Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

31/05/2025 3:48 PM

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

31/05/2025 3:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಹೋಳಿ ಹಬ್ಬ’ಕ್ಕೆ ಊರಿಗೆ ಹೋಗುವ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ವಿಶೇಷ ರೈಲು’ಗಳ ಸಂಚಾರ
INDIA

‘ಹೋಳಿ ಹಬ್ಬ’ಕ್ಕೆ ಊರಿಗೆ ಹೋಗುವ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ವಿಶೇಷ ರೈಲು’ಗಳ ಸಂಚಾರ

By kannadanewsnow0915/03/2024 1:16 PM

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿವೆ:

1.ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06557/06558) ರೈಲುಗಳ ಸಂಚಾರ:

ಮಾರ್ಚ್ 19 ಮತ್ತು 26, 2024 ರಂದು ರೈಲು ಸಂಖ್ಯೆ 06557 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:55 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2:00 ಗಂಟೆಗೆ ಕಣ್ಣೂರು ನಿಲ್ದಾಣವನ್ನು ತಲುಪಲಿದೆ.

ಮಾರ್ಚ್ 20 ಮತ್ತು 27ರಂದು ರೈಲು ಸಂಖ್ಯೆ 06558 ಕಣ್ಣೂರಿನಿಂದ ರಾತ್ರಿ 8 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 1 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ, ಕೃಷ್ಣರಾಜಪುರಂ, ಬಂಗಾರಪೇಟೆ ಜಂ, ಸೇಲಂ ಜಂ, ಈರೋಡ್ ಜಂ, ಕೊಯಮತ್ತೂರು ಜಂ, ಪಾಲಕ್ಕಾಡ್ ಜಂ, ಶೋರನೂರ್ ಜಂ, ತಿರೂರ್, ಕೋಝಿಕ್ಕೋಡ್, ವಡಕರ ಮತ್ತು ಥಲಶೇರಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

2.ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06555/06556) ರೈಲುಗಳ ಸಂಚಾರ:

ಮಾರ್ಚ್ 23 ಮತ್ತು 30, 2024 ರಂದು ರೈಲು ಸಂಖ್ಯೆ 06555 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:55 ಗಂಟೆಗೆ ಹೊರಟು, ಮರುದಿನ ಸಂಜೆ 7:10 ಗಂಟೆಗೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ.

ಮಾರ್ಚ್ 24 ಮತ್ತು 31, 2024 ರಂದು ರೈಲು ಸಂಖ್ಯೆ 06556 ಕೊಚುವೇಲಿ ನಿಲ್ದಾಣದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಸಂಜೆ 4:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಸೇಲಂ ಜಂ, ಈರೋಡ್ ಜಂ, ತಿರುಪ್ಪೂರು, ಕೊಯಮತ್ತೂರು ಜಂ, ಪಾಲಕ್ಕಾಡ್ ಜಂ, ಒಟ್ಟಪ್ಪಲಂ, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ಮೇಲಿನ ವಿಶೇಷ ರೈಲುಗಳಲ್ಲಿ (06557/58 ಮತ್ತು 06555/56) ಎಸಿ -ಟು ಟೈಯರ್ (1), ಎಸಿ -ತ್ರಿ ಟೈಯರ್ (6), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (3) ಮತ್ತು ಎಸ್ಎಲ್ಆರ್ ಡಿ (2) ಸೇರಿದಂತೆ ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ.

3. ಎಸ್ಎಸ್ಎಸ್ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07311/07312) ರೈಲುಗಳ ಸಂಚಾರ:

ಮಾರ್ಚ್ 24, 2024 ರಂದು ರೈಲು ಸಂಖ್ಯೆ 07311 ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಸಂಜೆ 7:30 ಗಂಟೆಗೆ ಹೊರಟು, ಮರುದಿನ ಸಂಜೆ 7:20 ಗಂಟೆಗೆ ಅಹಮದಾಬಾದ್ ನಿಲ್ದಾಣವನ್ನು ತಲುಪಲಿದೆ.

ಮಾರ್ಚ್ 25, 2024 ರಂದು ರೈಲು ಸಂಖ್ಯೆ 07312 ಅಹಮದಾಬಾದ್ ನಿಲ್ದಾಣದಿಂದ ರಾತ್ರಿ 9:25 ಗಂಟೆಗೆ ಹೊರಟು, ಮರುದಿನ ಸಂಜೆ 7:45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ದಿಕ್ಕಿನಲ್ಲಿ, ಧಾರವಾಡ, ಲೋಂಡಾ ಜಂ, ಬೆಳಗಾವಿ, ಘಟಪ್ರಭಾ, ಮಿರಜ್ ಜಂ, ಸಾಂಗ್ಲಿ, ಸತಾರಾ, ಪುಣೆ ಜಂ, ಲೋನಾವಲ, ಕಲ್ಯಾಣ್ ಜಂ, ವಸಾಯಿ ರೋಡ್, ಬೋಯಿಸರ್, ವಾಪಿ, ಸೂರತ್, ವಡೋದರಾ ಮತ್ತು ಆನಂದ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ರೈಲಿನಲ್ಲಿ ಎಸಿ-ಟು ಟೈಯರ್ (1), ಎಸಿ-ತ್ರಿ ಟೈಯರ್ (2), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (5) ಮತ್ತು ಎಸ್ಎಲ್ಆರ್ ಡಿ (2) ಸೇರಿದಂತೆ ಒಟ್ಟು 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರಿಗೆ ಸುಗಮ ಪ್ರಯಾಣದ ಅನುಭವಗಳಿಗೆ ಅನುಕೂಲವಾಗುವಂತೆ ಈ ವಿಶೇಷ ರೈಲು ಸೇವೆಗಳನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭಾರತೀಯ ರೈಲ್ವೆ ವೆಬ್ ಸೈಟ್ (https://enquiry.indianrail.gov.in) ಗೆ ಭೇಟಿ ನೀಡಿ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

BREAKING : ಭೂಪಾಲ್ ನ ‘ಟೆಂಟ್ ಹೌಸ್’ ಗೋದಾಮಿನಲ್ಲಿ ‘ಸಿಲಿಂಡರ್’ ಸ್ಫೋಟದಿಂದ ಭಾರಿ ಅಗ್ನಿ ಅವಘಡ

‘ನಮ್ಮ ಮೆಟ್ರೋ’ 3ನೇ ಹಂತದ ವಿಸ್ತರಣೆಗೆ ಡಬಲ್ ಡೆಕ್ಕರ್ ಮಾದರಿ ನಿರ್ಮಿಸಲು BMRCL ಚಿಂತನೆ

breaking news Indian railway kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news railway news South Western Railway
Share. Facebook Twitter LinkedIn WhatsApp Email

Related Posts

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

31/05/2025 3:09 PM1 Min Read

BREAKING : ಭಯೋತ್ಪಾದಕರೊಂದಿಗೆ ನಂಟು ಹಿನ್ನೆಲೆ : ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ 5 ಕಡೆ ‘NIA’ ದಾಳಿ, ಪರಿಶೀಲನೆ

31/05/2025 2:16 PM1 Min Read

BREAKING: 14 ಭಾರತೀಯ ನೌಕಾಪಡೆಯ ಯುದ್ಧನೌಕೆ ಸ್ಥಳಗಳ ಬಗ್ಗೆ ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಎಂಜಿನಿಯರ್ ಬಂಧನ

31/05/2025 1:41 PM1 Min Read
Recent News

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

31/05/2025 3:48 PM

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

31/05/2025 3:09 PM

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ಪ್ರತಿಭಟನೆ : ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಜಿಲ್ಲಾಡಳಿತ

31/05/2025 3:06 PM
State News
KARNATAKA

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ ತೀರುತ್ತದೆ. 

By kannadanewsnow8931/05/2025 3:48 PM KARNATAKA 2 Mins Read

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಷ್ಟೇ ಸಾಲ ಇದ್ದರೂ ಸಾಕ್ಷಾತ್ ಆಂಜನೇಯನೆ ಬಂದು ನಿಮ್ಮ ಸಾಲವನ್ನು ತೀರಿಸಿದಂತೆ…

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ಪ್ರತಿಭಟನೆ : ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಜಿಲ್ಲಾಡಳಿತ

31/05/2025 3:06 PM

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.