Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Sarvam Kaze:ಆಲಿಸುವ ಮತ್ತು ಪ್ರತಿಕ್ರಿಯಿಸುವ ಭಾರತ ನಿರ್ಮಿತ AI ಚಾಲಿತ ಸ್ಮಾರ್ಟ್ ಕನ್ನಡಕವನ್ನು ಪರಿಶೀಲಿಸಿದ ಪ್ರಧಾನಿ ಮೋದಿ !

18/02/2026 7:25 AM

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

18/02/2026 7:25 AM

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

By kannadanewsnow5727/11/2025 5:45 AM

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಈಗಾಗಲೇ 3.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದವುಗಳನ್ನು ಸಕ್ರಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ತಾವೇ ಮೂಲ ಸೌಕರ್ಯ ಕಲ್ಪಿಸಿಕೊಳ್ಳುವವರ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುತ್ತಿದೆ,” ಎಂದರು.

“ವಿದ್ಯುತ್‌ ಜಾಲಕ್ಕೆ ಅಕ್ರಮವಾಗಿ ಹುಕ್‌ ಹಾಕಿ ವಿದ್ಯುತ್ ಪಡೆಯುವುದರಿಂದ ಲೋಡ್ ಹೆಚ್ಚಾಗಿ ಪರಿವರ್ತಕಗಳು ಹಾಳಾಗುತ್ತಿವೆ. ಇದನ್ನು ತಡೆಯುವ ಕೆಲಸ ಮಾಡಬೇಕು. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅದಕ್ಕೇ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು,” ಎಂದು ಸಚಿವರು ಎಚ್ಚರಿಕೆ ನೀಡಿದರು.

“ರೈತರಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್‌ ನೀಡುವ ನಿಟ್ಟಿನಲ್ಲಿ ಕುಸುಮ್‌- ಬಿ ಹಾಗೂ ಕುಸುಮ್‌- ಸಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಕುಸುಮ್‌- ಬಿ ಯೋಜನೆಗೆ ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ. ಸೋಲಾರ್‌ ಪಂಪ್‌ಸೆಟ್‌ಗಳು ಸರಿಯಾಗಿ ಕೆಲಸ ಮಾಡುವುದಿಲ್ಲ ಎನ್ನುವ ಅನುಮಾನ ಬೇಡ. 10 ಹೆಚ್‌.ಪಿ. ವರೆಗೂ ಸೋಲಾರ್ ಪಂಪ್ ಸೆಟ್ ಗಳನ್ನು ಬಳಸಬಹುದಾಗಿದೆ,” ಎಂದು ಹೇಳಿದರು.

“ತಾಂಡಾ, ದೊಡ್ಡಿಗಳಲ್ಲಿ ಅಕ್ರಮ ವಿದ್ಯುತ್‌ ಸಂಪರ್ಕ ಹೆಚ್ಚಿವೆ. ಇವರಿಗೆ ಅಧಿಕೃತವಾಗಿ ವಿದ್ಯುತ್‌ ಪಡೆಯುವಂತೆ ಕ್ರಮ ವಹಿಸಬೇಕು. ಆದರೆ, ಏಕಾಏಕಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಬಾರದು,” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಸಮರ್ಪಕ ವಿದ್ಯುತ್ ಪೂರೈಸಲು ಪ್ರಸಕ್ತ ವರ್ಷ 100 ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ವರ್ಷವೂ ಹೊಸ ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು. ಹೊಸ ಸಬ್ ಸ್ಟೇಷನ್‌ ನಿರ್ಮಾಣಕ್ಕೂ ಮುನ್ನ ಲಿಂಕ್‌ಲೈನ್‌ ಸರಿಯಾಗಿ ಮಾಡಬೇಕು,” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಹಾಳಾದ ವಿದ್ಯುತ್‌ ಪರಿವರ್ತಕಗಳನ್ನು ಬದಲಿಸುವಾಗ ಇಲಾಖೆಯ ವಾಹನದಲ್ಲಿಯೇ ಸಾಗಿಸಿ ಅಳವಡಿಸಿಬೇಕು. ರೈತರೇ ತಮ್ಮ ವಾಹನದಲ್ಲಿ ಟಿ.ಸಿ ಗಳನ್ನು ತರುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಜತೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು,” ಎಂದು ಹೇಳಿದರು.

ಸಭೆಯಲ್ಲಿ ಸಂಸದ ಇ.ತುಕಾರಾಮ್‌ , ಶಾಸಕರಾದ ಹೆಚ್‌. ಆರ್‌. ಗವಿಯಪ್ಪ, ಕೆ. ನೇಮಿರಾಜ್‌ ನಾಯ್ಕ, ಡಾ. ಎನ್‌. ಟಿ. ಶ್ರೀನಿವಾಸ್‌, ಎಲ್‌. ಕೃಷ್ಣ ನಾಯ್ಕ್‌, ಲತಾ ಮಲ್ಲಿಕಾರ್ಜುನ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಕವಿತಾ ಎಸ್‌ ಮನ್ನಿಕೇರಿ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೈ ಸೇರಿದಂತೆ ಹಲವರು ಇದ್ದರು.

110/11 ವಿದ್ಯುತ್ ಉಪಕೇಂದ್ರ ಲೋಕಾರ್ಪಣೆ

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೂ ಮನ್ನ ಸಚಿವ ಕೆ.ಜೆ.ಜಾರ್ಜ್ ಅವರು, ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಬೈಲೊದ್ದಿಗೆರೆ ಗ್ರಾಮದಲ್ಲಿ ಹೊಸ ವಿದ್ಯುತ್ ಉಪ ಕೇಂದ್ರವನ್ನು ಉದ್ಘಾಟಿಸಿದರಲ್ಲದೆ, ನಾಗೇನಹಳ್ಳಿ ಗ್ರಾಮದ ಬಳಿ 22.86 ಕೋಟಿ ರೂ., ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ 27.65 ಕೋಟಿ ರೂ. ವೆಚ್ಚದ ಎರಡು 110/11 ಕೆ.ವಿ. ವಿದ್ಯುತ್ ಉಪ ಕೇಂದ್ರ, ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಬೆಳಗಟ್ಟ ಬಳಿ 22.47 ಕೋಟಿ ರೂ. ವೆಚ್ಚದ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದ ಭೂಮಿಪೂಜೆ ನೆರವೇರಿಸಿದರು.

Good news for the state's farmers: 3.5 lakh 'Agricultural Pump Sets' have been approved!
Share. Facebook Twitter LinkedIn WhatsApp Email

Related Posts

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

18/02/2026 7:25 AM6 Mins Read

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM3 Mins Read

BIG NEWS : ರಾಜ್ಯದ `ಆರೋಗ್ಯ ಕವಚದ ಆಂಬುಲೆನ್ಸ್ ಚಾಲಕ’ರಿಗೆ ಬೋನಸ್ : ಸರ್ಕಾರದಿಂದ ಮಹತ್ವದ ಘೋಷಣೆ

18/02/2026 6:58 AM4 Mins Read
Recent News

Sarvam Kaze:ಆಲಿಸುವ ಮತ್ತು ಪ್ರತಿಕ್ರಿಯಿಸುವ ಭಾರತ ನಿರ್ಮಿತ AI ಚಾಲಿತ ಸ್ಮಾರ್ಟ್ ಕನ್ನಡಕವನ್ನು ಪರಿಶೀಲಿಸಿದ ಪ್ರಧಾನಿ ಮೋದಿ !

18/02/2026 7:25 AM

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

18/02/2026 7:25 AM

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM

ಆಸ್ಟ್ರೇಲಿಯಾ, ಫ್ರಾನ್ಸ್ ಆಯ್ತು, ಈಗ ಭಾರತದ ಸರದಿ: ಅಪ್ರಾಪ್ತರಿಗೆ ಜಾಲತಾಣದ ಪ್ರವೇಶ ಬಂದ್?

18/02/2026 7:08 AM
State News
KARNATAKA

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

By kannadanewsnow0918/02/2026 7:25 AM KARNATAKA 6 Mins Read

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್…

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM

BIG NEWS : ರಾಜ್ಯದ `ಆರೋಗ್ಯ ಕವಚದ ಆಂಬುಲೆನ್ಸ್ ಚಾಲಕ’ರಿಗೆ ಬೋನಸ್ : ಸರ್ಕಾರದಿಂದ ಮಹತ್ವದ ಘೋಷಣೆ

18/02/2026 6:58 AM

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

18/02/2026 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.