Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ FIR ದಾಖಲು | Rahul Gandhi

15/05/2025 10:59 PM

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

15/05/2025 10:01 PM

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೈಸೂರು ಜನತೆ’ಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ನಿಲ್ದಾಣ’ ನಿರ್ಮಾಣ ಕಾರ್ಯ ಪ್ರಾರಂಭ
KARNATAKA

‘ಮೈಸೂರು ಜನತೆ’ಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ನಿಲ್ದಾಣ’ ನಿರ್ಮಾಣ ಕಾರ್ಯ ಪ್ರಾರಂಭ

By kannadanewsnow0906/11/2024 7:50 PM

ಬೆಂಗಳೂರು: ಸಾಂಸ್ಕ್ರತಿಕ ನಗರಿ ಮೈಸೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ, ಶೀಘ್ರವೇ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಅಂತ ಸಾಗಿರೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮೈಸೂರಿನಲ್ಲಿ ಸುಸಜ್ಜಿತ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ. ಸುಮಾರು 14 ಎಕರೆ ಜಾಗದಲ್ಲಿ ಅಂದಾಜು ರೂ.120 ಕೋಟಿ ವೆಚ್ಚದಲ್ಲಿ ಸಮಗ್ರ ಸಾರಿಗೆ ಸೌಲಭ್ಯ ಕಲ್ಪಿಸಲು ಪಾರಂಪರಿಕ ಹಾಗೂ ಆಧುನಿಕ ವಿನ್ಯಾಸ ಒಳಗೊಂಡಂತೆ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎಂದಿದ್ದಾರೆ.

ಮೈಸೂರು ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪದಲ್ಲಿರುವ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹೊರತುಪಡಿಸಿದರೆ ಅತೀ ಹೆಚ್ಚಾಗಿ ಜನಸಂದಣಿ ಕಾಣಸಿಗುವ ಬಸ್ ನಿಲ್ದಾಣ ಮೈಸೂರು ಬಸ್ ನಿಲ್ದಾಣ . ಅದರಲ್ಲೂ ವಿಶೇಷವಾಗಿ ವಿಶ್ಚವಿಖ್ಯಾತ ದಸರಾ ಸಮಯದಲ್ಲಿ ಉಂಟಾಗುವ ಜನಸಂದಣಿಗೆ ಅನುಗುಣವಾಗಿ ಬಸ್ಸುಗಳ ಕಾರ್ಯಾಚರಣೆ ನಡೆಸಿ, ಸಾರ್ವಜನಿಕರಿಗೆ ವ್ಯವಸ್ಥಿತ ಸಾರಿಗೆ ಸೌಲಭ್ಯ ಕಲ್ಪಿಸುವ ಕಾರ್ಯ ಉದ್ದೇಶಿತ ಹೊಸ ಬಸ್ ನಿಲ್ದಾಣದಿಂದ ಈಡೇರಲಿದೆ.

ಪ್ರಸ್ತುತ ಸರಾಸರಿ 2100 ಟ್ರಿಪ್ ಗಳನ್ನು ಈ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಇನ್ನು 10 ವರ್ಷಗಳ ಅಂತರದಲ್ಲಿ 2500 ರಿಂದ 3000 ಟ್ರಿಪ್ ಗಳಿಗೆ ಏರಿಕೆಯಾಗುವುದೆಂದು ಅಂದಾಜಿಸಲಾಗಿದೆ.ಹಾಲಿಯಿರುವ 30 ಬಸ್ ಬೇಗಳು ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ಇದು ಸಾಲದಾಗಿದೆ ,ಹೊಸ ಯೋಜಿತ ಬಸ್ ನಿಲ್ದಾಣದಲ್ಲಿ 75 ಬಸ್ ಬೇ ಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಪ್ರತ್ಯೇಕ ಸುಸಜ್ಜಿತ ಶೌಚಾಲಯಗಳು, ಬೇಬಿ ಕೇರ್ ಸೆಂಟರ್, ಚಾಲನಾ ಸಿಬ್ಬಂದಿಗಳಿಗೆ ವಿಶ್ರಾಂತಿ ಗೃಹಗಳ ವ್ಯವಸ್ಥೆ ಇರಲಿದೆ.

ಬನ್ನಿಮಂಟಪದಲ್ಲಿರುವ ಕೆಎಸ್‌ ಆರ್‌ಟಿಸಿ ಡಿಪೋಗೆ ಸೇರಿದ 61 ಎಕರೆ ಜಾಗದ ಪೈಕಿ 14 ಎಕರೆ ವಿಸ್ತೀರ್ಣದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸಿ ಸಮಗ್ರ ಸಾರಿಗೆ ವ್ಯವಸ್ಥೆ ಕಲ್ಪಿಸಲು ವಿಸ್ತ್ರತ ಯೋಜನಾ ವರದಿ (ಡಿಪಿಆ‌ರ್) ಸಿದ್ಧಪಡಿಸಿ, ಯೋಜನೆಯ ಸಾಧಕ-ಬಾಧಕಗಳನ್ನು ಚರ್ಚಿಸಿ, ಬನ್ನಿಮಂಟಪದಲ್ಲಿ ನೂತನ ಬಸ್‌ ನಿಲ್ದಾಣ ನಿರ್ಮಿಸುವುದು ಸೂಕ್ತ ಎಂಬ ತೀರ್ಮಾನಕ್ಕೆ ಬಂದು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ನಡೆಸಿದ್ದು, ಯೋಜನಾ ನಕ್ಷೆ, ಕಾಮಾಗಾರಿ ವಿವರಗಳನ್ನು ಪರಾಮರ್ಶಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರ್ವಜನಿಕ ಪ್ರಯಾಣಿಕರಿಗೆ ಸುವ್ಯವಸ್ಥಿತ ಸಾರಿಗೆ ಸೌಲಭ್ಯ ನೀಡಲು ಈ ಉದ್ದೇಶಿತ ಬಸ್ ನಿಲ್ದಾಣದ ಅಗತ್ಯವಿರುವುದಾಗಿ DULT ಸಂಸ್ಥೆಯವರ ಹಣಕಾಸು ನೆರವಿನಿಂದ ಅನುದಾನ ನೀಡಲು ಸೂಚಿಸಿದ್ದು, 2025 ಸಾಲಿನಲ್ಲಿ ನೂತನ ಬಸ್‌ ನಿಲ್ದಾಣದ ಕಾಮಗಾರಿ ಆರಂಭವಾಗಲಿದೆ.

ಬನ್ನಿಮಂಟಪದ ಉದ್ದೇಶಿತ ನೂತನ ಬಸ್ ನಿಲ್ದಾಣದಲ್ಲಿ ಬೆಂಗಳೂರು, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ ದೂರದ ನಗರಗಳು ಹಾಗೂ ಅಂತಾರಾಜ್ಯ ಸಾರಿಗೆ ಬಸ್‌ಗಳು ಬಂದು ಹೋಗಲು ವ್ಯವಸ್ಥೆ ಕಲ್ಪಿಸುವುದು. ಸದ್ಯ ಕಾರ್ಯಾಚರಣೆಯಾಗುತ್ತಿರುವ ಗ್ರಾಮಾಂತರ ಬಸ್ ನಿಲ್ದಾಣವನ್ನು ಸಂಪೂರ್ಣ ಸ್ಥಳಾಂತರ ಮಾಡದೆ ಹಾಗೆಯೇ ಉಳಿಸಿಕೊಂಡು, 2024ರ ಜನವರಿ 1ರಂದು ಮೈಸೂರು ವಿಭಾಗದಿಂದ ಪ್ರತ್ಯೇಕವಾಗಿ ರಚಿಸಿರುವ ಮೈಸೂರು ಗ್ರಾಮಾಂತರ ವಿಭಾಗಕ್ಕೆ ಬಳಸಿಕೊಳ್ಳುವ ಮೂಲಕ ಮಂಡ್ಯ, ಚಾಮರಾಜ ನಗರ, ಕೊಡಗು, ಹಾಸನ ಜಿಲ್ಲೆಗಳಿಗೆ ಸಾರಿಗೆ ಬಸ್‌ಗಳ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ. ನೂತನ ಬಸ್ ನಿಲ್ದಾಣ ಮತ್ತು ಗ್ರಾಮಾಂತರ ಬಸ್‌ ನಿಲ್ದಾಣದ ನಡುವೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.

ಪ್ರಸ್ತುತ ಇರುವ ಗ್ರಾಮಾಂತರ ಬಸ್ ನಿಲ್ದಾಣದ ಮೇಲೆ ಹೆಚ್ಚಿನ ಸಂಚಾರ ಒತ್ತಡ

ಮೈಸೂರು ಗ್ರಾಮಾಂತರ ಸಾರಿಗೆ ವಿಭಾಗವು 6 ಬಸ್‌ ಡಿಪೋ, ಮೈಸೂರು ನಗರ ವಿಭಾಗವು 4 ಡಿಪೋ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 10 ಬಸ್‌ ಡಿಪೋಗಳು ಹಾಗೂ ಎರಡೂ ವಿಭಾಗಗಳ ವ್ಯಾಪ್ತಿಯಲ್ಲಿ 31 ಬಸ್ ನಿಲ್ದಾಣಗಳನ್ನು ಹೊಂದಿದ್ದು, 1,400 ಬಸ್‌ಗಳು ಇಲ್ಲಿಂದ 1,213 ಅನುಸೂಚಿಗಳಲ್ಲಿ ಕಾರ್ಯಾಚರಣೆ ಮಾಡಿಸಲಾಗುತ್ತದೆ.
ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಗ್ರಾಮಾಂತರ ಬಸ್ ನಿಲ್ದಾಣವು ಚಿಕ್ಕದಾಗಿರುವುದರಿಂದ ಬನ್ನಿಮಂಟಪದ ಕೆಎಸ್‌ಆರ್‌ಟಿಸಿ ಡಿಪೋದ 14 ಎಕರೆ ಜಾಗದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಸಂಬಂಧ ಪರಿಕಲ್ಪಿತ ನಕ್ಷೆಗೆ ಅನುಮೋದನೆ ಪಡೆದಿದ್ದು ವಿವರವಾದ ಅಂದಾಜು ಪಟ್ಟಿ ತಯಾರಿಸಲಾಗುತ್ತಿದೆ. ಉದ್ದೇಶಿತ ಪ್ರಸ್ತಾವನೆಗೆ ಸರ್ಕಾರದಿಂದ ಅನುಮೋದನೆ ಪಡೆಯಬೇಕಾಗಿದೆ.

ಏನೆಲ್ಲ ನಿರ್ಮಾಣ?

– ತಳಮಹಡಿಯಲ್ಲಿ ದ್ವಿಚಕ್ರವಾಹನ, ಕಾರುಗಳ ನಿಲುಗಡೆ.

– ನೆಲ ಮಹಡಿಯಲ್ಲಿ ಬಸ್ ನಿಲ್ದಾಣ, ಕಚೇರಿ ಕೊಠಡಿಗಳು ವಿದ್ಯುತ್‌ ಚಾಲಿತ ಬಸ್‌ಗಳ ರೀಚಾರ್ಜ್ ಪಾಯಿಂಟ್‌ಗಳು ಪ್ರಯಾಣಿಕರ ನಿರೀಕ್ಷಣಾ ಕೊಠಡಿಗಳು, ಶೌಚಾಲಯ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ.

– ಮೊದಲ ಅಂತಸ್ತಿನಲ್ಲಿ ವಿಭಾಗೀಯ ಕಚೇರಿಗಳು, ಸಿಬ್ಬಂದಿ ವಿಶ್ರಾಂತಿ ಕೊಠಡಿ ಹಾಗೂ ವಾಣಿಜ್ಯ ವಿಸ್ತೀರ್ಣವನ್ನು ಯೋಜಿಸಲಾಗಿದೆ.

– ಎರಡನೇ ಅಂತಸ್ತಿನಲ್ಲಿ ಮಲ್ಟಿ ಪ್ಲೆಕ್ಸ್ ಚಿತ್ರ ಮಂದಿರಗಳು ಹಾಗೂ ಫುಡ್ ಕೋರ್ಟ್ ಮತ್ತು ವಾಣಿಜ್ಯ ವಿಸ್ತೀರ್ಣವನ್ನು ಯೋಜಿಸಲಾಗಿದೆ.

ರಾಜ್ಯದಲ್ಲಿ ‘ಶಾಲಾ ಮುಖ್ಯಸ್ಥ’ನಿಂದಲೇ ಕೀಚಕ ಕೃತ್ಯ: ‘ಪೋಕ್ಸೋ ಕೇಸ್’ ದಾಖಲು

ರೈತರ ಗಮನಕ್ಕೆ: ‘ಬೆಳೆ ಹಾನಿ’ ರೈತರ ಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

15/05/2025 10:01 PM1 Min Read

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM1 Min Read

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM2 Mins Read
Recent News

BREAKING: ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜನೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ FIR ದಾಖಲು | Rahul Gandhi

15/05/2025 10:59 PM

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

15/05/2025 10:01 PM

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM
State News
KARNATAKA

BREAKING: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಟೋ ಶೇರ್: ಸಾಗರದ ಕಾರ್ಗಲ್ ಠಾಣೆಯಲ್ಲಿ FIR ದಾಖಲು

By kannadanewsnow0915/05/2025 10:01 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಚಿತ್ರದ…

ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಒಂದೇ ದಿನದಲ್ಲಿ ಅರೆಸ್ಟ್

15/05/2025 9:00 PM

ಸಾಗರದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ ಆರೋಪಿ ಅರೆಸ್ಟ್, ಜೈಲುಪಾಲು

15/05/2025 8:48 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.