2025-26 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ರಾಜ್ಯವಲಯದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ಆರ್ಥಿಕ ನೆರವು ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ರೂ.3 ಲಕ್ಷ ಆರ್ಥಿಕ ನೆರವನ್ನು ಇಲಾಖಾ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಗೆ ಪರಿಶಿಷ್ಟ ಜಾತಿ-2 ಮತ್ತು ಪರಿಶಿಷ್ಟ ಪಂಗಡ-1 ಮೀನು ಮಾರಾಟಗಾರರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಮೀನು ಮಾರಾಟಗಾರರು ಸೆ.20 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬAಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಇಲಾಖೆಯ ಆನ್ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕ, ಶಿವಮೊಗ್ಗ- 9986040981, ಮೀನುಗಾರಿಕೆ ಸಹಾಯಕ ನಿರ್ದೇಶಕ, ಭದ್ರಾವತಿ-9743370815, ಮೀನುಗಾರಿಕೆ ಸಹಾಯಕ ನಿರ್ದೇಶಕ, ಶಿಕಾರಿಪುರ-9686939028, ಮೀನುಗಾರಿಕೆ ಸಹಾಯಕ ನಿರ್ದೇಶಕರ, ಸಾಗರ ಮತ್ತು ಹೊಸನಗರ-9538044365, ಮೀನುಗಾರಿಕೆ ಸಹಾಯಕ ನಿರ್ದೇಶಕ, ಸೊರಬ-9535386449, ಮೀನುಗಾರಿಕೆ ಸಹಾಯಕ ನಿರ್ದೇಶಕ ತೀರ್ಥಹಳ್ಳಿ-8655132438 ಗೆ ಸಂಪರ್ಕಿಸಬಹುದೆಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್
BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ