Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

22/11/2025 5:08 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

22/11/2025 5:06 PM

VIDEO : ಕೊನೆಯ ನಿಮಿಷದಲ್ಲಿ ಹೊರ ಹಾರಲು ಪ್ರಯತ್ನಿಸಿದ್ರು ಪೈಲಟ್ ; ‘ತೇಜಸ್ ಜೆಟ್’ ಅಪಘಾತದ ಹೊಸ ವೀಡಿಯೊ ಬಹಿರಂಗ

22/11/2025 5:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

By kannadanewsnow0922/11/2025 5:06 PM

ಬೆಂಗಳೂರು : “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು.

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ:

“ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು” ಎಂದು ಬಣ್ಣಿಸಿದರು.

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ

“ನಿಮಗೆ ವಿಶ್ವ ಮೀನುಗಾರಿಕೆ ದಿನದ ಶುಭಾಶಯಗಳು. ನಿಮಗೆ ಒಳ್ಳೆಯದಾಗಲಿ. ಮುಂದಿನ ದಿನಗಳಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ರೂಪಿಸಲಾಗುವುದು. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ತಿಳಿಸಿದರು.

“ನೀವು ಗಂಗಾ ಪುತ್ರರು. ಇಂತಹ ಯೋಗ ಎಲ್ಲರಿಗೂ ಬರುವುದಿಲ್ಲ. ಗಂಗಾ ಪುತ್ರ ಭೀಷ್ಮನ ಪ್ರತಿಜ್ಞೆ ಎಂದರೆ ಅದಕ್ಕೆ ಆದ ಘನತೆ ಇದೆ. ನೀವು ನೀರಿನಲ್ಲಿ ಕೆಲಸ ಮಾಡಿ ಸಮಾಜಕ್ಕೆ ಸೇವೆ ಮಾಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದು ತಿಳಿಸಿದರು.

‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

22/11/2025 5:08 PM1 Min Read

BREAKING : ಯಕ್ಷಗಾನ ಕಲಾವಿದರ ಅವಹೇಳನ ಆರೋಪ : ಪ್ರೊ. ಪುರುಷೋತ್ತಮ ಬಿಳಿಮಲೆ ವಿರುದ್ಧ ದೂರು ದಾಖಲು

22/11/2025 4:55 PM1 Min Read

SHOCKING : ರೈತರೇ ಎಚ್ಚರ : ಕಲಬುರ್ಗಿಯಲ್ಲಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು!

22/11/2025 4:51 PM1 Min Read
Recent News

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

22/11/2025 5:08 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

22/11/2025 5:06 PM

VIDEO : ಕೊನೆಯ ನಿಮಿಷದಲ್ಲಿ ಹೊರ ಹಾರಲು ಪ್ರಯತ್ನಿಸಿದ್ರು ಪೈಲಟ್ ; ‘ತೇಜಸ್ ಜೆಟ್’ ಅಪಘಾತದ ಹೊಸ ವೀಡಿಯೊ ಬಹಿರಂಗ

22/11/2025 5:06 PM

BREAKING : ಯಕ್ಷಗಾನ ಕಲಾವಿದರ ಅವಹೇಳನ ಆರೋಪ : ಪ್ರೊ. ಪುರುಷೋತ್ತಮ ಬಿಳಿಮಲೆ ವಿರುದ್ಧ ದೂರು ದಾಖಲು

22/11/2025 4:55 PM
State News
KARNATAKA

ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

By kannadanewsnow0522/11/2025 5:08 PM KARNATAKA 1 Min Read

ಚಾಮರಾಜನಗರ : ಬೆಂಗಳೂರು ರಾಬರಿ ಪ್ರಕರಣ ತನಿಖೆ ನಡೆಯುವ ಹೊತ್ತಲ್ಲೇ, ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

22/11/2025 5:06 PM

BREAKING : ಯಕ್ಷಗಾನ ಕಲಾವಿದರ ಅವಹೇಳನ ಆರೋಪ : ಪ್ರೊ. ಪುರುಷೋತ್ತಮ ಬಿಳಿಮಲೆ ವಿರುದ್ಧ ದೂರು ದಾಖಲು

22/11/2025 4:55 PM

SHOCKING : ರೈತರೇ ಎಚ್ಚರ : ಕಲಬುರ್ಗಿಯಲ್ಲಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು!

22/11/2025 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.