Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

18/07/2025 10:17 PM

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM

BREAKING: ಲಾಸ್ ಏಂಜಲೀಸ್‌ನಲ್ಲಿ ಭೀಕರ ಸ್ಪೋಟ: ಮೂವರು ಸಾವು – ವರದಿ | Explosion In Los Angeles

18/07/2025 10:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : `ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿ’ಯಲ್ಲೂ ಶೇ.2 ರಷ್ಟು ಮೀಸಲಾತಿ!
KARNATAKA

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : `ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿ’ಯಲ್ಲೂ ಶೇ.2 ರಷ್ಟು ಮೀಸಲಾತಿ!

By kannadanewsnow5721/09/2024 4:49 AM

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಿವಿಲ್ ಸೇವೆಗಳ ನೇರ ನೇಮಕಾತಿಗೂ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಒದಗಿಸುವ ಸಂಬಂಧ ಗಜೆಟ್ ಅಧಿಸೂಚನೆ ಪ್ರಕಟಿಸಿದೆ.

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 2024ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:15.02.2024ರ ರಾಜ್ಯ ಪತ್ರ ವಿಶೇಷ ಸಂಚಿಕೆಯ ಭಾಗ-IV-ಎ (ನಂ.84) ರಲ್ಲಿ ಅಧಿಸೂಚನೆ ಸಂಖ್ಯೆ:ಸಿಆಸುಇ 295 ಸನನಿ 2023, ದಿನಾಂಕ:15.02.2024ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ,

ಮತ್ತು, ಸದರಿ ರಾಜ್ಯಪತ್ರವನ್ನು ದಿನಾಂಕ:15ನೇ ಫೆಬ್ರವರಿ 2024ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ,

ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ,

ಪ್ರಸ್ತುತ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-

ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು,

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು,

ನಿಯಮ 9ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ

2. ನೇಮಕಾತಿ)ನಿಯಮಗಳು, 1977 ರಲ್ಲಿ ನಿಯಮ 9 ರ ಉಪ-ನಿಯಮ (1), ಖಂಡ (1D) ನಂತರ ಈ ಕೆಳಕಂಡಂತೆ ಸೇರಿಸತಕ್ಕದ್ದು:-

“(1E) ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ರಚಿಸಿದ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು ಅಂಥ ನೇಮಕಾತಿ ನಿಯಮಗಳಲ್ಲಿ ನೇರ ನೇಮಕಾತಿಯನ್ನು ಒಂದು ವಿಧಾನವನ್ನಾಗಿ ನಿಗದಿಪಡಿಸಿದ್ದಲ್ಲಿ ಅಂಥ ವಿಧಾನದ ಮೂಲಕ ನೇಮಕ ಮಾಡುವುದಕ್ಕಾಗಿ ಸಾಮಾನ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಪ್ರತಿ ಇಲಾಖೆಯ ಮಂಜೂರಾದ ವೃಂದ ಬಲದ ಶೇಕಡಾ ಎರಡರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಮೀಸಲಿರಿಸತಕ್ಕದ್ದು.

Good news for sportspersons: 2% reservation in Karnataka Civil Services recruitment ರಾಜ್ಯ ಸರ್ಕಾರದಿಂದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ಅಧಿಸೂಚನೆ
Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

18/07/2025 10:17 PM1 Min Read

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM2 Mins Read

BIG NEWS: ಸಾಗರ ತಾಲ್ಲೂಕಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್: 50 ಕೋಟಿ ಅನುದಾನ ಮಂಜೂರು

18/07/2025 9:39 PM2 Mins Read
Recent News

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

18/07/2025 10:17 PM

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM

BREAKING: ಲಾಸ್ ಏಂಜಲೀಸ್‌ನಲ್ಲಿ ಭೀಕರ ಸ್ಪೋಟ: ಮೂವರು ಸಾವು – ವರದಿ | Explosion In Los Angeles

18/07/2025 10:02 PM

BREAKING : ಭಾರತ ಸೇರಿ ಪ್ರಪಂಚದಾದ್ಯಂತ ‘ಗೂಗಲ್’ ಡೌನ್ ; ‘ಜಿಮೇಲ್, ಡ್ರೈವ್ ಸೇವೆ’ಗಳು ಸ್ಥಗಿತ, ಬಳಕೆದಾರರ ಪರದಾಟ |Google down

18/07/2025 9:55 PM
State News
KARNATAKA

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

By kannadanewsnow0918/07/2025 10:17 PM KARNATAKA 1 Min Read

ಶಿವಮೊಗ್ಗ: ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಚಾಲನೆ ನೀಡಿದಂತ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಸಾಗರ ತಾಲ್ಲೂಕಿನಲ್ಲೂ…

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM

BIG NEWS: ಸಾಗರ ತಾಲ್ಲೂಕಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್: 50 ಕೋಟಿ ಅನುದಾನ ಮಂಜೂರು

18/07/2025 9:39 PM

ಕೆಡಿಪಿ ಸಭೆಯಲ್ಲಿ ರಮ್ಮಿ ಆಟ ಆಡಿದ ಡಿಸಿಎಫ್ ಗೆ ಕಾರಣ ಕೇಳಿ ನೋಟಿಸ್: ಸಚಿವ ಈಶ್ವರ್ ಖಂಡ್ರೆ

18/07/2025 9:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.