Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ತರಬೇತಿ ಕೇಂದ್ರಗಳ ಶುಲ್ಕದಿಂದ ಚಟುವಟಿಕೆಗಳವರೆಗೆ ಎಲ್ಲವೂ ಮೇಲ್ವಿಚಾರಣೆ ; ‘ಸುಪ್ರೀಂ’ಗೆ ಕೇಂದ್ರದಿಂದ ಅಫಿಡವಿಟ್

05/11/2025 9:24 PM

BREAKING : ವಿಶ್ವಕಪ್ ಗೆಲುವಿನ ಬಳಿಕ ‘ಮಹಿಳಾ ಕ್ರಿಕೆಟ್ ತಂಡ’ ಸನ್ಮಾನಿಸಿದ ‘ಪ್ರಧಾನಿ ಮೋದಿ’ ; ಫೋಟೋಸ್ ವೈರಲ್

05/11/2025 8:54 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಜಾತಿಯ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನ’ಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಜಾತಿಯ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನ’ಕ್ಕೆ ಅರ್ಜಿ ಆಹ್ವಾನ.!

By kannadanewsnow5728/10/2024 12:25 PM

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಅನೈರ್ಮಲ್ಯ ವ್ಯಕ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ. 6 ಲಕ್ಷ ಹಾಗೂ 9-10ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ.2.5 ಲಕ್ಷಗಳು. ಅರ್ಜಿ ಸಲ್ಲಿಸಿವ ವೆಬ್ ಸೈಟ್ : https://ssp.postmatric.karnataka.gov.in/

Bio Metric e-Authentication : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (9 ಮತ್ತು 10ನೇ ತರಗತಿ), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ Bio Metric e-Authentication ಒಳಗಾಗಬೇಕಾಗಿರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಮತ್ತು EDCS ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ Bio Metric e-Authentication ಮಾಡಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಸೇವೆಯು ಉಚಿತವಾಗಿದ್ದು, EDCS ನಾಗರಿಕ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಯು ಯಾವುದೇ ಹಣ ಪಾವತಿಸುವಂತಿಲ್ಲ.

ವಿದ್ಯಾರ್ಥಿವೇತನ/ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಮಂಜೂರಾದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ಸದರಿ ಪ್ರಕ್ರಿಯೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.

Image

ಪ್ರೋತ್ಸಾಹ ಧನ ಕಾರ್ಯಕ್ರಮ

10ನೇ ತರಗತಿ/ಎಸ್. ಎಸ್. ಎಲ್. ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಪ್ರೋತ್ಸಾಹ ಧನ

12ನೇ ತರಗತಿ/ಪಿ.ಯು.ಸಿ. ಪಾಲಿಟೆಕ್ನಿಕ್ ಡಿಪ್ಲೋಮಾ, ಐ.ಟಿ.ಐ., ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Website https://sw.kar.nic.in/swprizemoney/Home.aspx

ವಿದ್ಯಾರ್ಥಿಯು ಕೈಗೊಳ್ಳಬೇಕಾದ ಕ್ರಮಗಳು
1. ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ, ತಮ್ಮ ಆಧಾರ್ Active ಇರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಆಧಾರ್ ವಿವರಗಳನ್ನು ಹಾಗೂ Biometric ವಿವರಗಳನ್ನು Update ಮಾಡಿಸುವುದು.

2. ಬ್ಯಾಂಕ್ ಖಾತೆ Active ಇರುವ ಬಗ್ಗೆ ಹಾಗೂ ಸದರಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಖಚಿತ ಮಾಡಿಕೊಳ್ಳುವುದು.

3. ಒಂದುವೇಳೆ ತಮ್ಮ ಆಧಾರ್ ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್ ಆಗದೇ ಇದ್ದಲ್ಲಿ, ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಲು ಕ್ರಮವಹಿಸುವುದು ಅಥವಾ ಅಂಚೆ ಕಛೇರಿಯಲ್ಲಿ IPPB ಖಾತೆಯನ್ನು ತೆರೆಯುವುದು.

4. ಆಧಾರ್ ಜೋಡಣೆ ಬಗ್ಗೆ DBT Karnataka Mobile App ನಲ್ಲಿ ಹರಿತೀಲಿಸಿ ಖಚಿತ ಪಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು ಎಂದು ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದಾರೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಿದ್ಯಾರ್ಥಿ ವೇತನ / ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಅನುಕೂಲ ಪಡೆದುಕೊಳ್ಳಿ.#Scholarship #karnatakagovt @CMofKarnataka @siddaramaiah @DKShivakumar @DrHCMahadevappa pic.twitter.com/E3vMUOYgUd

— DIPR Karnataka (@KarnatakaVarthe) October 28, 2024

Good News for 'Scheduled Caste' Students from the State Government: Application Invitation for 'Student Salary/Incentive Fund'! ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಜಾತಿಯ' ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿದ್ಯಾರ್ಥಿ ವೇತನ/ಪ್ರೋತ್ಸಾಹ ಧನ'ಕ್ಕೆ ಅರ್ಜಿ ಆಹ್ವಾನ.!
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM2 Mins Read

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM1 Min Read

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM1 Min Read
Recent News

ಇನ್ಮುಂದೆ ತರಬೇತಿ ಕೇಂದ್ರಗಳ ಶುಲ್ಕದಿಂದ ಚಟುವಟಿಕೆಗಳವರೆಗೆ ಎಲ್ಲವೂ ಮೇಲ್ವಿಚಾರಣೆ ; ‘ಸುಪ್ರೀಂ’ಗೆ ಕೇಂದ್ರದಿಂದ ಅಫಿಡವಿಟ್

05/11/2025 9:24 PM

BREAKING : ವಿಶ್ವಕಪ್ ಗೆಲುವಿನ ಬಳಿಕ ‘ಮಹಿಳಾ ಕ್ರಿಕೆಟ್ ತಂಡ’ ಸನ್ಮಾನಿಸಿದ ‘ಪ್ರಧಾನಿ ಮೋದಿ’ ; ಫೋಟೋಸ್ ವೈರಲ್

05/11/2025 8:54 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM

BREAKING : ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ, ‘ಟ್ರೋಫಿ’ಯೊಂದಿಗೆ ‘ಮೋದಿ’ ಪೋಸ್

05/11/2025 8:37 PM
State News
KARNATAKA

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

By kannadanewsnow0905/11/2025 8:44 PM KARNATAKA 2 Mins Read

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 2 ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ 44 ಗ್ರಾಂ…

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM

ಕುರುಬ ಸಮಾಜದ ಸಂಪ್ರದಾಯದಂತೆ ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ : ಸಿಎಂ ಸೇರಿ ಹಲವರು ಗಣ್ಯರು ಭಾಗಿ

05/11/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.