Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಯಿಟರ್ಸ್ ಸೇರಿ 2,355 ಖಾತೆಗಳನ್ನ ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶ ; ‘X’ ಬಹಿರಂಗ

08/07/2025 5:53 PM

‘ನಿಷ್ಕ್ರಿಯ ಜನ್ ಧನ್ ಖಾತೆಗಳನ್ನ ಮುಚ್ಚಲು ಬ್ಯಾಂಕ್’ಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ’ : ಕೇಂದ್ರ ಸರ್ಕಾರ ಸ್ಪಷ್ಟನೆ

08/07/2025 5:34 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IAS Officer Transfer

08/07/2025 5:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ.!
KARNATAKA

GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ.!

By kannadanewsnow5716/01/2025 6:33 AM

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ.

ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿವಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ:24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ.
ತಂತ್ರಾಂಶವು ಕೆಳಕಂಡ ಆರು ಹಂತಗಳನ್ನು ಒಳಗೊಂಡಿದೆ ಎಂದಿದ್ದಾರೆ.

1. ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವುದು.
2. ಆಡಳಿತ ಮಂಡಳಿಯಿಂದ ಖಾಲಿ ಹುದ್ದೆ ಭರ್ತಿಗೆ ಅನುಮತಿ ಕೋರಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಪ್ರಸ್ತಾವನ ಸಲ್ಲಿಕೆ.
3. ಆಯಾ ಆಯುಕ್ತಾಲಯಗಳಲ್ಲಿ ಸಮಿತಿಗಳನ್ನು ರಚಿಸಿ ಪುಸ್ತಾವನೆಗಳನ್ನು ಪರಿಶೀಲಿಸಿ ಶಿಫಾರಸು ಮಾಡುವುದು. ಶಿಫಾರಸ್ಸು ಆಧರಿಸಿ ಖಾಲಿ ಹುದ್ದೆ ಭರ್ತಿಗೆ ಅನುಮತಿ ನೀಡುವುದು.
4. ಆಡಳಿತ ಮಂಡಳಿಗಳು ಅನುಮತಿಸಿದ ಹುದ್ದೆಗಳಿಗೆ ನಿಯಮಾನುಸಾರ ನೇಮಕಾತಿ ಪ್ರಕ್ರಿಯೆ ಕೈಗೊಂಡು ಸಂಬಂಧಿಸಿದ ಉಪನಿರ್ದೇಶಕರಿಗೆ ನೇಮಕಾತಿ ಅನುಮೋದನೆಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನೆ ಸಲ್ಲಿಕೆ

5. ಉಪನಿರ್ದೇಶಕರಿಂದ ಪರಿಶೀಲಿಸಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನಗಳ ಸಲ್ಲಿಕೆ
6. ಸಂಬಂದಿಸಿದ ಆಯುಕ್ತಾಲಯಗಳಿಂದ ಸರ್ಕಾರಕ್ಕೆ ಆನ್‌ಲೈನ್‌ನಲ್ಲಿ ಅನುಮೋದನೆಗೆ ಸಲ್ಲಿಕೆ

ಪ್ರಸ್ತುತ ಮೇಲೆ ತಿಳಿಸಿರುವ ಆರು ಹಂತಗಳಲ್ಲಿ ಮೊದಲ ಎರಡು ಹಂತಗಳ ತಂತ್ರಾಂಶ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು ಉಳಿದ ಹಂತಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ಸರ್ಕಾರದ ಸುತ್ತೋಲೆ ಸಂಖ್ಯೆ ಸಿ.ಅ.ಸು.ಇ 388 ಸನನಿ.2024 ದಿನಾಂಕ:25-11-2024 ರಂದು ಎಲ್ಲಾ ನೇಮಕಾತಿ ಪ್ರಕ್ರಿಯೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಿರಲು ಆದೇಶಿಸಲಾಗಿದೆ. ಸದರಿ ಆದೇಶದಂತ ಮೊದಲ ಹಂತದ ತಂತ್ರಾಂಶ (BEO Login) ನ್ನು ಚಾಲ್ತಿಗೊಳಿಸುವುದನ್ನು ತಡೆಹಿಡಿದು, ಈ ಕುರಿತು ಸರ್ಕಾರಕ್ಕೆ, ಮಾರ್ಗದರ್ಶನ ಕೋರಲಾಗಿದೆ ಎಂದು ಹೇಳಿದ್ದಾರೆ.

ಆದರೇ ವಿವಿಧ ಶಾಲಾ ಆಡಳಿತ ಮಂಡಳಿಗಳಿಂದ ಹಾಗೂ ಜನ ಪ್ರತಿನಿಧಿಗಳಿಂದ ಸರ್ಕಾರವು ಆದೇಶ ಸಂಖ್ಯೆ: ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024ರಲ್ಲಿ ಆದೇಶ ಮಾಡಿದ್ದರೂ ಸದರಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ ಎಂದು ತಿಳಿಸುತ್ತಾ ಪ್ರಕ್ರಿಯೆ ಪ್ರಾರಂಭಿಸಲು ಕೋರಿ ಮನವಿಗಳು ಸ್ವೀಕೃತವಾಗುತ್ತಲಿವೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಂತ್ರಾಂಶದ ಮೊದಲ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವ ಪ್ರಕ್ರಿಯೆ ಒಳಗೊಂಡಿದ್ದು ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗಧಿಪಡಿಸುವ ಪ್ರಕ್ರಿಯೆ ಇರುವುದಿಲ್ಲ. ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿ ಉಲ್ಲೇಖ-3ರಲ್ಲಿ ಮಾನ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆರವರನ್ನು ಕೋರಲಾಗಿದೆ. ಈ ಹಂತದಲ್ಲಿ ಯಾವುದೇ ರೋಸ್ಮರ್‌ ಬಿಂದು ನಿಗಧಿಪಡಿಸುವ ಪ್ರಕ್ರಿಯೆ ಇರುವುದಿಲ್ಲ. ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿದ್ದಾರೆ ಎಂದು ಹೇಳಿದ್ದಾರೆ.

GOOD NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳ ಭರ್ತಿ.! Good news for teacher aspirants: Teaching posts in aided high schools in the state
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IAS Officer Transfer

08/07/2025 5:25 PM3 Mins Read

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM2 Mins Read

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM1 Min Read
Recent News

BREAKING : ರಾಯಿಟರ್ಸ್ ಸೇರಿ 2,355 ಖಾತೆಗಳನ್ನ ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶ ; ‘X’ ಬಹಿರಂಗ

08/07/2025 5:53 PM

‘ನಿಷ್ಕ್ರಿಯ ಜನ್ ಧನ್ ಖಾತೆಗಳನ್ನ ಮುಚ್ಚಲು ಬ್ಯಾಂಕ್’ಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ’ : ಕೇಂದ್ರ ಸರ್ಕಾರ ಸ್ಪಷ್ಟನೆ

08/07/2025 5:34 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IAS Officer Transfer

08/07/2025 5:25 PM

‘ಡ್ರೀಮ್ ಲೈನರ್ ಅತ್ಯಂತ ಸುರಕ್ಷಿತ ವಿಮಾನ’ : ‘ಸಂಸದೀಯ ಸಮಿತಿ’ಗೆ ‘ಏರ್ ಇಂಡಿಯಾ’ ಉತ್ತರ

08/07/2025 4:56 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IAS Officer Transfer

By kannadanewsnow0908/07/2025 5:25 PM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು…

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಶ್ವರ್ ಖಂಡ್ರೆ ಸೂಚನೆ

08/07/2025 4:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.