Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಂಡ್ರಾಯ್ಡ್ ಬಳಕೆದಾರರೇ ಎಚ್ಚರ! ತಕ್ಷಣ ಫೋನ್ ಅಪ್‌ಡೇಟ್ ಮಾಡದಿದ್ದರೆ ಹ್ಯಾಕರ್ಸ್ ಪಾಲು ನಿಮ್ಮ ಡೇಟಾ: ಕೇಂದ್ರ ಸರ್ಕಾರದಿಂದ ತುರ್ತು ವಾರ್ನಿಂಗ್

15/01/2026 11:28 AM

BIG NEWS : ಬೆಂಗಳೂರಲ್ಲಿ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ!

15/01/2026 11:21 AM

BIG NEWS : ನಟೋರಿಯಸ್ ರೌಡಿಶೀಟರ್, ಗುಬ್ಬಚ್ಚಿ ಸೀನನ ವಿರುದ್ಧ ಕೋಕಾ ಆಕ್ಟ್ ದಾಖಲಿಸಿದ ಪೊಲೀಸರು

15/01/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕೊಳಗೇರಿ ನಿವಾಸಿಗಳಿಗೆ’ ಗುಡ್ ನ್ಯೂಸ್ : ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ.!
KARNATAKA

ರಾಜ್ಯ ಸರ್ಕಾರದಿಂದ `ಕೊಳಗೇರಿ ನಿವಾಸಿಗಳಿಗೆ’ ಗುಡ್ ನ್ಯೂಸ್ : ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ.!

By kannadanewsnow5722/11/2025 8:59 AM

ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದರು.

ಇಂದು ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿ ಪ್ರದೇಶಗಳಿಗೆ ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದ ಅವರು ಕೊಳಗೇರಿ ಪ್ರದೇಶಗಳ ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು ಹಾಗೂ ಅದಕ್ಕೆ ಅಗತ್ಯವಿರುವ ಹಣಕಾಸಿನ ಕುರಿತು ಚರ್ಚಿಸಿದರು.

ವಸತಿ ಇಲಾಖೆಯು ಕರ್ನಾಟಕ ಗೃಹಮಂಡಳಿ ಮೂಲಕ ನಿರ್ಮಿಸಿದ ವಸತಿ ಸಂಕೀರ್ಣದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಆದಷ್ಟು ಬೇಗ ವಸತಿ ಸೌಕರ್ಯವನ್ನು ಅಭಿವೃದ್ದಿಪಡಿಸಬೇಕಿದೆ. ಈ ನಿಟ್ಟಿನಲ್ಲಿ 684 ಮನೆಗಳನ್ನು ಗುರುತಿಸಿದ್ದು, ತಕ್ಷಣವೇ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ ಎಂದು ವಸತಿ ಸಚಿವರಿಗೆ ವಿವರಿಸಿದರು.

ಕಾಚರಕನಹಳ್ಳಿಗೆ ಹೊಂದಿಕೊಂಡಿರುವ ಕೊಳಗೇರಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ವಸತಿ ಸೌಕರ್ಯದ ಬಗ್ಗೆಯೂ ಚರ್ಚೆ ನಡೆಸಿ, ಈ ವೇಳೆ ಮಾತನಾಡಿದ ಇಂದನ ಸಚಿವ ಕೆ.ಜೆ.ಜಾರ್ಜ್, “ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಮೂಲದ ಶ್ರಮಿಕ ಜನರೇ ಹೆಚ್ಚಾಗಿ ವಾಸವಿದ್ದಾರೆ. 457 ಕುಟುಂಬಗಳು ಹಲವು ದಶಕಗಳಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಕೆಲವು ವರ್ಷಗಳ ಹಿಂದೆ ಬೆಂಕಿ ಅವಘಡದಲ್ಲಿ ತಮ್ಮ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ವಸತಿ ಇಲಾಖೆಯು ಮತದಾರರ ಗುರುತಿನ ಚೀಟಿಯನ್ನೇ ಪ್ರಮುಖ ದಾಖಲೆ ಎಂದು ಪರಿಗಣಿಸಿ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಬೇಕು ಎಂದು ವಸತಿ ಸಚಿವರಿಗೆ ಮನವಿ ಮಾಡಿದರು.

ಕೊಳಗೇರಿ ನಿವಾಸಿಗಳಿಗೆ ವಸತಿ ಮತ್ತು ಮೂಲ ಸೌಕರ್ಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ ಅವರನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಬೇಕಾಗುತ್ತದೆ, ಈ ಹಿನ್ನೆಲೆಯಲ್ಲಿ ವಸತಿ ಇಲಾಖೆ ಸೂಕ್ತ ಸ್ಥಳವೊಂದನ್ನು ಗುರುತಿಸಿ ಕುಡಿಯುವ ನೀರು, ಶೌಚಾಲಯ ಹಾಗೂ ರಕ್ಷಣೆ ಒದಗಿಸುವಂತ ವ್ಯವಸ್ಥೆಯನ್ನು ರೂಪಿಸಬೇಕು. ಇದು ವಸತಿ ಇಲಾಖೆಗೆ ಕೊಳಗೇರಿಗಳನ್ನು ಸ್ಥಳಾಂತರಿಸುವ ಸಮಯದಲ್ಲಿ ತಾತ್ಕಾಲಿಕವಾಗಿ ಬಳಕೆ ಮಾಡಬಹುದು ಎಂದು ಸಲಹೆ ನೀಡಿದರು.

ಇದಕ್ಕೆ ಸ್ಪಂದಿಸಿದ ವಸತಿ ಸಚಿವರು ಸಚಿವ ಜಾರ್ಜ್ ಅವರು ಒಳ್ಳೆಯ ಸಲಹೆ ನೀಡಿದ್ದಾರೆ ಎಂದರಲ್ಲದೆ, ಅದಕ್ಕಾಗಿ ಧನ್ಯವಾದ ಸಲ್ಲಿಸಿದರು. ಸ್ಥಳದಲ್ಲೇ ಹಾಜರಿದ್ದ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ವಸತಿ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿ ಸ್ಥಳ ಗುರುತಿಸಲು ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್. ಕೆ. ನಾಯಕ್ ಗಿಡ್ಡಹಳ್ಳಿ ಸಮೀಪ ನಾಲ್ಕು ಎಕರೆ ಸ್ಥಳಾವಕಾಶವಿದ್ದು, ಅಲ್ಲಿಯೇ ತಾತ್ಕಾಲಿಕ ವ್ಯವಸ್ಥೆ ಮಾಡಬಹುದು ಎಂದು ತಿಳಿಸಿದರು.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ವಸತಿ ಸೌಕರ್ಯ ವಂಚಿತ ಜನರಿಗೆ ಸಮಸ್ಯೆಯಾಗದಂತೆ ಸೂಕ್ತ ಸ್ಥಳದಲ್ಲಿ ವಸತಿ ಸಂಕೀರ್ಣ ನಿರ್ಮಿಸಲಾಗುವುದು ಇಲ್ಲವೇ ವಸತಿ ಇಲಾಖೆಯಲ್ಲಿ ಹಾಲಿ ಇರುವ ಮನೆಗಳನ್ನು ವಸತಿ ರಹಿತರಿಗೆ ನೀಡುವ ಬಗ್ಗೆ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಸತಿ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುದಾನ ನೀಡಲಾಗುತ್ತಿದೆ. ಜೊತೆಗೆ ಬ್ಯಾಂಕ್ ನಿಂದ ಸಾಲ ಸೌಲಭ್ಯವೂ ಸಿಗುತ್ತದೆ. ಹೀಗಾಗಿ ಈ ಎಲ್ಲದರ ವಿವರಗಳ ಬಗ್ಗೆ ಕೂಡಲೇ ಮಾಹಿತಿ ಪಡೆದು ತ್ವರಿತವಾಗಿ ವಸತಿ ಸೌಲಭ್ಯ ಕಲ್ಪಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಜಮೀರ್ ಅಹ್ಮದ್ ಮತನಾಡಿ, ಕೂಡಲೇ ಸ್ಥಳವನ್ನು ಪರಿಶೀಲನೆ ನಡೆಸಿ ವಾರದೊಳಗೆ ವರದಿ ಹಾಗೂ ಯೋಜನೆ ಸಿದ್ದಪಡಿಸುವಂತೆ ವಸತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಚರಕನಹಳ್ಳಿ ಕೆರೆಗೆ ಹೊಸರೂಪ

ಹಲವು ದಶಕಗಳಿಂದ ಸಮಸ್ಯೆಯ ತಾಣವಾಗಿರುವ ಕಾಚರಕನಹಳ್ಳಿ ಕೆರೆಗೆ ಕಾಯಕಲ್ಪ ನೀಡಲು ಇಂಧನ ಸಚಿವರೂ ಆಗಿರುವ ಹಾಗೂ ಸರ್ವಜ್ಞ ನಗರ ಶಾಸಕ ಕೆ.ಜೆ.ಜಾರ್ಜ್ ಮುಂದಾಗಿದ್ದಾರೆ. ಕೆರೆಗೆ ಹೊಂದಿಕೊಂಡಿರುವ ಕೊಳಗೇರಿ ಸ್ಥಳಾಂತರ ಹಾಗೂ ಕೆರೆಗೆ ಸೇರುತ್ತಿರುವ ಮಲಿನ ನೀರನ್ನು ಶುದ್ಧೀಕರಿಸಲು ಘಟಕ ಸ್ಥಾಪನೆ ಮಾಡುವುದರ ಸುಂದರವಾದ ಪಾರ್ಕ್ ನಿರ್ಮಿಸಲು ನೀಲನಕ್ಷೆ ಸಿದ್ದಪಡಿಸಲಾಗಿದೆ. ಇದರ ಮೊದಲ ಹಂತವಾಗಿ ಕೊಳಗೇರಿ ಸ್ಥಳಾಂತರದ ಕುರಿತು ವಸತಿ ಸಚಿವರೊಂದಿಗೆ ಚರಚೆ ನಡೆಸಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಸಚಿವರ ಭೇಟಿ ವೇಳೆ ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ಅಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪುಲಕೇಶಿ, ಸುಮಿತ್ರ ಮುನಿಕೃಷ್ಣ, ಕಮ್ಮನಹಳ್ಳಿ, ಕಾಚರಕನಹಳ್ಳಿ ಹಾಗೂ ಬಾಣಸವಾಡಿ ಕ್ಷೇತ್ರದ ಮುಖಂಡರು ಉಪಸ್ಥಿತರಿದ್ದರು.

Good news for slum dwellers from the state government: low-cost housing!
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ!

15/01/2026 11:21 AM1 Min Read

BIG NEWS : ನಟೋರಿಯಸ್ ರೌಡಿಶೀಟರ್, ಗುಬ್ಬಚ್ಚಿ ಸೀನನ ವಿರುದ್ಧ ಕೋಕಾ ಆಕ್ಟ್ ದಾಖಲಿಸಿದ ಪೊಲೀಸರು

15/01/2026 11:08 AM1 Min Read

ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟಗೊಂಡು, ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ!

15/01/2026 10:24 AM1 Min Read
Recent News

ಆಂಡ್ರಾಯ್ಡ್ ಬಳಕೆದಾರರೇ ಎಚ್ಚರ! ತಕ್ಷಣ ಫೋನ್ ಅಪ್‌ಡೇಟ್ ಮಾಡದಿದ್ದರೆ ಹ್ಯಾಕರ್ಸ್ ಪಾಲು ನಿಮ್ಮ ಡೇಟಾ: ಕೇಂದ್ರ ಸರ್ಕಾರದಿಂದ ತುರ್ತು ವಾರ್ನಿಂಗ್

15/01/2026 11:28 AM

BIG NEWS : ಬೆಂಗಳೂರಲ್ಲಿ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ!

15/01/2026 11:21 AM

BIG NEWS : ನಟೋರಿಯಸ್ ರೌಡಿಶೀಟರ್, ಗುಬ್ಬಚ್ಚಿ ಸೀನನ ವಿರುದ್ಧ ಕೋಕಾ ಆಕ್ಟ್ ದಾಖಲಿಸಿದ ಪೊಲೀಸರು

15/01/2026 11:08 AM

ಇನ್ನು ನಡೆಯಲ್ಲ ‘Grok’ ಆಟ! ಅಪ್‌ಡೇಟ್ ಆದ ಬೆನ್ನಲ್ಲೇ ‘ನ್ಯೂಡ್’ ಫೋಟೋ ಕ್ರಿಯೇಟ್ ಮಾಡೋದನ್ನು ನಿಲ್ಲಿಸಿದ ಮಸ್ಕ್ AI

15/01/2026 11:04 AM
State News
KARNATAKA

BIG NEWS : ಬೆಂಗಳೂರಲ್ಲಿ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ!

By kannadanewsnow0515/01/2026 11:21 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ…

BIG NEWS : ನಟೋರಿಯಸ್ ರೌಡಿಶೀಟರ್, ಗುಬ್ಬಚ್ಚಿ ಸೀನನ ವಿರುದ್ಧ ಕೋಕಾ ಆಕ್ಟ್ ದಾಖಲಿಸಿದ ಪೊಲೀಸರು

15/01/2026 11:08 AM

ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟಗೊಂಡು, ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ!

15/01/2026 10:24 AM

ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ : ಮಾಜಿ ಸಂಸದ ಪ್ರತಾಪ್ ಸಿಂಹ

15/01/2026 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.