Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಸಂಜೀವಿನಿ ಯೋಜನೆ’ ಅನುಷ್ಠಾನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಸಂಜೀವಿನಿ ಯೋಜನೆ’ ಅನುಷ್ಠಾನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

By kannadanewsnow5701/10/2024 5:30 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (THE KARNATAKA AROGYA SANJEEVINI SCHEME -KASS) ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME – KASS) ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಮೇಲೆ (1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.

ಮೇಲೆ ಓದಲಾದ (2) ರ ಸರ್ಕಾರದ ಆದೇಶ ದಿನಾಂಕ: 05.09.2022ರಲ್ಲಿ ಯೋಜನೆಯ ನಿರ್ವಹಣೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಅಧಿಕಾರ ಮತ್ತು ನಿರ್ವಹಿಸಬೇಕಾದ ವಿಷಯಗಳ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ. ಮೇಲೆ ಓದಲಾದ (3)ರ ಪತ್ರ ಮತ್ತು (4) ರಲ್ಲಿನ ಕಡತಗಳಲ್ಲಿ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗಳಲ್ಲಿ KASS ಯೋಜನೆಯ ನಿರ್ವಹಣೆಗಾಗಿ ಕೆಲವು ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲು ಕೋರಿರುತ್ತಾರೆ.

‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME KASS) ಯನ್ನು ಸುಗುಮವಾಗಿ, ಪರಿಣಾಮಕಾರಿಯಾಗಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ಅವುಗಳ ಸಂಯೋಜನೆ ಹಾಗೂ ಜವಾಬ್ದಾರಿಗಳನ್ನು ನಿಗದಿಪಡಿಸಿ ಆದೇಶಿಸಬೇಕಾಗಿರುವುದರಿಂದ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿದಂತೆ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-(KASS)’ ಯನ್ನು ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ಈ ಕೆಳಕಂಡ ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಿದೆ:

1. KASS (KASS HIGH LEVEL POLICY COMMITTEE)

2. KASS (KASS TECHNICAL ADVISORY COMMITTEE)

3. ರಾಜ್ಯ ಮಟ್ಟದ KASS ನೋಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ 3 (STATE LEVEL KASS EMPANELMENT, DISCIPLINARY AND GRIEVANCE REDRESSAL COMMITTEE)

4. ಜಿಲ್ಲಾ ಮಟ್ಟದ KASS ನೋಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ 3 (DISTRICT LEVEL KASS EMPANELMENT, DISCIPLINARY AND GRIEVANCE REDRESSAL COMMITTEE)

ಮೇಲೆ ರಚಿಸಿರುವ ಸಮಿತಿಗಳ ಸಂಯೋಜನೆ, ಪ್ರಕಾರ್ಯಗಳು ಮತ್ತು ಜವಾಬ್ದಾರಿಗಳನ್ನು ಅನುಬಂಧ 1-4 ಗಳಲ್ಲಿ ನೀಡಲಾಗಿದೆ. ಸಮಿತಿಯ ಪ್ರಕಾರ್ಯಗಳಿಗೆ ಒಳಪಡುವ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವನೆಗಳನ್ನು ಸದರಿ ಸಮಿತಿಗಳ ಮೂಲಕ ಪರಿಶೀಲನೆಗೊಳಪಡಿಸಿದ ನಂತರದಲ್ಲಿಯೇ ಸರ್ಕಾರಕ್ಕೆ ಸಲ್ಲಿಸುವಂತೆ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು ಇವರಿಗೆ ಸೂಚನೆಗಳನ್ನು ನೀಡಿ ಆದೇಶಿಸಲಾಗಿದೆ.

Good news for state government employees: State government orders formation of committee to implement 'Arogya Sanjeevini Yojana' ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘7ನೇ ವೇತನ ಆಯೋಗ ವರದಿ’ ಜಾರಿಗೆ ‘ರಾಜ್ಯ ಸರ್ಕಾರ’ ಸಿದ್ಧತೆ
Share. Facebook Twitter LinkedIn WhatsApp Email

Related Posts

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM1 Min Read

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM1 Min Read

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM1 Min Read
Recent News

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM
State News
KARNATAKA

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0928/06/2025 9:49 PM KARNATAKA 1 Min Read

ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1,…

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.