Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಎನ್ಕೌಂಟರ್: 10 ಉಗ್ರರ ಹತ್ಯೆ

15/05/2025 7:05 AM

ಪಾದಚಾರಿಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

15/05/2025 6:52 AM

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಧ್ಯಪ್ರದೇಶ ಸಚಿವ ವಿಜಯ್ ಶಾ ವಿರುದ್ಧ FIR ದಾಖಲು | Col Sofia Qureshi

15/05/2025 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಏಪ್ರಿಲ್’ನಿಂದ ಮನೆ ಬಾಗಿಲಿಗೆ ‘ಉಚಿತ ಖಾತೆ’ ವಿತರಣೆ
KARNATAKA

GOOD NEWS: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಏಪ್ರಿಲ್’ನಿಂದ ಮನೆ ಬಾಗಿಲಿಗೆ ‘ಉಚಿತ ಖಾತೆ’ ವಿತರಣೆ

By kannadanewsnow0925/03/2025 5:25 AM

ಬೆಂಗಳೂರು : “ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು” ಎಂದರು.

ಮನೆ ಬಾಗಿಲಿಗೆ ಉಚಿತ ಖಾತೆ ಏಪ್ರಿಲ್ ನಿಂದ ಜಾರಿ

“ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು” ಎಂದರು.

ಕಾಂಗ್ರೆಸ್ ಸರ್ಕಾರದಿಂದ ದಾಖಲೆಯುತ ಅನುದಾನ

“ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ ಯಿಂದ 7 ಸಾವಿರ ಕೋಟಿಗೆ ಹೆಚ್ಚಳ ಮಾಡಿದೆ. ಎಫ್ ಎಆರ್, ಜಾಹೀರಾತಿನಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದು ಅಂದಾಜು ಮಾಡಲಾಗಿತ್ತು. ನ್ಯಾಯಲಯ ಜಾಹೀರಾತು ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ ಕಾರಣ ಇದರಿಂದ ನಿರೀಕ್ಷಿತ ಆದಾಯ ಕಷ್ಟಸಾಧ್ಯ. ನ್ಯಾಯಲಯ ಈ ಹಿಂದೆ ಎರಡು- ಮೂರು ವಿಚಾರದಲ್ಲಿ ಹೀಗೆ ಮಧ್ಯಪ್ರವೇಶ ಮಾಡಿದ ಕಾರಣ ನಾವು ಜಾಗೃತರಾಗಿ ಬಜೆಟ್ ಮಂಡಿಸಬೇಕಾಗುತ್ತದೆ. ಈ ಬಾರಿಯ ರಾಜ್ಯ ಬಜೆಟ್ ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಡಬಲ್ ಡೆಕ್ಕರ್, ಮೆಟ್ರೋ, ಮೇಲ್ಸೇತುವೆ, ಸುರಂಗ ರಸ್ತೆಗೆ ಹಣ ಕೊಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಯಾವುದೇ ಸರ್ಕಾರವೂ ಬೆಂಗಳೂರಿಗೆ ಇಷ್ಟು ಹೆಚ್ಚಿನ ಅನುದಾನ ನೀಡಿರಲಿಲ್ಲ. ಈಗ ಬೆಂಗಳೂರಿಗೆ ಅತಿಹೆಚ್ಚು ಅನುದಾನ ನೀಡಿದೆ” ಎಂದರು.

“ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಗಾಡಿಯನ್ನು ಸುಮ್ಮನೆ ನಿಲ್ಲಿಸಿಕೊಳ್ಳುವಂತಿಲ್ಲ. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳುವುದು, ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ” ಎಂದರು.

ನೋಂದಣಿ ಕಾಲಮಿತಿ ಏಪ್ರಿಲ್ ಕೊನೆವರೆಗೂ ವಿಸ್ತರಣೆ

“ಇದುವರೆಗೂ ಪಾಲಿಕೆಯಿಂದ 27,565 ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ದಿನಾಂಕವನ್ನು ಏಪ್ರಿಲ್ ಕೊನೆಯವರೆಗೆ ವಿಸ್ತರಿಸಲಾಗುವುದು. ನೋಂದಣಿ ಮಾಡಿಕೊಳ್ಳದ ವ್ಯಾಪಾರಿಗಳನ್ನು ಗಡವು ನಂತರ ತೆರವುಗೊಳಿಸಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು. ನಾಲ್ಕು ಮಾದರಿಯ ತಳ್ಳು ಗಾಡಿಗಳನ್ನು ಪಾಲಿಕೆ ಸಿದ್ಧಪಡಿಸಿದೆ” ಎಂದರು.

“ಬೀದಿಬದಿ ವ್ಯಾಪಾರದ ಗಾಡಿಗಳು ಆಟೋ, ಬೈಸಿಕಲ್, ಬೈಕ್ ಹಾಗೂ ಸಾಂಪ್ರದಾಯಿಕ ತಳ್ಳುವ ಗಾಡಿ ಮಾದರಿಯಲ್ಲಿ ಇರಲಿವೆ. ಇವುಗಳನ್ನು ತಯಾರಿಸಲು ಟೆಂಡರ್ ಸಹ ಕರೆಯಲಾಗುವುದು. ನೋಂದಣಿ ಮಾಡಿಸಿಕೊಂಡವರ ಪೈಕಿ ಶೇಕಡವಾರು ಪ್ರಮಾಣದಲ್ಲಿ ಈ ಸೌಲಭ್ಯ ನೀಡಲಾಗುವುದು. ವ್ಯಾಪಾರ ಮುಗಿದ ನಂತರ ಗಾಡಿಗಳನ್ನು ಅಲ್ಲಿಯೇ ನಿಲ್ಲಿಸುವಂತಿಲ್ಲ. ಪ್ರತಿ ಬೀದಿಬದಿ ವ್ಯಾಪಾರಿಗಳ ಲೆಕ್ಕಾಚಾರ ಪಾಲಿಕೆ ಬಳಿ ಇರಬೇಕು. ಪೊಲೀಸರು, ಅಧಿಕಾರಿಗಳು, ಗೂಂಡಾಗಳು ತೊಂದರೆ ಕೊಡುತ್ತಾರೆ ಎನ್ನುವ ದೂರುಗಳನ್ನು ತಪ್ಪಿಸಲು ಈ ವ್ಯವಸ್ಥೆ ತರಲಾಗುತ್ತಿದೆ. ಒಂದು ಕುಟುಂಬಕ್ಕೆ ಒಂದೇ ಗಾಡಿ” ಎಂದು ತಿಳಿಸಿದರು.

ಶೀಘ್ರ ಬಿಬಿಎಂಪಿ ಚುನಾವಣೆ

ಕಳೆದ ಐದು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆಯದ ಬಗ್ಗೆ ಕೇಳಿದಾಗ, “ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ” ಎಂದರು.

“ಬೆಂಗಳೂರು ನಗರದ ಚುನಾಯಿತ ಪ್ರತಿನಿಧಿಗಳು ಬಿಬಿಎಂಪಿ ಬಜೆಟ್ ಬಗ್ಗೆ ಚರ್ಚೆ, ಸಲಹೆ ಸೂಚನೆ ವೇಳೆ ತಮ್ಮ ಕ್ಷೇತ್ರದ ಬೇಡಿಕೆಗಳು, ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಬಜೆಟ್ ಮಂಡಿಸಲಾಗುವುದು

ರಾಜಕೀಯ ಕಾರಣಕ್ಕೆ ಬಿಜೆಪಿಯವರು ಸಭೆಗೆ ಗೈರು

“ಸದನದಿಂದ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಅನೇಕ ಬಿಜೆಪಿ ಶಾಸಕರು ಬಿಬಿಎಂಪಿ ಬಜೆಟ್ ಸಭೆಗೆ ಗೈರಾಗಿದ್ದಾರೆ. ಇದು ನನಗೆ ಸಂಬಂಧಪಟ್ಟ ವಿಚಾರವಲ್ಲ ಸಭಾಧ್ಯಕ್ಷರು ಹಾಗೂ ನೀವುಂಟು ಎಂದು ಹೇಳಿದ್ದೇನೆ. ಸಭೆಯಲ್ಲಿ ಹಾಜರಿರುವ ಶಾಸಕರು, ಮಂತ್ರಿಗಳ ಬಳಿ ಬಜೆಟ್ ಬಗ್ಗೆ ಸಲಹೆ ಸೂಚನೆಗಳನ್ನು ತೆಗೆದುಕೊಂಡಿದ್ದೇವೆ. ಬಿಬಿಎಂಪಿ ಆಡಳಿತಾಧಿಕಾರಿಗಳು ಸಮಯ ನೋಡಿ ವಾಸ್ತವವಾಗಿ ಎಷ್ಟು ಗಾತ್ರದ ಬಜೆಟ್ ಅನ್ನು ಮಂಡಿಸಲು ಸಾಧ್ಯವೋ ಅದನ್ನು ಮಂಡಿಸುತ್ತಾರೆ” ಎಂದು ತಿಳಿಸಿದರು.

“ಅಶೋಕ್, ಅಶ್ವಥ ನಾರಾಯಣ ಅವರ ಬಳಿ ಬಜೆಟ್ ಸಭೆ ದಿನಾಂಕದ ಬಗ್ಗೆ ಚರ್ಚೆ ಮಾಡಿಯೇ ನಿಗಧಿ ಮಾಡಿದ್ದೆ. ಅವರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಂಡು ಏನಾದರೂ ಬದಲಾವಣೆ ಮಾಡಲು ನಾವು ಬದ್ದರಾಗಿದ್ದೇವೆ. ಅನಧಿಕೃತವಾಗಿ ವಿರೋಧ ಪಕ್ಷಗಳ ನಾಯಕರು ಸಹ ಅನೇಕ ನಿರ್ಧಾರಗಳನ್ನು ಸ್ವಾಗತಿಸಿದ್ದಾರೆ. ರಾಜಕೀಯ ಕಾರಣಕ್ಕೆ ಸಭೆಗೆ ಗೈರಾಗಿದ್ದಾರೆ” ಎಂದು ಹೇಳಿದರು.

GOOD NEWS: ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

Share. Facebook Twitter LinkedIn WhatsApp Email

Related Posts

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

14/05/2025 10:02 PM1 Min Read

BIG NEWS : ತುಮಕೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಬಲಿ

14/05/2025 9:14 PM1 Min Read

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM1 Min Read
Recent News

BREAKING : ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಎನ್ಕೌಂಟರ್: 10 ಉಗ್ರರ ಹತ್ಯೆ

15/05/2025 7:05 AM

ಪಾದಚಾರಿಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

15/05/2025 6:52 AM

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಧ್ಯಪ್ರದೇಶ ಸಚಿವ ವಿಜಯ್ ಶಾ ವಿರುದ್ಧ FIR ದಾಖಲು | Col Sofia Qureshi

15/05/2025 6:47 AM

ನಕ್ಸಲ್ ಪೀಡಿತ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರ ಬದ್ಧ: ಪ್ರಧಾನಿ ಮೋದಿ

15/05/2025 6:41 AM
State News
KARNATAKA

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

By kannadanewsnow0914/05/2025 10:02 PM KARNATAKA 1 Min Read

ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ಮೂವರು…

BIG NEWS : ತುಮಕೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಬಲಿ

14/05/2025 9:14 PM

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.