ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1.73 ಲಕ್ಷ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ಬಿಜೆಪಿಯ ಪ್ರತಾಪ್ ಸಿಂಹ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮುನಿಯಪ್ಪ ಅವರು, ಪಡಿತರ ಕಾರ್ಡ್ ಗಾಗಿ 2,95,986 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಪರಿಶೀಲನೆ ನಂತರ 55,950 ಅರ್ಜಿಗಳು ಬಿಪಿಎಲ್ ಅಡಿಯಲ್ಲಿ ಬರುವುದಿಲ್ಲ. ಬಾಕಿ ಇರುವ 1.73 ಲಕ್ಷ ರೇಷನ್ ಗಳನ್ನು ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಗೆ ಕಾಯುತ್ತಿದ್ದ ಜನರಿಗೆ ಸಿಹಿಸುದ್ದಿ ನೀಡಿದ್ದಾರೆ.