Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

26/11/2025 6:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ

26/11/2025 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

By kannadanewsnow5726/11/2025 6:15 AM

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಈಗಾಗಲೇ 3.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದವುಗಳನ್ನು ಸಕ್ರಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ತಾವೇ ಮೂಲ ಸೌಕರ್ಯ ಕಲ್ಪಿಸಿಕೊಳ್ಳುವವರ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುತ್ತಿದೆ,” ಎಂದರು.

“ವಿದ್ಯುತ್‌ ಜಾಲಕ್ಕೆ ಅಕ್ರಮವಾಗಿ ಹುಕ್‌ ಹಾಕಿ ವಿದ್ಯುತ್ ಪಡೆಯುವುದರಿಂದ ಲೋಡ್ ಹೆಚ್ಚಾಗಿ ಪರಿವರ್ತಕಗಳು ಹಾಳಾಗುತ್ತಿವೆ. ಇದನ್ನು ತಡೆಯುವ ಕೆಲಸ ಮಾಡಬೇಕು. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅದಕ್ಕೇ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು,” ಎಂದು ಸಚಿವರು ಎಚ್ಚರಿಕೆ ನೀಡಿದರು.

“ರೈತರಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್‌ ನೀಡುವ ನಿಟ್ಟಿನಲ್ಲಿ ಕುಸುಮ್‌- ಬಿ ಹಾಗೂ ಕುಸುಮ್‌- ಸಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಕುಸುಮ್‌- ಬಿ ಯೋಜನೆಗೆ ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ. ಸೋಲಾರ್‌ ಪಂಪ್‌ಸೆಟ್‌ಗಳು ಸರಿಯಾಗಿ ಕೆಲಸ ಮಾಡುವುದಿಲ್ಲ ಎನ್ನುವ ಅನುಮಾನ ಬೇಡ. 10 ಹೆಚ್‌.ಪಿ. ವರೆಗೂ ಸೋಲಾರ್ ಪಂಪ್ ಸೆಟ್ ಗಳನ್ನು ಬಳಸಬಹುದಾಗಿದೆ,” ಎಂದು ಹೇಳಿದರು.

“ತಾಂಡಾ, ದೊಡ್ಡಿಗಳಲ್ಲಿ ಅಕ್ರಮ ವಿದ್ಯುತ್‌ ಸಂಪರ್ಕ ಹೆಚ್ಚಿವೆ. ಇವರಿಗೆ ಅಧಿಕೃತವಾಗಿ ವಿದ್ಯುತ್‌ ಪಡೆಯುವಂತೆ ಕ್ರಮ ವಹಿಸಬೇಕು. ಆದರೆ, ಏಕಾಏಕಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಬಾರದು,” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಸಮರ್ಪಕ ವಿದ್ಯುತ್ ಪೂರೈಸಲು ಪ್ರಸಕ್ತ ವರ್ಷ 100 ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ವರ್ಷವೂ ಹೊಸ ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು. ಹೊಸ ಸಬ್ ಸ್ಟೇಷನ್‌ ನಿರ್ಮಾಣಕ್ಕೂ ಮುನ್ನ ಲಿಂಕ್‌ಲೈನ್‌ ಸರಿಯಾಗಿ ಮಾಡಬೇಕು,” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಹಾಳಾದ ವಿದ್ಯುತ್‌ ಪರಿವರ್ತಕಗಳನ್ನು ಬದಲಿಸುವಾಗ ಇಲಾಖೆಯ ವಾಹನದಲ್ಲಿಯೇ ಸಾಗಿಸಿ ಅಳವಡಿಸಿಬೇಕು. ರೈತರೇ ತಮ್ಮ ವಾಹನದಲ್ಲಿ ಟಿ.ಸಿ ಗಳನ್ನು ತರುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಜತೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು,” ಎಂದು ಹೇಳಿದರು.

ಸಭೆಯಲ್ಲಿ ಸಂಸದ ಇ.ತುಕಾರಾಮ್‌ , ಶಾಸಕರಾದ ಹೆಚ್‌. ಆರ್‌. ಗವಿಯಪ್ಪ, ಕೆ. ನೇಮಿರಾಜ್‌ ನಾಯ್ಕ, ಡಾ. ಎನ್‌. ಟಿ. ಶ್ರೀನಿವಾಸ್‌, ಎಲ್‌. ಕೃಷ್ಣ ನಾಯ್ಕ್‌, ಲತಾ ಮಲ್ಲಿಕಾರ್ಜುನ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಕವಿತಾ ಎಸ್‌ ಮನ್ನಿಕೇರಿ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೈ ಸೇರಿದಂತೆ ಹಲವರು ಇದ್ದರು.

110/11 ವಿದ್ಯುತ್ ಉಪಕೇಂದ್ರ ಲೋಕಾರ್ಪಣೆ

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೂ ಮನ್ನ ಸಚಿವ ಕೆ.ಜೆ.ಜಾರ್ಜ್ ಅವರು, ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಬೈಲೊದ್ದಿಗೆರೆ ಗ್ರಾಮದಲ್ಲಿ ಹೊಸ ವಿದ್ಯುತ್ ಉಪ ಕೇಂದ್ರವನ್ನು ಉದ್ಘಾಟಿಸಿದರಲ್ಲದೆ, ನಾಗೇನಹಳ್ಳಿ ಗ್ರಾಮದ ಬಳಿ 22.86 ಕೋಟಿ ರೂ., ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ 27.65 ಕೋಟಿ ರೂ. ವೆಚ್ಚದ ಎರಡು 110/11 ಕೆ.ವಿ. ವಿದ್ಯುತ್ ಉಪ ಕೇಂದ್ರ, ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಬೆಳಗಟ್ಟ ಬಳಿ 22.47 ಕೋಟಿ ರೂ. ವೆಚ್ಚದ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದ ಭೂಮಿಪೂಜೆ ನೆರವೇರಿಸಿದರು.

Good news for the state's farmers: 3.5 lakh 'Agricultural Pump Sets' have been approved!
Share. Facebook Twitter LinkedIn WhatsApp Email

Related Posts

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

26/11/2025 6:21 AM2 Mins Read

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM2 Mins Read

GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

26/11/2025 5:50 AM2 Mins Read
Recent News

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

26/11/2025 6:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ

26/11/2025 6:14 AM

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM
State News
KARNATAKA

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

By kannadanewsnow5726/11/2025 6:21 AM KARNATAKA 2 Mins Read

ಬೆಳಗಾವಿ : ಅತ್ಯಂತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ರಾಮದುರ್ಗದಲ್ಲಿ ಅಂತ್ಯಕ್ರಿಯೆ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM

GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

26/11/2025 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.