Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 6,000 ಉದ್ಯೋಗಿಗಳನ್ನು ವಜಾ | Microsoft laid off

18/05/2025 9:42 PM

BREAKING: ಸನ್ ರೈಸರ್ಸ್ ಹೈದರಾಬಾದ್ ತಂಡದ ‘ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್’ಗೆ ಕೊರೋನಾ ಪಾಸಿಟಿವ್ | Travis Head

18/05/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ `SC-ST’ ವರ್ಗದವರಿಗೆ ಗುಡ್ ನ್ಯೂಸ್ : ಎಲ್ಲಾ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿ.!
KARNATAKA

GOOD NEWS : ರಾಜ್ಯ ಸರ್ಕಾರದಿಂದ `SC-ST’ ವರ್ಗದವರಿಗೆ ಗುಡ್ ನ್ಯೂಸ್ : ಎಲ್ಲಾ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿ.!

By kannadanewsnow5710/02/2025 7:13 AM

ದಾವಣಗೆರೆ : ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಖಾಲಿಯಿರುವ ಎಲ್ಲ ಬ್ಲಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ತುಂಬಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

ಹರಿಹರ ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುತ್ತಿರುವ ವಾಲ್ಮೀಕಿ ಮಹೋತ್ಸವದಲ್ಲಿ ಮಾತನಾಡಿದ ಅವರು. ‘ಸಿಎಂ ಸಿದ್ದರಾಮಯ್ಯ ಎಸ್ಸಿ, ಎಸ್ಟಿ ಬ್ಯಾಕ್‌ಲಾಗ್ ಹುದ್ದೆ ತುಂಬಬೇಕು. ಎಂದು ಸಂಪುಟ ಉಪ ಸಮಿತಿ ರಚಿಸಿದ್ದು, ನಾನು ಅದರ ಅಧ್ಯಕ್ಷ ಈಗಾಗಲೇ ಮೂರು ಸಭೆ ನಡೆಸಿದ್ದೇವೆ. ಇನ್ನೊಂದು ಸಭೆ ನಡೆಸಿ ಬ್ಯಾಕ್‌ಲಾಗ್‌ ಹುದ್ದೆ ತುಂಬಲು ತೀರ್ಮಾನ ಕೈಗೊಳ್ಳುತ್ತೇವೆ. ಎಸ್‌ಸಿ, ಎಸ್ಟಿ ಜನಸಂಖ್ಯೆಗೆ ತಕ್ಕಂತೆ ಅನುದಾನಮೀಸಲಿಡುವ ಕಾಯಿದೆಯಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ ಶೇ.24ರಷ್ಟು ಅನುದಾನ ಸಿಗುತ್ತಿದೆ. ಇದರಿಂದ ಈ ಸಮು ದಾಯಗಳು ಆರ್ಥಿಕವಾಗಿ ಬಲಗೊಳ್ಳುತ್ತಿವೆ ಎಂದರು.

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯು ಈ ಭಾಗದ ವಿಶಿಷ್ಟ ಜಾತ್ರೆಗಳಲ್ಲಿ ಒಂದಾಗಿದ್ದು ದಾವಣಗೆರೆ ಸೀಮೆಯ ಸಾಂಸ್ಕೃತಿಕ ಹಿರಿಮೆಯ ಸಂಕೇತವಾಗಿದೆ ಮತ್ತು ವಾಲ್ಮೀಕಿಯಂತಹ ಮೇರು ವ್ಯಕ್ತಿತ್ವದ ಕವಿಯ ಹೆಸರಲ್ಲಿ ನಾವು ಮಾಡುತ್ತಿರುವ ಈ ಜಾತ್ರೆ ಅವರಿಗೆ ನಾವು ಸಲ್ಲಿಸುವ ಗೌರವವಾಗಿದೆ. ನಮಗೆಲ್ಲಾ ವಾಲ್ಮೀಕಿಯವರ ಬಗ್ಗೆ ಗೊತ್ತೇ ಇದೆ. ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾದ ರಾಮಾಯಣವನ್ನು ರಚಿಸಿದವರು ವಾಲ್ಮೀಕಿಯವರು. ರಾಮಾಯಣವನ್ನು ಓದುತ್ತಿದ್ದರೆ, ಅದರ ಒಂದೊಂದು ಮಾತಿನಲ್ಲೂ ವಾಲ್ಮೀಕಿಗಳ ವ್ಯಕ್ತಿತ್ವವೇ ಎದ್ದುಕಾಣುತ್ತದೆ. ವಾಲ್ಮೀಕಿಗಳ ವ್ಯಕ್ತಿತ್ವದಲ್ಲಿ ಮಹತ್ತರ ಬದಲಾವಣೆ ಆದದ್ದು ಅವರು ರಾಮನ ಬಗ್ಗೆ ನಾರದರು ಹೇಳಿದ ಮಾತುಗಳನ್ನು ಕೇಳಿದ ಮೇಲೆಯೇ. ಮೊದಲಿಗೆ ಅವರು ತಮ್ಮ ಮೋಕ್ಷವನ್ನು ಬಯಸಿ ಸಾಧನೆಯಲ್ಲಿ ನಿರತ ತಪಸ್ವಿಗಳಷ್ಟೇ ಆಗಿದ್ದರು; ಆದರೆ ರಾಮನ ಕಥೆಯನ್ನು ಕೇಳಿ ಅವರು ಜಗತ್ತಿನ ಸಂಕಟಕ್ಕೆ ಸ್ಪಂದಿಸಬಲ್ಲ ಕವಿಗಳೇ ಆದರು

ನಾವಿಂದು ಧಾರ್ಮಿಕತೆಯನ್ನು ಅನುಕೂಲಸಿಂಧುವನ್ನಾಗಿಸಿಕೊಳ್ಳುತ್ತಿದ್ದೇವೆ. ಆದರೆ ದಿಟವಾದ ಧರ್ಮಶ್ರದ್ಧೆಯ ಆಕಾರವನ್ನು ನಮಗೆ ಒದಗಿಸಿದವರು ವಾಲ್ಮೀಕಿಯವರು. ಧರ್ಮ ಎನ್ನುವುದು ಸನಾತನವಾದುದು; ಅದು ನಮ್ಮ ಸ್ವಾರ್ಥ, ಬುದ್ಧಿ, ಅನುಕೂಲ, ದೇಶ, ಕಾಲಗಳನ್ನು ಮೀರಿದ ಶಾಶ್ವತ ತತ್ತ್ವ ಎಂಬುದರ ಮೀಮಾಂಸೆಯನ್ನು ರಾಮಾಯಣದ ಆರಂಭದಿಂದ ಕೊನೆಯ ತನಕ ಅವರು ನಿರೂಪಿಸಿದ್ದಾರೆ. ದಿಟವಾದ ಧಾರ್ಮಿಕ ಹೇಗಿರುತ್ತಾನೆ ಎಂಬುದಕ್ಕೆ ಒಂದು ಉದಾಹರಣೆಯನ್ನು ನೋಡಬಹುದು.

ರಾಮನು ಪಟ್ಟಾಭಿಷೇಕಕ್ಕೆ ಸಿದ್ಧನಾಗುತ್ತಿದ್ದಾನೆ. ಆದರೆ ಮುಂದೆ ಸ್ವಲ್ಪವೇ ಸಮಯದ ಅಂತರದಲ್ಲಿ ಕಾಡಿಗೆ ಹೋಗಲು ಅವನು ಸಿದ್ಧನಾಗಬೇಕಾಗುತ್ತದೆ. ಆಗ ರಾಮನ ಮುಖ ಹೇಗಿತ್ತು ಎಂಬುದನ್ನು ವಾಲ್ಮೀಕಿಗಳು ವರ್ಣಿಸುತ್ತಾರೆ: ‘ಅವನು ಪಟ್ಟಾಭಿಷೇಕಕ್ಕೆ ಸಿದ್ಧವಾಗುತ್ತಿದ್ದಾಗ ಅವನ ಮುಖ ಹೇಗಿದ್ದಿತೋ, ಈಗ ಕಾಡಿಗೆ ಹೋಗಲು ಸಿದ್ಧವಾಗಬೇಕಾದರೂ ಹಾಗೆಯೇ ಇದ್ದಿತು; ಸ್ವಲ್ಪವೂ ವ್ಯತ್ಯಾಸ ಇರಲಿಲ್ಲ.’

ಧರ್ಮದಲ್ಲಿ ನಿರತನಾದವನಿಗೆ ನಾಡಾದರೂ ಒಂದೇ, ಕಾಡಾದರೂ ಒಂದೇ; ಅವನಿಗೆ ಧರ್ಮಮಾರ್ಗ ಮುಖ್ಯವೇ ಹೊರತು ಸಿಂಹಾಸನ–ವನವಾಸಗಳು ಅಲ್ಲ – ಎಂಬುದನ್ನು ತುಂಬ ಅದ್ಭುತವಾಗಿ ವಾಲ್ಮೀಕಿಗಳು ಸೂಚಿಸಿದ್ದಾರೆ. ‘ಯಾವುದೇ ಕಾರಣಕ್ಕೂ ಅಧರ್ಮಮಾರ್ಗದಿಂದ ನಾನು ರಾಜ್ಯವನ್ನು ದಕ್ಕಿಸಿಕೊಳ್ಳಲಾರೆ’ ಎಂದು ರಾಮ ನೇರವಾಗಿಯೇ ಘೋಷಿಸುತ್ತಾನೆ ಕೂಡ. ನಮಗಿಂದು ರಾಮಾಯಣ ಮತ್ತು ವಾಲ್ಮೀಕಿ ಮಹರ್ಷಿ ಪ್ರಸ್ತುತ ಆಗಬೇಕಾದ್ದು ಈ ಕಾರಣಕ್ಕಾಗಿ ಎಂಬುದನ್ನು ನಾವು ಅರಿಯಬೇಕು.

ಈ ದಿನ ರಾಮ ರಾಜಕೀಯ ಸರಕು ಆಗಿದ್ದಾನೆ. ಆದರೆ ವಾಲ್ಮೀಕಿ ಹೇಳಿದಂತೆ ನಾವು ರಾಮನನ್ನು ಅರಿತರೆ ಧರ್ಮದ ನಿಜವಾದ ಉದ್ದೇಶವೂ ನಮಗೆ ಅರ್ಥವಾಗುತ್ತದೆ ಮತ್ತು ಆ ಕಾರಣಕ್ಕಾಗಿ ನಡೆಯುತ್ತಿರುವ ಕಲಹಗಳೂ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಜಾತ್ರಾ ಸಭೆಯಲ್ಲಿ ಸಚಿವರಾದ ಡಾ ಜಿ ಪರಮೇಶ್ವರ್, ಸತೀಶ್ ಜಾರಕೀಹೊಳಿ, ವಿಧಾನ ಪರಿಷತ್ ಸದಸ್ಯರಾದ ಡಾ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಅನಿಲ್ ಚಿಕ್ಕಮಾದು, ಬಸಂತಪ್ಪ, ದರ್ಶನ್ ಧೃವ ನಾರಾಯಣ್, ಸಂಸದರಾದ ತುಕಾರಾಂ, ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Good news for SC-ST category from state government: All block log vacancies to be filled
Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM1 Min Read

ದಕ್ಷಿಣಕನ್ನಡದಲ್ಲಿ ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ : ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

18/05/2025 9:24 PM1 Min Read

ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

18/05/2025 9:08 PM1 Min Read
Recent News

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 6,000 ಉದ್ಯೋಗಿಗಳನ್ನು ವಜಾ | Microsoft laid off

18/05/2025 9:42 PM

BREAKING: ಸನ್ ರೈಸರ್ಸ್ ಹೈದರಾಬಾದ್ ತಂಡದ ‘ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್’ಗೆ ಕೊರೋನಾ ಪಾಸಿಟಿವ್ | Travis Head

18/05/2025 9:35 PM

ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ನಕಲಿ ಪಾಡ್‌ಕಾಸ್ಟ್‌ಗಳನ್ನು ಹೋಸ್ಟ್ ಮಾಡಿ ಸಿಕ್ಕಿಬಿದ್ದ ಸ್ಪಾಟಿಫೈ: ವರದಿ | Spotify

18/05/2025 9:27 PM
State News
KARNATAKA

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

By kannadanewsnow0918/05/2025 9:59 PM KARNATAKA 1 Min Read

ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ, ಸಾಗರ ಸಮೀಪದ ಕೆಳದಿ ಕೆರೆಯಲ್ಲಿ ಜಲಕ್ರೀಡೆ, ಜಲಸಾಹಸಕ್ಕೆ ಪ್ರವಾಸೋದ್ಯಮ ಇಲಾಖೆ…

ದಕ್ಷಿಣಕನ್ನಡದಲ್ಲಿ ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ : ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

18/05/2025 9:24 PM

ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

18/05/2025 9:08 PM

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ 112 ಸಿಬ್ಬಂದಿ: ಎಲ್ಲಿ.? ಹೇಗೆ ಅಂತ ಈ ಸುದ್ದಿ ಓದಿ!

18/05/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.