Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆದಾಯವಿರುವ ಸಂಗಾತಿ ಜೀವನಾಂಶಕ್ಕೆ ಅರ್ಹರಲ್ಲ: ದೆಹಲಿ ಹೈಕೋರ್ಟ್‌

19/10/2025 6:28 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲೂ `ಬಿ-ಖಾತಾ’ ವಿತರಣೆ.!

19/10/2025 6:25 AM

ರಾಜ್ಯ ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ `ಅಪಘಾತ ವಿಮಾ’ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ

19/10/2025 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲೂ `ಬಿ-ಖಾತಾ’ ವಿತರಣೆ.!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲೂ `ಬಿ-ಖಾತಾ’ ವಿತರಣೆ.!

By kannadanewsnow5719/10/2025 6:25 AM

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು, ಕಟ್ಟಡಗಳು ಇನ್ನುಮುಂದೆ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದ್ದಂತೆ ‘ಬಿ-ಖಾತಾ’ ಪಡೆಯಬಹುದು.

ಹೌದು, ಅನಧಿಕೃತ ಸ್ವತ್ತುಗಳನ್ನು ‘ನಮೂನೆ-11ಬಿ’ ರಿಜಿಸ್ಟರ್ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಿದ ಕಾಯಿದೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ನಿಯಮಾವಳಿಗಳನ್ನು ಜಾರಿಗೊಳಿಸಿದೆ.ಇದರಿಂದ ರಾಜ್ಯಾದ್ಯಂತ ಗ್ರಾ.ಪಂ ವ್ಯಾಪ್ತಿಯಲ್ಲಿರುವ 95,75,935 ಅನಧಿಕೃತ ಸ್ವತ್ತುಗಳು ‘ಬಿ-ಖಾತಾ’ ಪಡೆದು ತೆರಿಗೆ ವ್ಯಾಪ್ತಿಗೆ ಸೇರಲು ಅವಕಾಶ ಕಲ್ಪಿಸಿದಂತಾಗಿದೆ.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ʼಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದುʼ ಎಂದು ಘೋಷಿಸಲಾಗಿತ್ತು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199(ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ. ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ನ್ನು ಅಧಿಸೂಚಿಸಲಾಗಿದೆ.

ಗ್ರಾಮ ಪಂಚಾಯಿತಿಯ ಎಲ್ಲಾ ಆಸ್ತಿಗಳ ಕರಡು ಪ್ರತಿಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕ ಒದಗಿಸಿ ತಮ್ಮ ಆಸ್ತಿಗಳ ಮಾಹಿತಿಯನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ, ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಗ್ರಾಮ ಪಂಚಾಯಿತಿಗೆ ಪಾವತಿಸುವ ಮೂಲಕ ದಾಖಲೆ ಪಡೆಯಲು ಹಾಗೂ ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ದಿಗೊಳಿಸುವುದರ ಮೂಲಕ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳಲು ಸಹಕಾರಿಯಾಗಲಿದೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧರಣೆ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ(ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

11ಬಿ ರಿಜಿಸ್ಟರ್ನಡಿ ನೋಂದಣಿ ಬಳಿಕ ಮೊದಲ ವರ್ಷ ದುಪ್ಪಟ್ಟು ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ. ನಂತರದ ವರ್ಷಗಳಲ್ಲಿ ವಾರ್ಷಿಕ ಆಸ್ತಿ ತೆರಿಗೆಯನ್ನಷ್ಟೇ ಸಂಗ್ರಹಿಸಲಾಗುತ್ತದೆ. ‘ಎ-ಖಾತಾ’ ಹಾಗೂ ‘ಬಿ-ಖಾತಾ’ ಸ್ವತ್ತುಗಳಿಗೆ “ಎಲೆಕ್ಟ್ರಾನಿಕ್-ಸ್ವತ್ತು’ (ಇ-ಸ್ವತ್ತು) ವಿತರಣೆ ಪ್ರಕ್ರಿಯೆಯನ್ನೂ ಸರಳಗೊಳಿಸಲಾಗಿದ್ದು, 45 ದಿನಗಳ ಬದಲಿಗೆ 15 ದಿನದಲ್ಲಿ ‘ಇ-ಸ್ವತ್ತು’ ವಿತರಣೆಗೆ ಕ್ರಮ ವಹಿಸಿರುವುದಾಗಿ ಇಲಾಖೆ ಪ್ರಕಟಿಸಿದೆ.

Good news for the rural people of the state: Distribution of `B-Khata' in all Gram Panchayats!
Share. Facebook Twitter LinkedIn WhatsApp Email

Related Posts

ರಾಜ್ಯ ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ `ಅಪಘಾತ ವಿಮಾ’ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ

19/10/2025 6:14 AM1 Min Read

GOOD NEWS: ಬೆಂಗಳೂರಲ್ಲಿ ‘ಸರ್ಕಾರಿ ಜಾಗ’ದಲ್ಲಿನ ಮನೆಗಳಿಗೆ ‘ಬಿ’ ಖಾತೆ ಹೊಂದಿದ್ದರೂ, ಹೊಂದಿರದಿದ್ದರೂ ‘ಎ‌‌’ ಖಾತ ವಿತರಣೆ

19/10/2025 6:10 AM1 Min Read

ಸಾರ್ವಜನಿಕರೇ ಗಮನಿಸಿ : ದೀಪಾವಳಿಯ ಸಂಭ್ರಮದ ನಡುವೆ ಈ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಿ.!

19/10/2025 6:02 AM1 Min Read
Recent News

ಆದಾಯವಿರುವ ಸಂಗಾತಿ ಜೀವನಾಂಶಕ್ಕೆ ಅರ್ಹರಲ್ಲ: ದೆಹಲಿ ಹೈಕೋರ್ಟ್‌

19/10/2025 6:28 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲೂ `ಬಿ-ಖಾತಾ’ ವಿತರಣೆ.!

19/10/2025 6:25 AM

ರಾಜ್ಯ ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ `ಅಪಘಾತ ವಿಮಾ’ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ

19/10/2025 6:14 AM

GOOD NEWS: ಬೆಂಗಳೂರಲ್ಲಿ ‘ಸರ್ಕಾರಿ ಜಾಗ’ದಲ್ಲಿನ ಮನೆಗಳಿಗೆ ‘ಬಿ’ ಖಾತೆ ಹೊಂದಿದ್ದರೂ, ಹೊಂದಿರದಿದ್ದರೂ ‘ಎ‌‌’ ಖಾತ ವಿತರಣೆ

19/10/2025 6:10 AM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲೂ `ಬಿ-ಖಾತಾ’ ವಿತರಣೆ.!

By kannadanewsnow5719/10/2025 6:25 AM KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ…

ರಾಜ್ಯ ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ `ಅಪಘಾತ ವಿಮಾ’ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ : ಸರ್ಕಾರದಿಂದ ಮಹತ್ವದ ಆದೇಶ

19/10/2025 6:14 AM

GOOD NEWS: ಬೆಂಗಳೂರಲ್ಲಿ ‘ಸರ್ಕಾರಿ ಜಾಗ’ದಲ್ಲಿನ ಮನೆಗಳಿಗೆ ‘ಬಿ’ ಖಾತೆ ಹೊಂದಿದ್ದರೂ, ಹೊಂದಿರದಿದ್ದರೂ ‘ಎ‌‌’ ಖಾತ ವಿತರಣೆ

19/10/2025 6:10 AM

ಸಾರ್ವಜನಿಕರೇ ಗಮನಿಸಿ : ದೀಪಾವಳಿಯ ಸಂಭ್ರಮದ ನಡುವೆ ಈ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಿ.!

19/10/2025 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.