Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಸ್ಪೋಟದ ಬೆನ್ನಲ್ಲೇ ರಾಜಸ್ಥಾನದಲ್ಲಿ ಬರೋಬ್ಬರಿ 150 ಕೆಜಿ ಅಮೋನಿಯಂ ನೈಟ್ರೇಟ್ ಸ್ಪೋಟಕ ವಶಕ್ಕೆ

31/12/2025 4:11 PM

BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ

31/12/2025 4:07 PM

BREAKING: ಇಂದೋರ್ ನಲ್ಲಿ ಕಲುಷಿತ ನೀರು ಸೇವಿಸಿ 7 ಮಂದಿ ಸಾವು, 100ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

31/12/2025 3:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ
KARNATAKA

BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ

By kannadanewsnow0931/12/2025 4:07 PM

ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ, ಅಧಿಭೋಗ ಪ್ರಮಾಣ ಪತ್ರ ( Occupancy Certificate) ಪಡೆಯುವುದರಿಂದ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗುವ ಕಟ್ಟಡಗಳಿಗೆ ಅಥವಾ ಅಸ್ತಿತ್ವದಲ್ಲಿನ ಕಟ್ಟಡಗಳ ಬದಲಾವಣೆಗಳಿಗೆ ಸಂಬಂಧಿಸಿದಂತೆ ಕಾಮಗಾರಿ ಪೂರ್ಣಗೊಂಡ ನಂತರ ಪ್ರಾಧಿಕಾರಕ್ಕೆ ಅರ್ಹನಾದ ವಾಸ್ತುಶಿಲ್ಪಿ/ಪಟ್ಟಿಯಲ್ಲಿನ (empanelled) ಇಂಜಿನಿಯರ್/ ಮೇಲ್ವಿಚಾರಕರಿಂದ ಕಟ್ಟಡ ಪೂರ್ಣಗೊಂಡ ಪ್ರಮಾಣ ಪತ್ರವನ್ನು ಪಡೆದ ನಂತರ ಪಂಚಾಯತಿ ಅಭಿವೃದ್ಧಿ ಅಧಿಕಾರಿಯು ಸ್ವಾಧೀನ/ಅಧಿಭೋಗದಾರಿಕೆ ಪಮಾಣ ಪತ್ರ ವಿತರಿಸುವ ಪೂರ್ವದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಗ್ರಾಮ ಪಂಚಾಯತಿಯಿಂದ ವಿತರಣೆ ಮಾಡಲಾದ ಲೈಸನ್ಸ್ ಅನುಮೋದಿಸಲಾದ ಕಟ್ಟಡ ನಕ್ಷೆ ಹಾಗೂ ಅಂದಾಜು ಪಟ್ಟಿಗಳಂತೆ ಕಟ್ಟಡ ನಿರ್ಮಾಣವಾಗಿರುವ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಗಳೊಂದಿಗೆ ಜಂಟಿಯಾಗಿ ಪರಿಶೀಲಿಸಿ, ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ನಕ್ಷೆಯನುಸಾರ ಕಾಮಗಾರಿ/ ಕಟ್ಟಡ ಪೂರ್ಣವಾಗಿರುವ ಬಗ್ಗೆ ಕಡ್ಡಾಯವಾಗಿ ತಾಂತ್ರಿಕ ಅಭಿಪ್ರಾಯವನ್ನು ಪಡೆದು, ಈ ನಿರ್ಮಾಣವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯತಿಗಳು, ತಾಲ್ಲೂಕು ಪಂಚಾಯತಿಗಳ ಮತ್ತು ಗ್ರಾಮ ಪಂಚಾಯತಿಗಳ ನಿಯಂತ್ರಣ) ಮಾದರಿ ಉಪ ವಿಧಿಗಳು, 2015 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪಕರಣ 64 (5-ಎ) ರಲ್ಲಿನ ಷರತ್ತುಗಳನ್ವಯ ದೃಢೀಕರಿಸಿಕೊಂಡ ನಂತರವಷ್ಟೆ ಸ್ವಾಧೀನ/ಅಧಿಭೋಗದಾರಿಕೆ ಪ್ರಮಾಣ ಪತ್ರವನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ವಿವರಗಳೊಂದಿಗೆ ಸಂಬಂಧಿಸಿದ ಅಧಿಭೋಗದಾರನಿಗೆ ವಿತರಿಸಲು ಆದೇಶಿಸಲಾಗಿದೆ ಎಂದಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯತಿಗಳು, ತಾಲ್ಲೂಕು ಪಂಚಾಯತಿಗಳ ಮತ್ತು ಗ್ರಾಮ ಪಂಚಾಯತಿಗಳ ನಿಯಂತ್ರಣ) ಮಾದರಿ ಉಪ ವಿಧಿಗಳು, 2015 ಕ್ಕೆ ತಿದ್ದುಪಡಿ ತರಲಾಗಿದೆ. ಈ ತಿದ್ದುಪಡಿಯ ಉಪ ವಿಧಿ 13ರ ಪರಂತುವಿನನ್ವಯ ಸರ್ಕಾರವು ಅಧಿಭೋಗ ಪ್ರಮಾಣ ಪತ್ರವನ್ನು ಪಡೆಯುವುದರಿಂದ ವಿನಾಯಿತಿ ನೀಡಬಹುದಾದ ಕಟ್ಟಡದ ಪವರ್ಗವನ್ನು ಅಧಿಸೂಚಿಸಲು ಉಪಬಂಧ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯತಿಗಳು, ತಾಲ್ಲೂಕು ಪಂಚಾಯತಿಗಳ ಮತ್ತು ಗ್ರಾಮ ಪಂಚಾಯತಿಗಳ ನಿಯಂತ್ರಣ) (ಎರಡನೇ ತಿದ್ದುಪಡಿ) ಮಾದರಿ ಉಪ ವಿಧಿಗಳು, 2025ರ ಉಪ ವಿಧಿ 13ರ ಅವಕಾಶ ಹಾಗೂ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯು ಸ್ಥಳ ಪರಿಶೀಲನೆ, ನಿರ್ಮಾಣ ಮಾಡಿರುವ ಕಟ್ಟಡ ಹಾಗೂ ಅನುಮೋದಿತ ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆ ಮುಂತಾದವುಗಳನ್ನು ಒಳಗೊಂಡಿರುವುದರಿಂದ, ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳಿಗೆ ಹೆಚ್ಚಿನ ಕೆಲಸದ ಹೊರೆ ಉಂಟಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕ ಅನುಕೂಲವನ್ನು ಗಮನದಲ್ಲಿರಿಸಿಕೊಂಡು ಮಾದರಿ ಉಪ ವಿಧಿಗಳ ಉಪ ವಿಧಿ 13ರಲ್ಲಿ ಸರ್ಕಾರಕ್ಕಿರುವ ಅಧಿಕಾರದಂತೆ 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಲಾಗಿರುವ ನೆಲ +2 ಅಂತಸ್ತು ಅಥವಾ ಸ್ಟೀಲ್ಸ್ +3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ / ಅಧಿಭೋಗ ಪ್ರಮಾಣ ಪತ್ರ (Occupancy Certificate) ಪಡೆಯಲು ಸಾರ್ವಜನಿಕರಿಗೆ ವಿನಾಯಿತಿ ನೀಡುವುದರಿಂದ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂಬುವುದನ್ನು ಮನಗಂಡು ಆದೇಶ ಹೊರಡಿಸಲು ನಿರ್ಧರಿಸಿದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯತಿಗಳು, ತಾಲ್ಲೂಕು ಪಂಚಾಯತಿಗಳ ಮತ್ತು ಗ್ರಾಮ ಪಂಚಾಯತಿಗಳ ನಿಯಂತ್ರಣ) (ಎರಡನೇ ತಿದ್ದುಪಡಿ) ಮಾದರಿ ಉಪ ವಿಧಿಗಳು, 2025ರ ಉಪ ವಿಧಿ 13 ರಡಿ ಸರ್ಕಾರಕ್ಕೆ ಪುದತ್ತವಾಗಿರುವ ಅಧಿಕಾರದನ್ವಯ 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಲಾಗಿರುವ ನೆಲ +2 ಅಂತಸ್ತು ಅಥವಾ ಸ್ಟೀಲ್ +3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ / ಅಧಿಭೋಗ ಪ್ರಮಾಣ ಪತ್ರ (Occupancy Certificate) ಪಡೆಯವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ. ಈ ಆದೇಶವನ್ನು ಸಚಿವ ಸಂಪುಟದ ಪ್ರಕರಣ ಸಂಖ್ಯೆ:ಸಿ.1047/2025, ದಿನಾಂಕ:11.12.2025 ರನ್ವಯ ಹೊರಡಿಸಿದೆ ಎಂದು ಹೇಳಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

Share. Facebook Twitter LinkedIn WhatsApp Email

Related Posts

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM2 Mins Read

ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

31/12/2025 3:42 PM2 Mins Read

ಸಾರ್ವಜನಿಕರೇ ಗಮನಿಸಿ  : ಈ 5 ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳಿ.!

31/12/2025 10:03 AM2 Mins Read
Recent News

ದೆಹಲಿ ಸ್ಪೋಟದ ಬೆನ್ನಲ್ಲೇ ರಾಜಸ್ಥಾನದಲ್ಲಿ ಬರೋಬ್ಬರಿ 150 ಕೆಜಿ ಅಮೋನಿಯಂ ನೈಟ್ರೇಟ್ ಸ್ಪೋಟಕ ವಶಕ್ಕೆ

31/12/2025 4:11 PM

BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ

31/12/2025 4:07 PM

BREAKING: ಇಂದೋರ್ ನಲ್ಲಿ ಕಲುಷಿತ ನೀರು ಸೇವಿಸಿ 7 ಮಂದಿ ಸಾವು, 100ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

31/12/2025 3:53 PM

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM
State News
KARNATAKA

BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ

By kannadanewsnow0931/12/2025 4:07 PM KARNATAKA 2 Mins Read

ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ…

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM

ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

31/12/2025 3:42 PM

ಸಾರ್ವಜನಿಕರೇ ಗಮನಿಸಿ  : ಈ 5 ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಮೊಬೈಲ್ ನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳಿ.!

31/12/2025 10:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.