Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

04/08/2025 3:47 PM

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪಿಂಚಣಿದಾರರಿಗೆ ಗುಡ್ ನ್ಯೂಸ್: KPTCLನಿಂದ ‘ಲೈಫ್ ಸರ್ಟಿಫಿಕೇಟ್’ಗೆ ತಂತ್ರಾಂಶ ಬಿಡುಗಡೆ
KARNATAKA

ರಾಜ್ಯದ ಪಿಂಚಣಿದಾರರಿಗೆ ಗುಡ್ ನ್ಯೂಸ್: KPTCLನಿಂದ ‘ಲೈಫ್ ಸರ್ಟಿಫಿಕೇಟ್’ಗೆ ತಂತ್ರಾಂಶ ಬಿಡುಗಡೆ

By kannadanewsnow0921/04/2025 7:05 PM

ಬೆಂಗಳೂರು : ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ ಹಣಕಾಸು ವಿಭಾಗದ ನಿರ್ದೇಶಕರಾದ ಕೆ ಎನ್ ಗಂಗಾಧರ್ ಜೀವನ ಪ್ರಮಾಣ ಪತ್ರ ಪ್ರಮಾಣೀಕರಣ ತಂತ್ರಾಂಶವನ್ನು ಅನಾವರಣಗೊಳಿಸಿದರು.

ತಂತ್ರಾಂಶ ಚಾಲನೆಗೊಳಿಸಿ ಮಾತನಾಡಿದ ಗಂಗಾಧರ್, ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲು ನಿಗಮದ ಮಾಹಿತಿ ತಂತ್ರಜ್ಞಾನ ವಿಭಾಗ “ಎನ್ಐಸಿಯ ಜೀವನ್ ಪ್ರಮಾಣ್ ಅಪ್ಲಿಕೇಷನ್ ಜತೆಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್” (ಡಿಎಲ್‌ಸಿ) ಪ್ರಮಾಣೀಕರಣ ತಂತ್ರಾಂಶ ಅಭಿವೃದ್ಧಿಗೊಳಿಸಿದ್ದು ಪಿಂಚಣಿದಾರರಿಗೆ ತಾವಿದ್ದ ಸ್ಥಳದಿಂದಲೇ ಲೈಫ್ ಸರ್ಟಿಫಿಕೇಟ್ ವೆರಿಫಿಕೇಷನ್ ಮಾಡಬಹುದಾಗಿದೆ. ಪಿಂಚಣಿದಾರರಿಗೆ ಈ ತಂತ್ರಾಂಶದ ಬಗ್ಗೆ ಸಂಬಂಧಿಸಿದ ವಿಭಾಗಗಳಲ್ಲಿ ಜಾಗೃತಿ ಮೂಡಿಸಲಾಗುವುದು,” ಎಂದು ತಿಳಿಸಿದರು.

ಕೆಇಬಿ ಪೆನ್ಷನರ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಬಿ.ಪಿ, ಮಾತನಾಡಿ, “ರಾಜ್ಯದೆಲ್ಲೆಡೆ 40 ಸಾವಿರ ಪಿಂಚಣಿದಾರರಿದ್ದಾರೆ. ವರ್ಷದಲ್ಲಿ ಎರಡು ಬಾರಿ ಖುದ್ದು ಕಚೇರಿಗೆ ತೆರಳಿ ಜೀವನ ಪ್ರಮಾಣ ಪತ್ರವನ್ನು ಖಾತರಿಪಡಿಸಬೇಕಾಗಿತ್ತು. ಹೊಸ ಪ್ರಮಾಣೀಕರಣ ಸಾಫ್ಟ್‌ವೇರ್ ಅಭಿವೃದ್ಧಿಯಿಂದ ಹಿರಿಯ ಪಿಂಚಣಿದಾರರು ಹಾಗೂ ಕುಟುಂಬದವರಿಗೆ ಅನುಕೂಲವಾಗಲಿದೆ. ಮನೆಯಿಂದಲೇ ಈ ಪ್ರಮಾಣ ಪತ್ರ ಪಡೆಯಬಹುದು,” ಎಂದರು.

ತಂತ್ರಾಂಶ ಹೇಗೆ ಕೆಲಸ ಮಾಡುತ್ತದೆ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಿಂದ ಪಿಂಚಣಿ ಪಡೆಯುತ್ತಿರುವ ನಿವೃತ್ತ ನೌಕರರಿಗೆ ನೆರವಾಗಲು ನಿಗಮ ತನ್ನದೇ ಆದ ತಂತ್ರಾಂಶ ರೂಪಿಸಿದ್ದು, ಈ ತಂತ್ರಾಂಶ ನ್ಯಾಷನಲ್ ಇನ್ಫಾರ್ಮೆಟಿಕ್ಸ್ ಕಾರ್ಪೋರೇಷನ್ (ಎನ್‌ಐಸಿ) ಜತೆಗೆ ಮಾಹಿತಿಗಳನ್ನು ಹೊಂದಿಸಿ ನಿಗಮದ ಪಿಂಚಣಿ ವಿಭಾಗದ ಮೂಲ ತಂತ್ರಾಂಶ ಪಿಪಿಎಂಎಸ್‌ಗೆ ಮಾಹಿತಿ ನೀಡಲಿದೆ. ಸಮಗ್ರವಾಗಿ ಮೂಲ ಅಂಶಗಳನ್ನು ತಾಳೆ ಹಾಕಿದ ಬಳಿಕ ಕ.ವಿ.ಪ್ರ.ನಿ.ನಿ. ಮತ್ತು ವಿದ್ಯುತ್ ಸರಬರಾಜು ಕಂಪನಿಗಳ ಪಿಂಚಣಿ ಮತ್ತು ಉಪದಾನ ಟ್ರಸ್ಟ್‌ಗೆ ಸಲ್ಲಿಸಲಾಗುವುದು.

ಜೀವನ್ ಪ್ರಮಾಣ ಪೋರ್ಟಲ್ ಮೂಲಕ ನೋಂದಾಯಿಸಲಾದ ಪಿಂಚಣಿದಾರರ ವಿವರಗಳನ್ನು ಪರಿಶೀಲಿಸಲು ಮತ್ತು ಪ್ರಮಾಣೀಕರಿಸಲು ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪರಿಶೀಲನೆಯು ಪಿಂಚಣಿದಾರರ ಪರಿಶೀಲನೆಯ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ. ಇದು ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿಯಾಗಿದ್ದು, ಪಿಂಚಣಿದಾರರ ದಾಖಲೆಗಳ ಆನ್‌ಲೈನ್ ಪರಿಶೀಲನೆಯಾಗಿರುತ್ತದೆ. ಈ ಸರಳ ಆನ್ಲೈನ್ ಪ್ರಕ್ರಿಯೆಯಲ್ಲಿ ಭೌತಿಕ ಉಪಸ್ಥಿತಿ ಅವಶ್ಯಕತೆ ಇರುವುದಿಲ್ಲ.

ಈ ತಂತ್ರಾಂಶ ಅಭಿವೃದ್ಧಿಗೊಳಿಸಿದ ಮಾಹಿತಿ ತಂತ್ರಜ್ಞಾನ ವಿಭಾಗದ ಅಧೀಕ್ಷಕ ಇಂಜಿನಿಯರ್ ಅನಿಲ್ ಕುಮಾರ್ ಡಿ’ಸೋಜಾ ಹಾಗೂ ಅವರ ತಂಡವನ್ನು ಅಧಿಕಾರಿಗಳು ಅಭಿನಂದಿಸಿದರು.

ತಂತ್ರಾಂಶ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ನಿಗಮದ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ವಿಜಯ್ ಬಿ.ಪಿ., ಯೋಜನೆ ವಿಭಾಗದ ನಿರ್ದೇಶಕರಾದ ಎಸ್.ವಿ.ಮಂಜುನಾಥ್, ಕಾರ್ಯಾಚರಣೆ ವಿಭಾಗದ ನಿರ್ದೇಶಕರಾದ ಗಿರಿಧರ್ ಕುಲಕರ್ಣಿ, ಮಾಹಿತಿ ತಂತ್ರಜ್ಞಾನ ವಿಭಾಗದ ಅಧೀಕ್ಷಕ ಇಂಜಿನಿಯರ್ ಅನಿಲ್ ಕುಮಾರ್ ಡಿ’ಸೋಜಾ ಹಾಗೂ ನಿಗಮ ನೌಕರರ ಸಂಘದ ಬಲರಾಮ್, ಇಂಜಿನಿಯರ್‌ಗಳ ಸಂಘದ ಶಿವಣ್ಣ ಕೆ. ಉಪಸ್ಥಿತರಿದ್ದರು.

CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ವಸ್ತ್ರಸಂಹಿತೆ ಬದಲಾವಣೆಗೆ ಸಚಿವರಿಗೆ ರಾಮಲಿಂಗಾರೆಡ್ಡಿ ಪತ್ರ

ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್

ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

04/08/2025 3:47 PM1 Min Read

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM2 Mins Read

BREAKING : ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆ ಸಾರಿಗೆ ಬಂದ್ ಮಾಡದಂತೆ ಹೈಕೋರ್ಟ್ ಆದೇಶ

04/08/2025 3:25 PM1 Min Read
Recent News

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

04/08/2025 3:47 PM

Viral Video : ಬಾಲಕಿಯ ಮೊಬೈಲ್ ವ್ಯಸನ ಬಿಡಿಸಲು ವಿಶಿಷ್ಟ ತಂತ್ರ ಬಳಸಿದ ಪೋಷಕರು, ನೀವೂ ಒಮ್ಮೆ ಟ್ರೈ ಮಾಡಿ

04/08/2025 3:47 PM

BREAKING: ಪಹಲ್ಗಾಮ್ ದಾಳಿಯ ಎನ್ ಕೌಂಟರ್ ನಲ್ಲಿ ಬಲಿಯಾದ ಮೂವರು ಉಗ್ರರು ಪಾಕಿಸ್ತಾನಿ ಪ್ರಜೆಗಳು: ವರದಿ

04/08/2025 3:42 PM

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM
State News
KARNATAKA

BREAKING: ‘ಧರ್ಮಸ್ಥಳ ಕೇಸ್’ಗೆ ಮತ್ತೊಂದು ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ ‘ಅಸ್ಥಿಪಂಜರ’ದ ಹಲವು ಭಾಗಗಳು ಪತ್ತೆ

By kannadanewsnow0904/08/2025 3:47 PM KARNATAKA 1 Min Read

ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.…

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜೆ: ಕಾಡಿನಿಂದ ನಾಡಿನತ್ತ ಮೊದಲ ತಂಡ ಗಜಪಯಣ

04/08/2025 3:27 PM

BREAKING : ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆ ಸಾರಿಗೆ ಬಂದ್ ಮಾಡದಂತೆ ಹೈಕೋರ್ಟ್ ಆದೇಶ

04/08/2025 3:25 PM
high court

BREAKING: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್: ಒಂದು ದಿನದ ಮಟ್ಟಿಗೆ ಸ್ಥಗಿತಕ್ಕೆ ಆದೇಶ

04/08/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.