ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿ ಆಗದೇ ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸಕಾಲದಲ್ಲಿ ವೇತನ ಪಾವತಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ವನ್ಯಜೀವಿ-ಮಾನವ ಸಂಘರ್ಷ ಹಾಗೂ ರೈಲ್ವೆ ಬ್ಯಾರಿಕೇಡ್ ಯೋಜನೆಗಳನ್ನು ಅಂತಿಮಗೊಳಿಸುವ ಸಂಬಂಧ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಿಕ್ಕಮಗಳೂರಿನ ಮುತ್ತೋಡಿಗಿಂತಲೂ ತಣಿಗೆಬೈಲು ಸೂಕ್ತ ಪ್ರದೇಶ ಎಂದು ತಜ್ಞರು ವರದಿ ನೀಡಿದ್ದು, ಈ ಕುರಿತಂತೆ ಸ್ಥಳೀಯರ ಸಭೆ ಕರೆದು ಚರ್ಚಿಸಲಾಗುವುದು ಎಂದರು.
ಹೊರಗುತ್ತಿಗೆ ಸಿಬ್ಬಂದಿ ಮಾಹಿತಿ ಕೇಳಿದ ಸಚಿವರು:
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿನ ನಂತರ ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿಲ್ಲ. ನೌಕರರ ಭವಿಷ್ಯ ನಿಧಿ ಹಣವನ್ನು ಸಂದಾಯ ಮಾಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ರಾಜ್ಯದಲ್ಲಿ ಎಷ್ಟು ಹೊರಗುತ್ತಿಗೆ ಸಿಬ್ಬಂದಿ ಇದ್ದಾರೆ. ಅವರಿಗೆ ವೇತನ, ಭತ್ಯೆ ಎಷ್ಟು ತಿಂಗಳಿನಿಂದ ಪಾವತಿಯಾಗಿಲ್ಲ. ವಿಳಂಬಕ್ಕೆ ಕಾರಣ ಏನು, ಗುತ್ತಿಗೆದಾರ ಸಂಸ್ಥೆ ಇಪಿಎಫ್ ಪಾವತಿಸಿದೆಯೇ ಇತ್ಯಾದಿ ಎಲ್ಲ ಅಂಶಗಳ ವರದಿಯನ್ನು ವಿಳಂಬ ಮಾಡದೆ ಸಲ್ಲಿಸುವಂತೆ ಸೂಚಿಸಿದರು. ಅಲ್ಲದೇ ಸಕಾಲದಲ್ಲಿ ಹೊರಗುತ್ತಿಗೆ ನೌಕರರ ವೇತನ ಪಾವತಿಗೂ ಖಡಕ್ ಸೂಚನೆ ನೀಡಿದ್ದಾರೆ.
ವನ್ಯಜೀವಿ ಸಂರಕ್ಷಣೆಯೂ ಆಗಬೇಕು. ಅಮೂಲ್ಯವಾದ ಜೀವ ಹಾನಿ ಮತ್ತು ಬೆಳೆ ಹಾನಿ ಆಗಬಾರದು. ಈ ಬಗ್ಗೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಕ್ತಿ ಮೀರಿ ಶ್ರಮಿಸಬೇಕು. ಅರಣ್ಯ ನಾಶ ಆಗದಂತೆ ತಡೆಯಬೇಕು ಎಂದು ತಿಳಿಸಿದರು.
ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಅರಣ್ಯ ಸಚಿವ ಈಶ್ವರ ಖಂಡ್ರೆ
ಶಿವಮೊಗ್ಗ: ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ‘ನಾಗೋಡಿ ವಿಶ್ವನಾಥ್’ ನೇಮಕ