಗಳನ್ನು ಪಡೆದು ಅಪ್ಲೋಡ್ ಮಾಡಿ ಅಂತಿಮ ಇ-ಖಾತಾ… pic.twitter.com/xInPqf1KhH
— DIPR Karnataka (@KarnatakaVarthe) February 15, 2025