Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM

ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಪುಣೆಯ ಕಾನೂನು ವಿದ್ಯಾರ್ಥಿನಿ ಗುರುಗ್ರಾಮದಲ್ಲಿ ಬಂಧನ | Operation Sindoor

01/06/2025 6:33 AM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘SSLC ಪರೀಕ್ಷೆ’ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
KARNATAKA

ರಾಜ್ಯ ಸರ್ಕಾರದಿಂದ ‘SSLC ಪರೀಕ್ಷೆ’ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

By kannadanewsnow0924/04/2025 6:48 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ವಲಯವಾರು ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲು ನಿರ್ಧರಿಸಿದೆ.

ಈ ಸಂಬಂಧ ರಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರ ಪತ್ರದಲ್ಲಿ, ಏಪ್ರಿಲ್-2024 ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದ್ದು, 2024ನೇ ಸಾಲಿಗೆ ಜಿಲ್ಲಾವಾರು 115 ಮತ್ತು ಬ್ಲಾಕ್‌ವಾರು 641 ಒಳಗೊಂಡಂತೆ ಒಟ್ಟಾರೆಯಾಗಿ 756 ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಈಗಾಗಲೇ ಟೆಂಡ‌ ಪ್ರಕ್ರಿಯೆ ಕೈಗೊಂಡು ಸರಬರಾಜುದಾರರನ್ನು ಗುರುತಿಸಲಾಗಿದ್ದು, ಈ ಸಂಬಂಧ ರೂ.3,25,16,940/-ಗಳ ಅನುದಾನದ ಅಗತ್ಯವಿದ್ದು, ಈಗಾಗಲೇ ನಿಗದಿಪಡಿಸಲಾದ ರೂ.280.00 ಲಕ್ಷಗಳ ಎದುರಾಗಿ ರೂ.80.00 ಲಕ್ಷಗಳ ಅನುದಾನ ಒದಗಿಸಲಾಗಿದ್ದು, ಉಳಿಕೆ ರೂ.200.00 ಲಕ್ಷಗಳನ್ನು ಲೆಕ್ಕ ಶೀರ್ಷಿಕೆ:2202-01-109-0-10 ಯ ಉಪಶೀರ್ಷಿಕೆ:059 ಅಡಿಯಲ್ಲಿ ಬಿಡುಗಡೆಗೊಳಿಸುವಂತೆ ಹಾಗೂ ಉಳಿಕೆ ಅನುದಾನಕ್ಕಾಗಿ ಕೆ.ಎಸ್.ಕ್ಯೂ.ಎ.ಎ.ಸಿ ವಿಭಾಗದಲ್ಲಿ ಉಳಿಕೆಯಿರುವ ರೂ.9.30 ಲಕ್ಷಗಳನ್ನು ಹಾಗೂ ಮಂಡಲಿಯ ಅನುದಾನ ರೂ.35,86,940/- ಗಳನ್ನು ಭರಿಸಲು ಅನುಮತಿ ನೀಡುವಂತೆ ಕೋರಿರುತ್ತಾರೆ.

2024-25ನೇ ಸಾಲಿನ ಮುಂದುವರಿಕೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅನುಮತಿ ನೀಡಲಾಗಿದ್ದು, ಸದರಿ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯದ ‘ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಗಳು’ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ:2202-01-109-0-107-059 (ಇತರೆ ವೆಚ್ಚಗಳು) ರಡಿ ನಿಗದಿಯಾಗಿರುವ ರೂ800.00 ಲಕ್ಷಗಳಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್ ವಿತರಿಸಲು ರೂ.280.00 ಲಕ್ಷಗಳನ್ನು ಹಂಚಿಕೆ ಮಾಡಲಾಗಿರುತ್ತದೆ.

ಈ ಪ್ರಸ್ತಾವನೆ ಪರಿಶೀಲಿಸಿ,  ಏಪ್ರಿಲ್-2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು 204 ವಲಯ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಕ್ಷೇತ್ರ ಶಿಕ್ಷಣಾಧಿಕಾರಿ ವಲಯದ ಮೂರು ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟು 756 ಫಲಾನುಭವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಉಚಿತ ಲ್ಯಾಪ್‌ಟಾಪ್ ವಿತರಿಸಲು ಅಗತ್ಯವಿರುವ ರೂ. 3,25,16,940/-ಗಳ ಪೈಕಿ, 2024-25ನೇ ಸಾಲಿನ ಆಯವ್ಯಯದ ‘ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಗಳು ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ:2202-01-109-0-107-059 (ಇತರೆ ವೆಚ್ಚಗಳು) ರಡಿ ನಿಗದಿಯಾಗಿರುವ ರೂ.280.00 ಲಕ್ಷಗಳು ಹಾಗೂ ಕೆ.ಎಸ್.ಕ್ಯೂ.ಎ.ಎ.ಸಿ ವಿಭಾಗದಲ್ಲಿ ಉಳಿಕೆಯಿರುವ ರೂ.9.30 ಲಕ್ಷಗಳನ್ನು ಹಾಗೂ ಮಂಡಲಿಯಲ್ಲಿ ಲಭ್ಯವಿರುವ ರೂ.35,86,940/- ಗಳನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರು ನಿಯಮಾನುಸಾರ ಭರಿಸತಕ್ಕದ್ದು ಎಂದು ಆದೇಶ ಮಾಡಲಾಗಿದೆ.

ಷರತ್ತುಗಳು:

1. ಮೇಲ್ಕಂಡಂತೆ ಒದಗಿಸಲಾದ ಅನುದಾನದಲ್ಲಿ ನಿಯಮಾನುಸಾರ ಅರ್ಹ ಪ್ರತಿಭಾವಂತ ಫಲಾನುಭವಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರು ಕ್ರಮವಹಿಸತಕ್ಕದ್ದು.
2. ಜಿಲ್ಲಾಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿ ಪ್ರೋತ್ಸಾಹಕವಾಗಿ ಲ್ಯಾಪ್‌ಟಾಪ್ ಪಡೆದಂತಹ ವಿದ್ಯಾರ್ಥಿಗಳನ್ನು ಮತ್ತೊಮ್ಮೆ ವಲಯ ಮಟ್ಟಕ್ಕೆ ಪರಿಗಣಿಸಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು,
3. ಬಿಡುಗಡೆಯಾದ ಅನುದಾನಕ್ಕೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಇವರು ನಿಯಮಾನುಸಾರ ಲೆಕ್ಕ ಪತ್ರಗಳನ್ನು ಇಡತಕ್ಕದ್ದು.
4. ಎಲ್ಲಾ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಶೀಘ್ರವಾಗಿ ವಿತರಿಸತಕ್ಕದ್ದು ಹಾಗೂ ಜ ವಿತರಣೆ ಪೂರ್ಣಗೊಂಡ ನಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸತಕ್ಕದ್ದು.
5. ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಹೊರಡಿಸಲಾದ ಕಛೇರಿ ಜ್ಞಾಪನವನ್ನು ಹಾಗೂ ಸದರಿ ಸರ್ಕಾರಿ ಆದೇಶವನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಹಾಗೂ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಈ ಕಛೇರಿಯ ವೆಬ್‌ಸೈಟ್‌ಗಳಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.
6. ಖರೀದಿ ಪ್ರಕ್ರಿಯೆಯಲ್ಲಿ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-1999 ರ ನಿಯಮಗಳು ಮತ್ತು ತತ್ಸಂಬಂಧ ಕಾಲಕಾಲಕ್ಕೆ ಹೊರಡಿಸಲಾದ/ಹೊರಡಿಸಲಾಗುವ ಆದೇಶ/ಸುತ್ತೋಲೆಗಳ ಸೂಚನೆಗಳನ್ನು ಹಾಗೂ ಲ್ಯಾಪ್‌ಟಾಪ್ ಖರೀದಿ ಇ-ಟೆಂಡರ್ ಪ್ರಕ್ರಿಯೆಯ ದಸ್ತಾವೇಜಿನಲ್ಲಿ ನಿಗದಿಪಡಿಲಾಗಿರುವ ಪ್ರಚಲಿತ ನಿಯಮಗಳನ್ನು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 01 ಟಿಎಫ್‌ಪಿ 2025, ದಿನಾಂಕ:02.04.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಲಾಗಿರುವ ಅಧಿಕಾರದನ್ವಯ ಹೊರಡಿಸಿದೆ ಎಂದು ತಿಳಿಸಿದೆ.

BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ

ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM1 Min Read

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM2 Mins Read

BIG NEWS : ರಾಜ್ಯದಲ್ಲಿ ಕುರಿಗಾಹಿಗಳಿಗೆ ಬಂದೂಕು ಪರವಾನಗಿ : CM ಸಿದ್ದರಾಮಯ್ಯ ಸೂಚನೆ.!

01/06/2025 6:25 AM2 Mins Read
Recent News

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM

ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಪುಣೆಯ ಕಾನೂನು ವಿದ್ಯಾರ್ಥಿನಿ ಗುರುಗ್ರಾಮದಲ್ಲಿ ಬಂಧನ | Operation Sindoor

01/06/2025 6:33 AM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM

BIG NEWS : ರಾಜ್ಯದಲ್ಲಿ ಕುರಿಗಾಹಿಗಳಿಗೆ ಬಂದೂಕು ಪರವಾನಗಿ : CM ಸಿದ್ದರಾಮಯ್ಯ ಸೂಚನೆ.!

01/06/2025 6:25 AM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

By kannadanewsnow5701/06/2025 6:36 AM KARNATAKA 1 Min Read

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಜೂನ್ 1 ರಿಂದ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ…

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM

BIG NEWS : ರಾಜ್ಯದಲ್ಲಿ ಕುರಿಗಾಹಿಗಳಿಗೆ ಬಂದೂಕು ಪರವಾನಗಿ : CM ಸಿದ್ದರಾಮಯ್ಯ ಸೂಚನೆ.!

01/06/2025 6:25 AM

BIG NEWS : ರಾಜ್ಯದಲ್ಲಿ 21 ವರ್ಷದೊಳಗಿನವರಿಗೆ `ತಂಬಾಕು ಉತ್ಪನ್ನ ಮಾರಾಟ ನಿಷೇಧ’, ಹುಕ್ಕಾ ಬಾರ್ ನಡೆಸಿದ್ರೆ 1 ಲಕ್ಷ ರೂ. ದಂಡ: ಸರ್ಕಾರದಿಂದ ಮಹತ್ವದ ಆದೇಶ

01/06/2025 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.