Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ
KARNATAKA

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

By kannadanewsnow0906/06/2025 2:32 PM

ಮೈಸೂರು: ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕೈಗಾರಿಕೆ ಇಲಾಖೆ ವ್ಯಾಪ್ತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಸಾಂಸ್ಥಿಕ ಜವಾಬ್ದಾರಿ ನೆರವಿನಿಂದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ತಡೆಯುವಲ್ಲಿ, ಕಾಡ್ಗಿಚ್ಚು ನಂದಿಸುವಲ್ಲಿ ಹಾಗೂ ವನ್ಯಜೀವಿಗಳ ಕಳ್ಳಬೇಟೆ ತಡೆಯುವಲ್ಲಿ ಮುಂಚೂಣಿ ಸಿಬ್ಬಂದಿ ಮಾಡುತ್ತಿರುವ ಕಾರ್ಯ ಶ್ಲಾಘನಾರ್ಹವಾದದ್ದು ಎಂದರು.

ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ ತಪ್ಪಾಗಲಾರದು ಎಂದು ಹೇಳಿದ್ದಾರೆ.

ಹೀಗಾಗಿಯೇ ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದರು.

ಅರಣ್ಯ ಸಿಬ್ಬಂದಿಗೂ ಕ್ಯಾಂಟೀನ್ :

ಅರಣ್ಯ ಸಿಬ್ಬಂದಿಗೂ ಸಹ ಮಿಟಿಟರಿ ಮತ್ತು ಪೊಲೀಸ್ ಸಿಬ್ಬಂದಿಗೆ ಇರುವ ರೀತಿಯಲ್ಲೇ ಕ್ಯಾಂಟೀನ್ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ತಾವು ಈಗಾಗಲೇ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯವನ್ನು ಅರಣ್ಯ ಸಿಬ್ಬಂದಿಗೂ ವಿಸ್ತರಿಸಲು ಪ್ರಯತ್ನಿಸಲಾಗುವುದು ಎಂದರು.

ಕರ್ನಾಟಕದಲ್ಲಿ ಶ್ರೀಮಂತವಾದ ವನಪ್ರದೇಶ ಇದೆ. ಪಶ್ಚಿಮ ಘಟ್ಟಗಳು ಜೀವವೈವಿಧ್ಯತೆಯ ನೆಚ್ಚಿನ ತಾಣವಾಗಿದೆ. ಇದರ ಸಂರಕ್ಷಣೆ ಮತ್ತು ಸಂವರ್ಧನೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದನ್ನು ಕಾಪಾಡುವ ಕಾರ್ಯವನ್ನು ಮುಂಚೂಣಿ ಸಿಬ್ಬಂದಿ ಮಾಡುತ್ತಿದ್ದಾರೆ ಎಂದರು.

ಇಂದು ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ಅರಣ್ಯ ಪ್ರದೇಶ ಕ್ಷೀಣಿಸುತ್ತಿದೆ. ಅರಣ್ಯ ವೃದ್ಧಿಸಲು ಸರ್ಕಾರ ಶ್ರಮಿಸುತ್ತಿದ್ದು, ಕಳೆದ 2 ವರ್ಷದಲ್ಲಿ 15 ಸಾವಿರ ಎಕರೆ ಜಮೀನನ್ನು ಹೊಸದಾಗಿ ಅರಣ್ಯ ಪ್ರದೇಶ ಎಂದು ಅಧಿಸೂಚನೆ ಮಾಡಲಾಗಿದೆ. ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ. ಬೆಲೆ ಬಾಳುವ 128 ಎಕರೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂ. ಬೆಲೆ ಬಾಳುವ 6 ಸಾವಿರ ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ (ಕೆ.ಎಸ್.ಡಿ.ಎಲ್) ರಾಜ್ಯದಾದ್ಯಂತ 10 ಸಾವಿರ ಮುಂಚೂಣಿ ಅರಣ್ಯ ಸಿಬ್ಬಂದಿಗೆ ಬ್ಯಾಗ್, ಜರ್ಕೀನ್, ಶೂ, ನೀರಿನ ಬಾಟಲಿ ಇರುವ ಸುರಕ್ಷತಾ ಕಿಟ್ ನೀಡುತ್ತಿರುವುದನ್ನು ಪ್ರಶಂಶಿಸಿದ ಸಚಿವರು, ಇದಕ್ಕೆ ಕಾರಣೀಭೂತರಾದ ಮೂಲಸೌಕರ್ಯಾಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹಾಗೂ ಕೆ.ಎಸ್. ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರಿಗೆ ಧನ್ಯವಾದ ಅರ್ಪಿಸಿದರು.

ಶ್ರೀಗಂಧದ ನೀತಿ ಸರಳೀಕರಣ:

ಕೆ.ಎಸ್.ಡಿ.ಎಲ್. ಶ್ರೀಗಂಧದ ಎಣ್ಣೆಯ ಅಗತ್ಯ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದ ನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಿಂದ ಒಂದು ತಿಂಗಳಲ್ಲಿ ಬೀಳಬೇಕಾದ ಮಳೆ ಒಂದೇ ವಾರದಲ್ಲಿ ಬೀಳುತ್ತಿದೆ, ಒಂದು ವಾರದ ಮಳೆ ಒಂದು ದಿನ ಬೀಳುತ್ತಿದ್ದು, ಅನಾಹುತ ಸೃಷ್ಟಿಸುತ್ತಿದೆ. ಹೀಗಾಗಿ ನಾವು ಹಸಿರು ಪ್ರದೇಶ ಹೆಚ್ಚಳಕ್ಕೆ ಒತ್ತುನೀಡಬೇಕು. ಮರಬೆಳೆಸಬೇಕು ಎಂದರು.

Share. Facebook Twitter LinkedIn WhatsApp Email

Related Posts

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM1 Min Read

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM1 Min Read

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM3 Mins Read
Recent News

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

06/06/2025 2:40 PM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM
State News
KARNATAKA

BREAKING: 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

By kannadanewsnow0906/06/2025 2:40 PM KARNATAKA 1 Min Read

ಬ್ರಹ್ಮಾವರ: ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು ವ್ಯಕ್ತಿಯೊಬ್ಬರಿಂದ 20000 ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ…

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.