Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ವಿಗ್ನತೆಯನ್ನು ಕಡಿಮೆ ಮಾಡಿ, ಇಲ್ಲದಿದ್ದರೇ ಭಾರಿ ಬೆಲೆ ತೆರಬೇಕಾಗುತ್ತೆ: ಪಾಕ್ ಗೆ ಭಾರತದ ಎಚ್ಚರಿಕೆ | Indo-Pak war

09/05/2025 5:34 PM

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM

ಆಹಾರ ಧಾನ್ಯಗಳ ಕೃತಕ ಅಭಾವ ಸೃಷ್ಠಿಸಿದ್ರೇ ಕಠಿಣ ಕ್ರಮ: ಸಾಕಷ್ಟು ದಾಸ್ತಾನಿದೆ ಎಂದು ಕೇಂದ್ರದ ಸ್ಪಷ್ಟನೆ

09/05/2025 5:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: ‘MSIL ಟೂರ್ ಪ್ಯಾಕೇಜ್’ ಆರಂಭ, 20,000ದಲ್ಲಿ 18 ದಿನ ಉತ್ತರ ಭಾರತ ಪ್ರವಾಸ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘MSIL ಟೂರ್ ಪ್ಯಾಕೇಜ್’ ಆರಂಭ, 20,000ದಲ್ಲಿ 18 ದಿನ ಉತ್ತರ ಭಾರತ ಪ್ರವಾಸ

By kannadanewsnow0908/01/2025 3:16 PM

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್‌ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್‌ ಐಎಲ್‌ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್‌ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ‌ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್‌ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ,ʼ ಎಂದಿದ್ದಾರೆ.

ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್‌ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್‌ ಟೂರ್)‌, ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್‌ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಎಂಎಸ್‌ ಐಎಲ್‌ ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು ಎಂದು ಅವರು ವಿವರಿಸಿದ್ದಾರೆ.

ಸರಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ.50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ.50ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ. ಈ ಎಲ್ಲ ಪ್ಯಾಕೇಜುಗಳಲ್ಲೂ ಎಂಎಸ್‌ ಐಎಲ್‌ ವತಿಯಿಂದ ಟೂರ್‌ ಮ್ಯಾನೇಜರ್‌ ಅಥವಾ ಸಹಾಯಕರೊಬ್ಬರು ಜತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ ಎಂದು ಅವರು ನುಡಿದಿದ್ದಾರೆ.

ಪ್ರವಾಸಿಗರಿಗೆ ಆದಷ್ಟು ಕಡಿಮೆ ವೆಚ್ಚದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಸಾಧ್ಯವಾಗಬೇಕು ಎನ್ನುವ ಆಶಯದೊಂದಿಗೆ ಎಂಎಸ್‌ ಐಎಲ್‌ ಮೂಲಕ ಈ ಹೆಜ್ಜೆ ಇಡಲಾಗುತ್ತಿದೆ. ಖಾಸಗಿ ಸಂಸ್ಥೆಗಳ ದರಕ್ಕೆ ಹೋಲಿಸಿದರೆ ನಾವು ನಿಗದಿ ಪಡಿಸಿರುವ ದರ ತುಂಬಾ ಕಡಿಮೆ ಇದೆ. ಹಾಗೆಯೇ ಪ್ರತಿಯೊಂದು ಸೇವೆಯನ್ನೂ ಗುಣಮಟ್ಟದೊಂದಿಗೆ ಒದಗಿಸಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಎಂಎಸ್ಐಎಲ್‌ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಎಂಎಸ್ಐಎಲ್ ನಿರ್ದೇಶಕ ಚಂದ್ರಪ್ಪ, ಪ್ರವಾಸ ವಿಭಾಗದ ಮುಖ್ಯಸ್ಥ ರವಿಕುಮಾರ್ ಮುಂತಾದವರು ಭಾಗವಹಿಸಿದ್ದರು.‌

ಎಲ್ಲೆಲ್ಲಿಗೆ ಪ್ರವಾಸ ಪ್ಯಾಕೇಜು?

ಎಂಎಸ್‌ ಐಎಲ್‌ ಸಂಸ್ಥೆಯ ಟೂರ್ಸ್‌ ಅಂಡ್‌ ಟ್ರಾವೆಲ್ಸ್‌ ವಿಭಾಗವು ಈ ಟೂರ್‌ ಪ್ಯಾಕೇಜುಗಳನ್ನು ನಿರ್ವಹಿಸಲಿದೆ. ಇದರಡಿಯಲ್ಲಿ ಕಾಶಿ, ಅಯೋಧ್ಯೆ, ಪುರಿ, ಆದಿ ಕೈಲಾಸ ಮುಂತಾದ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಿಗೆ ಪ್ರವಾಸಿಗರನ್ನು ಅದು ಕರೆದೊಯ್ಯಲಿದೆ. ಜೊತೆಗೆ ದುಬೈ, ಸಿಂಗಪುರ್‌, ವಿಯಟ್ನಾಂ, ಶ್ರೀಲಂಕಾ, ನೇಪಾಳ, ಥಾಯ್ಲೆಂಡ್‌ ಮತ್ತು ಯೂರೋಪಿನ ಹಲವು ದೇಶಗಳಿಗೂ ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜುಗಳನ್ನು ರೂಪಿಸಿದೆ. ಈ ಪ್ರವಾಸಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದು.

24/7 ಸಹಾಯವಾಣಿ ಸೌಲಭ್ಯ 

ಪ್ರವಾಸಿಗರ ಅನುಕೂಲಕ್ಕೆ ಎಂಎಸ್‌ ಐಎಲ್‌ 24/7 ಸಹಾಯವಾಣಿ ಮತ್ತು ವಾಟ್ಸ್ಯಾಪ್‌ ಸೌಲಭ್ಯವನ್ನೂ (080-45888882, 9353645921) ಹೊಂದಿದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡವೇ ಇರಲಿದೆ. ಒಂದು ನಂಬರಿನಲ್ಲಿ ಯಾರಾದರೂ ಮಾತನಾಡುತ್ತಿದ್ದರೆ, ಅದು ತಾನಾಗಿಯೇ ಮತ್ತೊಂದು ಸಂಖ್ಯೆಗೆ ಸಂಪರ್ಕ ಕಲ್ಪಿಸುವ ಕ್ಲೌಡ್‌ ಬೇಸ್ಡ್‌ ಟೆಲಿಕಾಂ ಸಿಸ್ಟಮ್‌ ಅನ್ನು ಅಳವಡಿಸಿಕೊಳ್ಳಲಾಗಿದೆ

ಎಂಎಸ್ಐಎಲ್ ಚಿಟ್ ಫಂಡ್ ಬಲವರ್ಧನೆ

ಈಗಿನ ಸರಕಾರವು ಎಂಎಸ್ಐಎಲ್, ಮೈಸೂರು ಪೇಂಟ್ಸ್ & ವಾರ್ನಿಶ್, ಎನ್.ಜಿ.ಇ.ಎಫ್ ಮುಂತಾದವುಗಳನ್ನು ಲಾಭದಾಯಕವನ್ನಾಗಿ ಮಾಡುತ್ತಿದೆ. ಎಂಎಸ್ಐಎಲ್ ಸದ್ಯಕ್ಕೆ ವಾರ್ಷಿಕ 250 ಕೋಟಿ ರೂ.ಗಳ ಚಿಟ್ ಫಂಡ್ ನಡೆಸುತ್ತಿದೆ. ಇದನ್ನು ಮುಂದಿನ 5 ವರ್ಷಗಳಲ್ಲಿ ವರ್ಷಕ್ಕೆ 5,000 ಕೋಟಿ ರೂ. ಮಟ್ಟಕ್ಕೆ ಕೊಂಡೊಯ್ಯುವ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ. ಹಾಗೆಯೇ, ಸಂಸ್ಥೆಯ 200 ಮದ್ಯದ ಅಂಗಡಿಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯಡಿ 63 ಮಳಿಗೆಗಳ ಕೆಲಸ ಮುಗಿದಿದ್ದು, ಇಲ್ಲೆಲ್ಲ ವಹಿವಾಟು ಮೂರು ಪಟ್ಟು ಹೆಚ್ಚಾಗಿದೆ. ಮೈಸೂರು ಪೇಂಟ್ಸ್ & ವಾರ್ನಿಶ್ ಮೂಲಕ ಗೃಹ ಬಳಕೆಯ ಪೇಂಟ್ ತಯಾರಿಕೆಗೂ ಗಮನ ಹರಿಸಲಾಗಿದೆ. ಹುಬ್ಬಳ್ಳಿ ಎನ್ಜಿಇಎಫ್ ದೆಹಲಿಯ ನೂತನ ಸಂಸತ್ ಭವನ ಮತ್ತು ರೈಲ್ವೆ ಇಲಾಖೆಗೆ ತನ್ನ ಟ್ರಾನ್ಸ್-ಫಾರ್ಮರುಗಳನ್ನು ಪೂರೈಸುತ್ತಿದೆ. ಬಿಇಚ್ಇಎಲ್ ಜತೆ ಒಪ್ಪಂದ ಮಾಡಿಕೊಂಡು ಅದನ್ನು ಪುನರುಜ್ಜೀವನ ಗೊಳಿಸುವ ಉದ್ದೇಶ ಇದೆ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸಾರ್ವಜನಿಕರ ಗಮನಕ್ಕೆ: ಈ ದಿನಾಂಕಗಳಂದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸಿದ್ಧರಾಮಯ್ಯ ಸೂಚನೆ

Share. Facebook Twitter LinkedIn WhatsApp Email

Related Posts

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM3 Mins Read

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM1 Min Read

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read
Recent News

ಉದ್ವಿಗ್ನತೆಯನ್ನು ಕಡಿಮೆ ಮಾಡಿ, ಇಲ್ಲದಿದ್ದರೇ ಭಾರಿ ಬೆಲೆ ತೆರಬೇಕಾಗುತ್ತೆ: ಪಾಕ್ ಗೆ ಭಾರತದ ಎಚ್ಚರಿಕೆ | Indo-Pak war

09/05/2025 5:34 PM

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM

ಆಹಾರ ಧಾನ್ಯಗಳ ಕೃತಕ ಅಭಾವ ಸೃಷ್ಠಿಸಿದ್ರೇ ಕಠಿಣ ಕ್ರಮ: ಸಾಕಷ್ಟು ದಾಸ್ತಾನಿದೆ ಎಂದು ಕೇಂದ್ರದ ಸ್ಪಷ್ಟನೆ

09/05/2025 5:13 PM

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM
State News
KARNATAKA

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

By kannadanewsnow0909/05/2025 5:15 PM KARNATAKA 3 Mins Read

ಮಂಡ್ಯ : ಹಲವು ದಶಕಗಳ ಹಿಂದೆ ಕೆಮ್ಮಣ್ಣು ನಾಲೆಯ ನೀರನ್ನು ಪಟ್ಟಣ ಹಾಗೂ ಹಳ್ಳಿಗಳಿಂದ ಬರುತ್ತಿದ್ದ ಜನತೆ ಕುಡಿಯುವ ನೀರನ್ನಾಗಿ…

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.