Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ‘ಮರುಸಿಂಚನ’ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಶಿಕ್ಷಣ ಇಲಾಖೆ ಆದೇಶ.!
KARNATAKA

ರಾಜ್ಯದ `SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲೆಗಳಲ್ಲಿ ‘ಮರುಸಿಂಚನ’ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಶಿಕ್ಷಣ ಇಲಾಖೆ ಆದೇಶ.!

By kannadanewsnow5721/12/2024 5:02 AM

ಬೆಂಗಳೂರು : 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖದನ್ವಯ ಮುಖ್ಯಮಂತ್ರಿಗಳ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿತವಾದ “ಮರುಸಿಂಚನ” ಕಾರ್ಯಕ್ರಮವನ್ನು 17 ಜಿಲ್ಲೆಗಳ 93 ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದು, ಈಗಾಗಲೇ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ತರಬೇತಿಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಲ್ಲಿ ಕಲಿಕಾ ನ್ಯೂನತೆಗಳನ್ನು ಸರಿಪಡಿಸುವುದು, ತರಗತಿಗನುಗುಣವಾದ ಕಲಿಕಾ ಫಲಗಳನ್ನು ಸಾಧಿಸಲು ಹಿಂದಿನ ತರಗತಿಗಳ ಕಲಿಕಾ ಫಲಗಳನ್ನು ವೃದ್ಧಿಸುವುದು, ಪ್ರಮಾಣೀಕೃತ ಮೌಲ್ಯಮಾಪನವನ್ನು ಕೈಗೊಳ್ಳುವುದು ಹಾಗೂ 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಗುಣಾತ್ಮಕವಾಗಿ ಸಾಧಿಸುವುದು.

ಇದರ ಮುಂದುವರಿದ ಭಾಗವಾಗಿ, ಮರುಸಿಂಚನ ಕಾರ್ಯಕ್ರಮವನ್ನು 93 ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಬೇಕಿದೆ. ಸದರಿ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಿದ್ಧತೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಗಮನದಲ್ಲಿರಿಸಿ ಈ ಕೆಳಕಂಡಂತೆ ಹಮ್ಮಿಕೊಳ್ಳಲಾಗುವುದು.

1. ಸದರಿ ಸಾಲಿನಲ್ಲಿ ಬೇಸ್ಟೈನ್ ಅಸೆಸ್‌ಮೆಂಟ್ ಅನ್ನು (ನೈದಾನಿಕ ಮೌಲ್ಯಮಾಪನ) ನಡೆಸಲಾಗುವುದಿಲ್ಲ. ಸರಬರಾಜು ಮಾಡಿರುವ ಬೇಸ್ಟೈನ್ ಅಸೆಸ್‌ಮೆಂಟ್ ಹಾಳೆಗಳ ಬಂಡಲ್ ಗಳನ್ನು ತೆರೆಯದೇ, ಅದನ್ನು ಸುರಕ್ಷಿತವಾಗಿ, ಗೌಪ್ಯತೆಯನ್ನು ಕಾಪಾಡಿಕೊಂಡು, ಮುಂದಿನ ಸಾಲಿನಲ್ಲಿ ಬಳಸುವುದು.

2. ಈ ಶೈಕ್ಷಣಿಕ ವರ್ಷದಲ್ಲಿ ಕನ್ನಡ ಭಾಷೆ, ಇಂಗ್ಲೀಷ್ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ” ಮತ್ತು ಶಿಕ್ಷಕರಿಗೆ “ಶಿಕ್ಷಕರ ಕೈಪಿಡಿ” ಗಳನ್ನು ಪ್ರತಿ ವಿಷಯಕ್ಕೆ ನೀಡಲಾಗಿದೆ.

3. ಪ್ರತಿ ವಿಷಯದ ಬುನಾದಿ ಹಂತದ 10 ಅಧ್ಯಾಯಗಳನ್ನು ತರಗತಿಗಳಲ್ಲಿ ತೊಡಗಿಸಿಕೊಳ್ಳದೇ, ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ನಿರ್ವಹಿಸುವಂತೆ ಸೂಚಿಸುವುದು. ವಿದ್ಯಾರ್ಥಿಗಳು ಬುನಾದಿ ಹಂತದ ಅಧ್ಯಾಯಗಳನ್ನು ಗಳಿಸಿರುವ ಬಗ್ಗೆ “ವಿದ್ಯಾರ್ಥಿಗಳ ಅಭ್ಯಾಸ ಪುಸ್ತಕ”ದ ಹಾಳೆಗಳನ್ನು ವಿದ್ಯಾರ್ಥಿಗಳು ನಿರ್ವಹಿಸಿರುವ ಬಗ್ಗೆ ವಿಷಯ ಶಿಕ್ಷಕರು ದಿನಾಂಕ: 15.01.2025ರೊಳಗೆ ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸುವುದು.

4. ದಿನಾಂಕ:31.12.2024 ರಿಂದ 26.02.2025 ರವರೆಗೆ ಬೆಂಬಲಿತ ಕಲಿಕಾ ಹಂತವನ್ನು ಶಾಲಾ ತರಗತಿಗಳಲ್ಲಿ ಹಮ್ಮಿಕೊಳ್ಳುವುದು. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪೂರಕವಾದ ಅಧ್ಯಾಯಗಳನ್ನು ಮಾತ್ರ ಈ ಹಂತದಲ್ಲಿ ವಿದ್ಯಾರ್ಥಿಗಳಿಂದ ಅಭ್ಯಾಸ ಮಾಡಿಸುವುದು. ಇದಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಲಾಗಿದೆ.

Good news for SSLC students in the state: Education department orders implementation of 'Resinchana' programme in schools ರಾಜ್ಯದ SSLC ವಿದ್ಯಾರ್ಥಿಗಳಿಗೆ ಬಿಗ್‌ ಶಾಕ್‌ : ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಪಾವತಿಗೆ ಸೂಚನೆ !
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM2 Mins Read

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM1 Min Read

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM1 Min Read
Recent News

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM

ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

09/06/2025 6:12 PM
State News
KARNATAKA

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

By kannadanewsnow0909/06/2025 6:25 PM KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮಹತ್ವದ ಮಾಹಿತಿ ಎನ್ನುವಂತೆ ಜುಲೈ.1, 2025ರಿಂದ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM

ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

09/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.