Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ಭಾರತೀಯ ಕಂಪನಿಗಳು ಉದ್ಯೋಗಿಗಳಿಗೆ ಶೇ.9ರಷ್ಟು ಸಂಬಳ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ; ಅಧ್ಯಯನ

07/10/2025 9:10 PM

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

07/10/2025 9:02 PM

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೋಮವಾರದಿಂದ ಬಸ್ ವ್ಯವಸ್ಥೆ DCM ಡಿಕೆಶಿ ಖಡಕ್ ಸೂಚನೆ
KARNATAKA

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೋಮವಾರದಿಂದ ಬಸ್ ವ್ಯವಸ್ಥೆ DCM ಡಿಕೆಶಿ ಖಡಕ್ ಸೂಚನೆ

By kannadanewsnow0926/06/2024 7:30 PM

ಚನ್ನಪಟ್ಟಣ: ಎಂದಿನಿಂದ ಬಸ್ ವ್ಯವಸ್ಥೆ ಮಾಡುತ್ತೀರಾ, ಸೋಮವಾರದಿಂದಲೇ ಈ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಆಗಬೇಕು..” ಇದು ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಬಸ್ ವ್ಯವಸ್ಥೆ ಇಲ್ಲ ಎಂಬ ವಿದ್ಯಾರ್ಥಿನಿಯರ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ ಪರಿ.

ಬೇವೂರು ಮತ್ತು ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ನೀಡುವ ಭರವಸೆ ನೀಡಿದರು.

ಸಿದ್ದರಾಮೇಶ್ವರ ಕಾಲೇಜು ಹಾಗೂ ಇತರೆ ಸರ್ಕಾರಿ ಶಾಲೆಗಳ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು “ಸರ್ ನಮಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲ. ಚನ್ನಪಟ್ಟಣದಿಂದ ಮಲ್ಲನಕುಪ್ಪೆಗೆ ಪ್ರತಿದಿನ 9 ಗಂಟೆಗೆ ತಲುಪುವಂತೆ ಬಸ್ ವ್ಯವಸ್ಥೆ ಕಲ್ಪಿಸಿ” ಎಂದು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಶಿವಕುಮಾರ್ ಅವರು “ನಮ್ಮ ಹೆಣ್ಣು ಮಕ್ಕಳು ಧೈರ್ಯ, ಓದುವ ಛಲದಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಿಮ್ಮ ಅಧಿಕಾರಿಗೆ ಹೇಳಿ” ಎಂದು ಪಕ್ಕದಲ್ಲಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಹೇಳಿದರು. ಆಗ ಕೆಎಸ್ ಆರ್ ಟಿಸಿ ಅಧಿಕಾರಿಯನ್ನು ಕರೆದ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು “ಸೋಮವಾರವೇ ಬಸ್ ಬರಬೇಕು. ಈ ವಿದ್ಯಾರ್ಥಿನಿಯರ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

ಕೆಲಸ ಮಾಡದೆ ಏನು ಮಾಡುತ್ತಿದ್ದಾರೆ

ಕಾವೇರಿ ನೀರಾವರಿ ನಿಗಮದವರು ಜಮೀನುಗಳಿಗೆ ರಸ್ತೆ ನಿರ್ಮಾಣ ಮಾಡಿದ್ದು, ಅದನ್ನು ಒಂದಷ್ಟು ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ತೊಂದರೆ ಕೊಡುತ್ತಿದ್ದಾರೆ ಎಂದು ನಾಗವಾರ ಶ್ರೀಧರ್ ಮನವಿ ಸಲ್ಲಿಸಿದಾಗ, “”ಜಿಲ್ಲಾಧಿಕಾರಿಗಳೇ, ಇಂತಹ ಸಣ್ಣ ಸಮಸ್ಯೆಗಳನ್ನು ಬಗೆಹರಿಸದ ಅಧಿಕಾರಿಗಳು ಪ್ರತಿ ದಿನ ಏನು ಕೆಲಸ ಮಾಡುತ್ತಾರೆ” ಎಂದು ಡಿಸಿಎಂ ಕಿಡಿಯಾದರು.

ನನಗೆ ಹಾವು ಕಚ್ಚಿದ ಕಾರಣ ಎರಡು ಬೆರಳುಗಳನ್ನು ಕತ್ತರಿಸಿ ಹಾಕಿದ್ದಾರೆ. ಗಂಡ ತೀರಿ ಹೋಗಿದ್ದು ಅಂಗನವಾಡಿಯಲ್ಲಿ ಕೆಲಸ ಹಾಗೂ ವಿಧವಾ ವೇತನ ಹೆಚ್ಚಳ ಮಾಡಬೇಕು ಎಂದು ಬೇವೂರು ನಿವಾಸಿ ಲೀಲಾ ಅವರ ಮನವಿ ಆಲಿಸಿದ ನಂತರ “ದಿಗ್ವಿಜಯ ಬೊಡಕೆ ಅವರೇ ಈ ಮಹಿಳೆಗೆ ಆದಷ್ಟು ಬೇಗ ನೆರವು ನೀಡಿ. ನನಗೆ ವರದಿ ನೀಡಿ” ಎಂದು ಜಿಲ್ಲಾ ಪಂಚಾಯತಿ ಮುಖ್ಯಾಧಿಕಾರಿಗೆ ಸೂಚಿಸಿದರು.

ನನ್ನ ಮೇಲೆ ಮೂರು ಸುಳ್ಳು ಕೇಸುಗಳನ್ನು ಹಾಕಿದ್ದು ಮಾನಸಿಕ ಕಿರುಕುಳವಾಗುತ್ತಿದೆ ದಯವಿಟ್ಟು ಬಗೆಹರಿಸಿ ಕೊಡಿ ಎಂದು ಚನ್ನಪಟ್ಟಣದ ಎನ್ ಎಸ್ ಯುಐ ಅಧ್ಯಕ್ಷ ಅಭಿಷೇಕ್ ಮನವಿಗೆ “ಡಿವೈಎಸ್ ಪಿ ಅವರೇ ನಮ್ಮ ಪಕ್ಷದ ಕಾರ್ಯಕರ್ತರ ಸ್ಥಿತಿಯೇ ಹೀಗಾದರೆ ಹೇಗೆ? ಬೇಗ ಬಗೆಹರಿಸಿ” ಎಂದು ಸೂಚನೆ ನೀಡಿದರು.

ನಾವು ಮನೆಯಲ್ಲಿ ಐದಾಳುಗಳು ಇದ್ದೇವೆ. ಈಗ ಇರುವ ಚಿಕ್ಕಮನೆ ಬಿದ್ದು ಹೋಗುವ ಸ್ಥಿತಿಯಲ್ಲಿದ್ದು, ಮನೆಕೊಡಿ ಎಂದು ದೇವರ ಮಂಡ್ಯ ಗ್ರಾಮದ ಚಂದ್ರಮ್ಮ ಕಣ್ಣೀರು ಹಾಕಿದಾಗ “ಅಳಬೇಡಮ್ಮ ನಾನು ಈಗ ನಿಮ್ಮ ಊರಿಗೆ ಬಂದಿದ್ದೇನಲ್ಲ, ಎಲ್ಲ ಸಮಸ್ಯೆ ಬಗೆಹರಿಸುತ್ತೇನೆ” ಎಂದು ಧೈರ್ಯ ತುಂಬಿದರು.

ಸಂತೆಯಲ್ಲಿ ಕಟ್ಟಿರುವ ಶೆಡ್ ಅಲ್ಲಿ ವಾಸವಾಗಿ ಇದ್ದೇನೆ ಎಂದು ಬೇವೂರು ಸಂತೆಮಾಳದ ಅಲಮೇಲಮ್ಮ ಅವರ ಮಾತುಗಳನ್ನು ಆಲಿಸಿದ ಡಿಸಿಎಂ ಅವರು “ಯಾವುದೇ ಚಿಂತೆ ಮಾಡಬೇಡಿ. ಪ್ರತಿ ಪಂಚಾಯತಿ ಮಟ್ಟದಲ್ಲಿ ಆದಷ್ಟು ಬೇಗ ಮನೆ ಹಂಚಿಕೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಚನ್ನಪಟ್ಟಣದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ಕೊಡಿ ಎಂದು ಮಾಕಳಿ ಗ್ರಾಮ ಪಂಚಾಯತಿಯ ಸೂರಜ್ ಮನವಿಗೆ “ನಿಮ್ಮ ಕಷ್ಟ ನಿವಾರಣೆ ಮಾಡಲೆಂದೇ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ಉದ್ಯೋಗ, ಮನೆ, ಭೂಮಿ ಎಲ್ಲಾ ಸಮಸ್ಯೆ ಬಗೆಹರಿಸುತ್ತೇನೆ” ಎಂದರು.

ಎರಡು ಪಂಚಾಯತಿಗಳು ಸೇರಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ನಾಗರೀಕರು ಸಲ್ಲಿಸಿದರು. ಬಗರ್ ಹುಕುಂ ಜಮೀನು, ನಿವೇಶನ, ಉತ್ತಮ ರಸ್ತೆ, ಬಸ್ ವ್ಯವಸ್ಥೆಗಾಗಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

07/10/2025 9:02 PM1 Min Read

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM2 Mins Read

ದೇಶದ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

07/10/2025 8:44 PM1 Min Read
Recent News

Good News ; ಭಾರತೀಯ ಕಂಪನಿಗಳು ಉದ್ಯೋಗಿಗಳಿಗೆ ಶೇ.9ರಷ್ಟು ಸಂಬಳ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ; ಅಧ್ಯಯನ

07/10/2025 9:10 PM

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

07/10/2025 9:02 PM

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM

BREAKING : ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, 15 ವಿಮಾನಗಳ ಮಾರ್ಗ ಬದಲಾವಣೆ, ಆರೇಂಜ್ ಅಲರ್ಟ್ ಘೋಷಣೆ

07/10/2025 8:51 PM
State News
KARNATAKA

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

By kannadanewsnow0907/10/2025 9:02 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿ ಸಮೀಕ್ಷೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರ ನಡುವೆ ರಾಜ್ಯದಲ್ಲಿ ಇದುವರೆಗೆ 1,19,65,700…

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM

ದೇಶದ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

07/10/2025 8:44 PM

30ಕ್ಕೂ ಹೆಚ್ಚು ವರ್ಷಗಳಿಂದ ಹಕ್ಕುಪತ್ರ, ಮೂಲ ಸೌಕರ್ಯಗಳಿಲ್ಲ: ಮದ್ದೂರು ಶಾಸಕ ಉದಯ್ ಮುಂದೆ ಜನರ ಅಳಲು

07/10/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.